ಅಕ್ರಮ ಮರಳು ಸಾಗಿಸುತ್ತಿದ್ದ ಗ್ರಾಪಂ ಮಾಜಿ ಅಧ್ಯಕ್ಷ ಬಂಧನ
ಮೈಸೂರು, ಜುಲೈ 28 : ಮರಳು ಅಕ್ರಮ ಸಾಗಾಣಿಕೆಯಲ್ಲಿ ರಾಜಕೀಯ ಪಕ್ಷಗಳಿಗೆ ಸೇರಿದ ಜನಪ್ರತಿನಿಧಿಗಳು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸೇರಿದಂತೆ ಇಬ್ಬರನ್ನು ಅಕ್ರಮ ಮರಳು ಸಾಗಿಸುವಾಗ ಪೊಲೀಸರು ಬಂಧಿಸಿದ್ದಾರೆ.[ಅಕ್ರಮ ಮರಳು ಸಾಗಾಟಕ್ಕೆ ಹೊಸ ತಂತ್ರ!]
ನಂಜನಗೂಡು ತಾಲೂಕಿನ ಹೆಡತಲೆ ಗ್ರಾಮದ ನಿವಾಸಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರವಿ ಹಾಗೂ ರಂಗಸ್ವಾಮಿ ಅಕ್ರಮ ಮರಳು ಸಾಗಿಸುವಾಗ ಸಿಕ್ಕಿಬಿದ್ದವರು. ಗ್ರಾಮದ ಪಕ್ಕದಲ್ಲಿ ಹರಿಯುತ್ತಿರುವ ಕಿರು ಕಾಲುವೆಯಲ್ಲಿ ಶೇಖರಣೆಯಾಗಿದ್ದ ಮರಳನ್ನು ತೆಗೆದು ಅಕ್ರಮವಾಗಿ 3 ಟ್ರಾಕ್ಟರ್ಗಳ ಮೂಲಕ ಸಾಗಿಸಲಾಗುತ್ತಿತ್ತು.[ಗ್ರಾಮ ಪಂಚಾಯಿತಿಯಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ]
ಮರಳು ಸಾಗಣೆ ಬಗ್ಗೆ ಖಚಿತ ಮಾಹಿತಿ ಪಡೆದ ಕವಲಂದೆ ಪೊಲೀಸ್ ಠಾಣೆಯ ಎಸ್ಐ ಶಿವಮಾದಯ್ಯ, ಸಿಬ್ಬಂದಿ ಶಿವಕುಮಾರ್, ಮಹೇಶ್, ಕೆಂಪರಾಜು ಅವರು ದಾಳಿ ಮಾಡಿ, ಇಬ್ಬರನ್ನು ಬಂಧಿಸಿದ್ದಾರೆ. ಟ್ರಾಕ್ಟರ್ ಚಾಲಕ ಮಣಿ ಮತ್ತು ನಂಜುಂಡಸ್ವಾಮಿ ಪರಾರಿಯಾಗಿದ್ದು, ಹುಡುಕಾಟ ಮುಂದುವರೆದಿದೆ.[ದಕ್ಷಿಣ ಕನ್ನಡದಿಂದ ಹೊರ ಜಿಲ್ಲೆಗೆ ಮರಳು ಸಾಗಿಸುವಂತಿಲ್ಲ]
ಈ ಸಂಬಂಧ ಕವಲಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿ ಮತ್ತು ರಂಗಸ್ವಾಮಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.