ಅರಮನೆ ಅಂಗಳಕ್ಕೆ ಹೆಜ್ಜೆ ಹಾಕಿದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ
Recommended Video
ಮೈಸೂರು, ಸೆಪ್ಟೆಂಬರ್.05: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನಲೆಯಲ್ಲಿ ವೀರನಹೊಸಹಳ್ಳಿಯಿಂದ ಸೆ.2 ರಂದು ಗಜಪಡೆ ಮೈಸೂರಿಗೆ ಆಗಮಿಸಿದ್ದು, ಆಶೋಕಪುರಂನ ಅರಣ್ಯ ಭವನದಲ್ಲಿ ಬೀಡು ಬಿಟ್ಟಿದ್ದವು.
ಇಂದು ಮಂಗಳವಾರ ಅರಣ್ಯ ಭವನದಿಂದ ಅರಮನೆ ಅಂಗಳಕ್ಕೆ ಗಜಪಡೆ ಹೆಜ್ಜೆ ಹಾಕಿದ್ದು, ಜಿಲ್ಲಾಡಳಿತ ಹಾಗೂ ಅರಮನೆ ಮಂಡಳಿಯಿಂದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ ದೊರೆತಿದೆ.
ದಸರೆಯಲ್ಲಿ ಭಾಗವಹಿಸುವ ಮೊದಲ ತಂಡದ ಆನೆಗಳ ಸಂಪೂರ್ಣ ವಿವರ
ಅಂಬಾವಿಲಾಸ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಗಿದೆ.
ವೈಭವದ ದಸರೆಗೆ ಮೊದಲ ಮುನ್ನುಡಿ: ಗಜಪಡೆಗೆ ಭವ್ಯ ಸ್ವಾಗತ
ಅರ್ಜುನ, ಗೋಪಿ, ಧನಂಜಯ, ವಿಕ್ರಮ, ವರಲಕ್ಷ್ಮಿ ಹಾಗೂ ಚೈತ್ರ ಆನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಗಜಪಡೆಗೆ ವಿಶೇಷ ಪೂಜೆ ಮಾಡಲಾಯಿತು.
ವೇದ ಘೋಷಗಳ ಮೂಲಕ ಗಜಪಡೆಗೆ ಸಾಂಪ್ರದಾಯಕ ಸ್ವಾಗತ ಕೋರಲಾಗಿದ್ದು, ಮೈಸೂರಿನ ಚಾಮುಂಡಿಬೆಟ್ಟದ ಪ್ರಧಾನ ಅರ್ಚಕರಾದ ಡಾ.ಶಶಿಶೇಖರ್ ದೀಕ್ಷಿತ್ ರಿಂದ ಸಾಂಪ್ರದಾಯಕ ಪೂಜೆ ನಡೆಯಿತು.
ದಸರೆಗೆ ಮಹತ್ವದ ನಿರ್ಧಾರ: ವೀರನಹೊಸಹಳ್ಳಿಯಿಂದ ಹೊರಡಲಿದೆ ಗಜಪಡೆ
ಮೊದಕ ,ಕಬ್ಬು,ಬೆಲ್ಲ,ಭತ್ತ,ಎಳ್ಳು ತಿನ್ನಿಸುವ ಮೂಲಕ ಅರಮನೆಗೆ ಸ್ವಾಗತಿಸಲಾಯಿತು.