ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಶ್ರೀಗಂಧ ಮರಗಳ್ಳರ ಮೇಲೆ ದಾಳಿ: ಒಬ್ಬ ಸಾವು

By Ananthanag
|
Google Oneindia Kannada News

ಮೈಸೂರು, ಫೆಬ್ರವರಿ 11: ಶ್ರೀಗಂಧ ಮರವನ್ನು ಕತ್ತರಿಸಿ ಕಳವು ಮಾಡಲು ಯತ್ನಿಸುತ್ತಿದ್ದವರ ಮೇಲೆ ಅರಣ್ಯ ಇಲಾಖೆ ದಾಳಿ ನಡೆಸಿದೆ. ಗುಂಡೇಟಿನಿಂದ ಶ್ರೀಗಂಧ ಚೋರನೊಬ್ಬ ಅಸುನೀಗಿದ್ದಾನೆ.

ಮೈಸೂರಿನ ಲಿಂಗಾಬುದಿ ಕೆರೆಯ ಆವರಣದಲ್ಲಿ ನಿನ್ನೆ(ಶುಕ್ರವಾರ) ಮಧ್ಯರಾತ್ರಿ ಐದಕ್ಕೂ ಹೆಚ್ಚು ಮಂದಿ ಮರಗಳ್ಳರ ತಂಡ ಶ್ರೀಗಂಧದ ಮರವನ್ನು ಕಡಿದು ಕಳುವಿಗೆ ಯತ್ನಿಸಲು ಮುಂದಾಗಿದ್ದಾರೆ. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಕಳ್ಳರು ಪರಾರಿಯಾಗಲು ಯತ್ನಿಸಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಒಬ್ಬ ನಿಗೆ ಗುಂಡು ತಲುಲಿ ಮೃತಪಟ್ಟಿದ್ದಾನೆ.[ಕೊಡಗಿನ ಕಂಪು ಸೂಸುವ ಶ್ರೀಗಂಧದ ಸಾವಿನ ಕಥೆ!]

sandal wood

ಗುಂಡಿನ ದಾಳಿ ನಡೆದಿರುವ ಹಿನ್ನೆಲೆ ಲಿಂಗಾಬುದಿ ಕೆರೆಯ ಆವರಣಕ್ಕೆ ಸಾರ್ವಜನಿಕರ ಪ್ರವೇಶವನ್ನು ಪೊಲೀಸರು ತಾತ್ಕಾಲಿಕವಾಗಿ ನಿರ್ಬಂಧಿಸಿದ್ದಾರೆ.

sandalwood Thief dead

ಇನ್ನು ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚೋರನ ಪೂರ್ಣ ಮಾಹಿತಿ ದೊರೆಯಬೇಕಿದೆ.

English summary
A sandalwood thief was shot dead by a forest officer in the wee hours of Saturday at Lingambudhi Lake Park on the city outskirts.It is alleged that the incident took place when the thief and other seven members were trying to steal sandalwood from the Lingambudhi Lake forest area.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X