ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ತವರಲ್ಲಿ ಮುಂದುವರೆದ ರೈತರ ಆತ್ಮಹತ್ಯೆ

By ಬಿಎಂ ಲವಕುಮಾರ್
|
Google Oneindia Kannada News

ಮೈಸೂರು, ಫೆಬ್ರವರಿ 17 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಪ್ರಿಯ ಬಜೆಟ್ ಮಂಡಿಸಿದ ಬೆನ್ನಲ್ಲೇ ಅವರ ತವರು ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತನೊಬ್ಬ ವಿಷದ ಗುಳಿಗೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಚನ್ನಸೋಗೆ ಗ್ರಾಮದಲ್ಲಿ ನಡೆದಿದೆ.

ಚನ್ನಸೋಗೆ ಗ್ರಾಮದ ನಿವಾಸಿ ದಿವಂಗತ ಚಿಕ್ಕಣ್ಣರವರ ಪುತ್ರ ಚಂದ್ರಪ್ಪ(38) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ರೈತ. ಈತ ಗುರುವಾರ ರಾತ್ರಿ ವಿಷದ ಗುಳಿಗೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.

5 ಎಕರೆ ಜಮೀನಿಗೆ 4 ಲಕ್ಷ ರೂ ಪರಿಹಾರ! ಕಂಗೆಟ್ಟ ರೈತ ಆತ್ಮಹತ್ಯೆ5 ಎಕರೆ ಜಮೀನಿಗೆ 4 ಲಕ್ಷ ರೂ ಪರಿಹಾರ! ಕಂಗೆಟ್ಟ ರೈತ ಆತ್ಮಹತ್ಯೆ

ರೈತ ಚಂದ್ರಪ್ಪನಿಗೆ ಗ್ರಾಮದಲ್ಲಿ 2.11 ಎಕರೆ ಜಮೀನಿದ್ದು, ಈ ಜಮೀನಿನಲ್ಲಿ ಕೃಷಿ ಮಾಡುವ ಸಲುವಾಗಿ ಹುಣಸೂರು ಕೆನರಾ ಬ್ಯಾಂಕಿನಿಂದ 4.30 ಲಕ್ಷ ರೂ. ಸಾಲ ಮಾಡಿದ್ದರಲ್ಲದೆ, ಕೈಸಾಲವಾಗಿ ಬೇರೆ, ಬೇರೆ ಕಡೆಗಳಲ್ಲಿ ಸುಮಾರು 2 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

Farmer Suicide continues in CM district

ಆದರೆ ಸಮರ್ಪಕವಾಗಿ ಮಳೆಯಾಗದ ಕಾರಣದಿಂದಾಗಿ ಕೃಷಿ ಫಸಲು ಕೈಗೆ ಬಾರದೆ ನಷ್ಟ ಹೊಂದಿದ ಪರಿಣಾಮ ಸಾಲ ತೀರಿಸಲು ಸಾಧ್ಯವಾಗದೆ ಕಂಗಲಾಗಿದ್ದರಲ್ಲದೆ, ಸಾಲಗಾರರ ಕಾಟವೂ ಹೆಚ್ಚಾಗಿತ್ತು ಎನ್ನಲಾಗಿದೆ.

ಈ ನಡುವೆ ಸಾಲಗಾರರ ಕಾಟದಿಂದ ಬೇಸತ್ತಿದ್ದ ಚಂದ್ರಪ್ಪ ಗುರುವಾರ ರಾತ್ರಿ ಕೀಟನಾಶಕ ಗುಳಿಗೆಗಳನ್ನು ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದರು. ಇದನ್ನು ನೋಡಿದ ಮನೆಯವರು ತಕ್ಷಣ ಹುಣಸೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.

ಮೃತರಿಗೆ ಪತ್ನಿ ಮತ್ತು ಇಬರು ಮಕ್ಕಳಿದ್ದಾರೆ. ಈ ಸಂಬಂದ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Day After Chief minister Siddaramaiah's popular Budget farmer get Suicide in Cm district Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X