ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಂಜನಗೂಡಿನಲ್ಲಿ ರಾಜಹಂಸ ಪಲ್ಟಿ, ನಾಲ್ವರ ಕೈ ಮುರಿತ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಫೆಬ್ರವರಿ 7 : ನಂಜನಗೂಡಿನ ಗೊಳೂರು ತಿರುವಿನಲ್ಲಿ ವೇಗವಾಗಿ ಬಂದ ರಾಜಹಂಸ ಬಸ್ ಪಲ್ಟಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರ ಕೈ ತುಂಡರಿಸಿ ಬಿದ್ದಿದ್ದು, ಇಬ್ಬರ ಕೈ ಮೂಳೆ ಮುರಿತಕ್ಕೊಳಗಾದ ಘಟನೆ ಜರುಗಿದೆ.

ಸೋಮವಾರ ರಾತ್ರಿ ತ್ರಿಶೂರ್ ನಿಂದ ಹೊರಟ ಕೆ ಎಸ್ ಆರ್ ಟಿಸಿ ಬೆಂಗಳೂರು ಘಟಕಕ್ಕೆ ಸೇರಿದ ರಾಜಹಂಸ ಬಸ್ ಮಂಗಳವಾರ ಬೆಳಿಗ್ಗೆ 4.30ರ ಸುಮಾರಿಗೆ ನಂಜನಗೂಡಿನ ಗೊಳೂರು ತಿರುವಿನಲ್ಲಿ ಅಧಿಕ ವೇಗವಾಗಿ ಬಂದ ಪರಿಣಾಮ ಪಲ್ಟಿ ಹೊಡೆದಿದೆ.

ಬಿದ್ದ ರಭಸಕ್ಕೆ ನಾಲ್ಕು ಪ್ರಯಾಣಿಕರ ಕೈ ತುಂಡರಿಸಿ ಬಿದ್ದಿದ್ದು, ಇಬ್ಬರ ಕೈ ಮೂಳೆ ಮುರಿತಕ್ಕೊಳಗಾಗಿದೆ. ಬಸ್ ನಲ್ಲಿ ಒಟ್ಟು 48 ಜನ ಪ್ರಯಾಣಿಕರಿದ್ದು, ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಕೆ. ಆರ್. ಆಸ್ಪತ್ರೆ ಮತ್ತು ಕೊಲಂಬಿಯಾ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.[ಬೆಂಗಳೂರಿನಿಂದ ಶಬರಿಮಲೆಗೆ ರಾಜಹಂಸ ಬಸ್ ಸಂಚಾರ]

Four passengers lost their hands in Rajahamsa bus accident in Nanjanagud Taluk

ಈ ಕುರಿತು ಕೈ ಮೂಳೆ ಮುರಿತಕ್ಕೊಳಗಾದ ಇದಾಯತ್ (48) ಮಾತನಾಡಿ ಬಸ್ಸು ವೇಗವಾಗಿ ಚಲಿಸುತ್ತಿತ್ತು. ಬೆಂಗಳೂರನ್ನು ಬೆಳಿಗ್ಗೆ 7 ಗಂಟೆಗೆ ತಲುಪಬೇಕಾಗಿತ್ತು. ಒಂದು ಕ್ಷಣ ಏನಾಯಿತು ಅಂತ ಗೊತ್ತಾಗಲೇ ಇಲ್ಲ. ಬಸ್ ಪಲ್ಟಿಯಾಗಿತ್ತು ಎಂದರು. ಗಾಯಾಳುಗಳ ಮನೆಯವರನ್ನು ಅವರ ದೂರವಾಣಿ ಮೂಲಕ ಸಂಪರ್ಕಿಸಲಾಗಿದೆ ಎಂದು ತಿಳಿದುಬಂದಿದೆ.

Four passengers lost their hands in Rajahamsa bus accident in Nanjanagud Taluk

ನಂಜನಗೂಡು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಕ್ರೇನ್ ಸಹಾಯದಿಂದ ಬಸ್ ನ್ನು ಮೇಲಕ್ಕೆತ್ತಿಸಿದರಲ್ಲದೇ, ಪ್ರಯಾಣಿಕರನ್ನು ಹೊರತೆಗೆದರು. ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Four passengers lost their hands and other two person's hands are fractured in Rajahamsa bus accident near Golur, Nanjanagud Taluk.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X