ಪ್ರಮಾಣ ವಚನಕ್ಕೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆಯಲಿರುವ ಎಚ್ ಡಿಕೆ
ಮೈಸೂರು, ಮೇ 23 : ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಬುಧವಾರ ಮೈಸೂರಿಗೆ ಆಗಮಿಸುತ್ತಿದ್ದು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ನಾಡ ದೇವಿಗೆ ಪೂಜೆ ಸಲ್ಲಿಸಲ್ಲಿದ್ದಾರೆ.
ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮೈಸೂರಿನ ಲಲಿತಮಹಲ್ ಹೆಲಿಪ್ಯಾಡ್ ಗೆ ಬಂದಿಳಿದು, ನಂತರ ಚಾಮುಂಡೇಶ್ಚರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಪ್ರಮಾಣ ವಚನ ಸಮಾರಂಭಕ್ಕೆ ಅಂಬರೀಶ್ ಆಹ್ವಾನಿಸಿದ ಕುಮಾರಸ್ವಾಮಿ
ಪೂಜೆ ಸಲ್ಲಿಸಿದ ಬಳಿಕ ಲಲಿತಮಹಲ್ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮೂಲಕ 10:20ಕ್ಕೆ ರಾಮನಗರ ಜಿಲ್ಲಾ ಕ್ರೀಡಾಂಗಣಕ್ಕೆ ತೆರಳಲಿದ್ದಾರೆ. ನಂತರ ನಗರದೇವತೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ.
12 ಗಂಟೆಗೆ ಜಿಲ್ಲಾ ಕ್ರೀಡಾಂಗಣ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮೂಲಕ ತೆರಳಿ 12:30ಕ್ಕೆ ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣ ತಲುಪಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Comments
karnataka election results 2018 karnataka assembly elections 2018 hd kumaraswamy mysuru ramanagara district news ಕರ್ನಾಟಕ ವಿಧಾನಸಭೆ ಚುನಾವಣೆ 2018 ಮೈಸೂರು ರಾಮನಗರ ಎಚ್ ಡಿ ಕುಮಾರಸ್ವಾಮಿ
English summary
HD Kumaraswamy arrived in Mysore on Today. He is scheduled to worship Nada Devi before accepting the oath. After that 10: 20 will go to the Ramanagar district stadium.