ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಪಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತೇನೆ ಎಂದ ಅರಣ್ಯ ಸಚಿವ ಆರ್. ಶಂಕರ್

|
Google Oneindia Kannada News

ಮೈಸೂರು, ಅಕ್ಟೋಬರ್. 5: ಕೆಪಿಜೆಪಿ ಪಕ್ಷದಲ್ಲಿಯೇ ಮುಂದುವರಿಯುತ್ತೇನೆ ಎಂದು ಹೇಳಿದ್ದ ಅರಣ್ಯ ಸಚಿವ ಆರ್.ಶಂಕರ್ ಈಗ ತಮ್ಮ ನಿರ್ಧಾರವನ್ನು ಬದಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಒಳ್ಳೆಯ ಮುಹೂರ್ತ ನೋಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದೇನೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

ರಾಜ್ಯದಲ್ಲಿ ಮಾಯಾವತಿ ಬರ್ಲಿ, ಬಿಡ್ಲಿ ದೇವೇಗೌಡರಿಗೆ ಆಗ ಬೇಕಾಗಿರುವುದು ಏನು?ರಾಜ್ಯದಲ್ಲಿ ಮಾಯಾವತಿ ಬರ್ಲಿ, ಬಿಡ್ಲಿ ದೇವೇಗೌಡರಿಗೆ ಆಗ ಬೇಕಾಗಿರುವುದು ಏನು?

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ. ಆದರೆ ಸಚಿವ ಸಂಪುಟದಲ್ಲಿಯೇ ಇರುತ್ತೇನೆ. ಸಂಪುಟ ವಿಸ್ತರಣೆ ಹಾಗೂ ಖಾತೆ ಬದಲಾವಣೆ ವಿಚಾರ ಗಮನಕ್ಕೆ ಬಂದಿಲ್ಲ.

 ಕಾಂಗ್ರೆಸ್ ಸೇರಲಿರುವ ಮೋದಿ ತದ್ರೂಪಿ ಅಭಿನಂದನ್ ಪಾಠಕ್ ಕಾಂಗ್ರೆಸ್ ಸೇರಲಿರುವ ಮೋದಿ ತದ್ರೂಪಿ ಅಭಿನಂದನ್ ಪಾಠಕ್

ಆ ಬಗ್ಗೆ ವರಿಷ್ಠರು ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ. ಮಾಧ್ಯಮಗಳು ಕೆಲವು ಗೊಂದಲಗಳನ್ನು ಸೃಷ್ಟಿಸಿದ್ದವು. ಹೀಗಾಗಿ ನಾನೂ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Forest Minister Shankar to join Congress soon

 ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಬಿಎಸ್ ಪಿ ಸ್ವತಂತ್ರ ಸ್ಪರ್ಧೆ ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಬಿಎಸ್ ಪಿ ಸ್ವತಂತ್ರ ಸ್ಪರ್ಧೆ

ಇದೇ ವೇಳೆ ಬಿಬಿಎಂಪಿ ಉಪ ಮೇಯರ್ ರಮೀಳಾ ಉಮಾಶಂಕರ್ ನಿಧನಕ್ಕೆ ಸಂತಾಪ ಸೂಚಿಸಿದ ಅವರು, ಕೆಲವು ದಿನಗಳ ಹಿಂದೆಯಷ್ಟೇ ರಮೀಳಾ ಉಮಾಂಶಕರ್ ಅವರು ಬಿಬಿಎಂಪಿ ಉಪಮೇಯರ್ ಆಗಿ ಅಧಿಕಾರ ಸ್ವೀಕರಿಸಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.

English summary
Forest Minister R Shankar Said In coming days I will join the Congress. But I will be in the Cabinet. Media created some confusion. So I'm joining Congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X