ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೋಟು ನಿಷೇಧವೇ ಗಿರಿಜನರನ್ನು ಒಕ್ಕಲೆಬ್ಬಿಸಲು ಕಾರಣ : ಪರಮೇಶ್ವರ್

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಡಿಸೆಂಬರ್. 20 : ನೋಟು ಅಮಾನ್ಯವಾಗಿದ್ದೇ ಮಡಿಕೇರಿಯ ದಿಡ್ಡಹಳ್ಳಿಯಲ್ಲಿರುವ ಗಿರಿಜನರನ್ನು ಒಕ್ಕಲೆಬ್ಬಿಸೋದಕ್ಕೆ ಕಾರಣವಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸಂಸದ ಪ್ರತಾಪ್ ಸಿಂಹ ಅವರಿಗೆ ಟಾಂಗ್ ನೀಡಿದ್ದಾರೆ.

ಮೈಸೂರಿನಲ್ಲಿ ನಡೆಯಲಿರುವ ಪೊಲೀಸ್ ಕರ್ತವ್ಯಕೂಟದಲ್ಲಿ ಪಾಲ್ಗೊಳ್ಳಲು ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಡಿಕೇರಿಯ ದಿಡ್ಡಹಳ್ಳಿಯಲ್ಲಿ ಪಿ.ಚಿದಂಬರಂ ಹಾಗೂ ಟಾಟಾ ಅವರ ಜಮೀನಿದ್ದರೆ ಅಲ್ಲಿನ ಜಿಲ್ಲಾಧಿಕಾರಿಗಳು ವಶಪಡಿಸಿಕೊಳ್ಳುತ್ತಾರೆ. ಒತ್ತುವರಿಗೂ ಗಿರಿಜನರ ಸಮಸ್ಯೆಗೂ ತಳುಕು ಹಾಕಬಾರದು ಎಂದು ಪರಮೇಶ್ವರ್ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಗೆ ತಿರುಗೇಟು ನೀಡಿದರು[ಪಿಸಿಯಿಂದ ಒತ್ತುವರಿ : ರಾಜ್ಯ ಸರಕಾರಕ್ಕೆ ಸಿಂಹ ಸವಾಲ್]

ಗಿರಿಜನರು ಕೂಲಿ ಮಾಡಿಕೊಂಡು ಬದುಕುವವರು. ಆದರೆ, ಕಳೆದ 42 ದಿನಗಳಿಂದ ಅವರಿಗೆ ವೇತನ ಸಿಗುತ್ತಿಲ್ಲ. ಅಸಂಘಟಿತ ವಲಯದ ಸಾಕಷ್ಟು ಜನರಿಗೆ ತೊಂದರೆಯಾಗಿದೆ. ತಕ್ಷಣ ಪರಿಣಾಮ ಬೀರದಿದ್ದರೂ, ತಡವಾಗಿ ಜನರ ಮೇಲೆ ಪರಿಣಾಮ ಬೀರಿದೆ ಎಂದು ಪರೋಕ್ಷವಾಗಿ ನೋಟ್ ಬ್ಯಾನ್ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

Home minister G Parameshwar retaliate to MP Pratap Simha

ಕೊಡಗಿನ ದಿಡ್ಡಹಳ್ಳಿಯಲ್ಲಿರುವ ಅರಣ್ಯ ಒತ್ತುವರಿ ಜಾಗವನ್ನು ವಶಕ್ಕೆ ಪಡೆಯುವ ಅಧಿಕಾರ ಜಿಲ್ಲಾಧಿಕಾರಿಯವರಿಗೆ ಇದೆ. ನಮ್ಮ ಪರವಾಗಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ ಎಂದರು.

ಅಲ್ಲಿನ ಗಿರಿಜನರಿಗೆ ಪುನರ್ವಸತಿ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಲ್ಲದೇ ಅಲ್ಲಿನ ಸಮಸ್ಯೆಯ ಕುರಿತು ವರದಿಯನ್ನೂ ಕೇಳಿದ್ದೇನೆ ಎಂದು ತಿಳಿಸಿದರು.

English summary
MP Pratap Simha allegations about challenged Karnataka government to take action to vacate lands aquired by P Chidambaram and Tata company is denied by Home minister G Parameshwar on Monday in Mysuru. Note Ban Impact on tribal people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X