ರಾಹುಲ್ ಗಾಂಧಿಯೇ ಮುಂದಿನ ಪ್ರಧಾನ ಮಂತ್ರಿ: ಈಶ್ವರ ಖಂಡ್ರೆ
Recommended Video
ಮೈಸೂರು, ಜುಲೈ.17: ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಇಂದು ಮಂಗಳವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡೇಶ್ವರಿ ದರ್ಶನ ಪಡೆದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ನಂತರ ಮೊದಲ ಬಾರಿಗೆ ಕುಟುಂಬ ಸಮೇತರಾಗಿ ಬೆಟ್ಟಕ್ಕೆ ಬಂದ ಈಶ್ವರ ಖಂಡ್ರೆ ನಾಡ ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಿದರು.
ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿಯೇ ಮುಂದಿನ ಪ್ರಧಾನ ಮಂತ್ರಿ. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಬರುತ್ತದೆ.
ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿದ ಕೆಪಿಸಿಸಿ ಅಧ್ಯಕ್ಷರು
ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ಅದರಲ್ಲಿ ಯಾವುದೇ ಅನುಮಾನಬೇಡ ಎಂದು ವಿಶ್ವಾಸವ್ಯಕ್ತಪಡಿಸಿದರು. ನಮ್ಮ ಪಕ್ಷದ ಅಧ್ಯಕ್ಷರು ನನ್ನ ಮೇಲೆ ನಂಬಿಕೆ ಇಟ್ಟು, ಈ ಸ್ಥಾನ ನೀಡಿದ್ದಾರೆ. ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತೇನೆ.
ದುಷ್ಟ ಶಕ್ತಿಗಳ ಕಣ್ಣು ನಮ್ಮ ಪಕ್ಷದ ಮೇಲೆ ಬೀಳಬಾರದೆಂದು ಬೆಟ್ಟಕ್ಕೆ ಬಂದಿದ್ದು, ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ ಎಂದರು.
ಕೂಸಿಗೆ ಮುನ್ನವೇ ಕುಲಾವಿ: ಮೋದಿ ವಿರುದ್ದ ಪಿಎಂ ರೇಸಿಗೆ ಮತ್ತೊಂದು ಹೆಸರು
ಬೀದರ್ ಜಿಲ್ಲೆಯ ಭಾಲ್ಕಿ ವಿಧಾನಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ 56 ವರ್ಷದ ಖಂಡ್ರೆ ಅವರು ಬಹುಪಾಲು ಹಿರಿಯ ನಾಯಕರೇ ತುಂಬಿರುವ ಕಾಂಗ್ರೆಸ್ ನಲ್ಲಿ ಕಡಿಮೆ ವಯಸ್ಸಿನ ಮುಖಂಡರು.
ಕಳೆಗುಂದಿರುವ ಕಾಂಗ್ರೆಸ್ ಪಕ್ಷದ ವರ್ಚಸ್ಸನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್, ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಅವರನ್ನು ನೇಮಕ ಮಾಡಿದೆ.