ಮೈಸೂರಿನ ಮೃಗಾಲಯದ ವನ್ಯಜೀವಿ ಉಳಿವಿಗೆ ಮೃತ್ಯುಂಜಯ ಹೋಮ
ಮೈಸೂರು, ಜನವರಿ 6: ಮೈಸೂರು ಮೃಗಾಲಯದಲ್ಲಿ ಪ್ರಾಣಿ ಪಕ್ಷಿಗಳ ಸರಣಿ ಸಾವಿನ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಯದ ಎದಿರು ವಿಶ್ವಕ್ಷೇಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶುಕ್ರವಾರ ಮಹಾಮೃತ್ಯುಂಜಯ ಹೋಮವನ್ನು ಜರುಗಿಸಲಾಯಿತು.[ನಂಜನಗೂಡಲ್ಲಿ ಅಷ್ಟಮಂಗಲ ಪರಿಹಾರ ಪೂಜೆ]
ಮೃಗಾಲಯದ ಮುಂಭಾಗ ಪುರೋಹಿತರಾದ ಪ್ರಹ್ಲಾದ್ ಮತ್ತು ಮಂಜುನಾಥ ಅವರ ನೇತೃತ್ವದಲ್ಲಿ ಮಹಾಮೃತ್ಯುಂಜಯ ಹೋಮ ಜರುಗಿತು. ಬಿಜೆಪಿ ಮುಖಂಡ ಜೋಗಿ ಮಂಜು ಮಾತನಾಡಿ ಮೃಗಾಲಯದ ಅಧಿಕಾರಿಗಳು ಪ್ರಾಣಿ ಪಕ್ಷಿಗಳನ್ನು ಜಾಗರೂಕತೆಯಿಂದ ನೋಡಿಕೊಳ್ಳುತ್ತಿದ್ದವರೂ ಪಕ್ಷಿಗಳು ಸೋಂಕಿನಿಂದ ಸಾವಿಗೀಡಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಪ್ರಾಣಿ-ಪಕ್ಷಿಗಳ ಸಂಕುಲ ಉಳಿಯಬೇಕು. ಅವುಗಳ ಆರೋಗ್ಯವೃದ್ಧಿಗಾಗಿ ಈ ಹೋಮವನ್ನು ಆಯೋಜಿಸಲಾಗಿದೆ ಎಂದರು.[ಭೀಮರತಿ ಶಾಂತಿ ಕಾರ್ಯಕ್ರಮದಲ್ಲಿ ಡಾ.ಜಿ. ಪರಮೇಶ್ವರ]
ವಿಕ್ರಂ ಮಾತನಾಡಿ ಮನುಷ್ಯರಾದರೆ ಏನಾದರೂ ಹೇಳಿಕೊಳ್ಳುತ್ತೇವೆ. ಆದರೆ ಪ್ರಾಣಿ-ಪಕ್ಷಿಗಳಿಗೆ ಹೇಳಿಕೊಳ್ಳಲು ಹೇಗೆ ಸಾಧ್ಯ, ವಯೋಸಹಜ ಹಾಗೂ ಅಕಾಲಿಕ ಮರಣದಿಂದ ಪಕ್ಷಿಸಂಕುಲಗಳು ನಾಶವಾಗಬಾರದು ಎಂಬ ಉದ್ದೇಶದಿಂದ ಹೋಮ ಹವನವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭ ಅಜಯಶಾಸ್ತ್ರಿ, ನೀಲಕಂಠ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.