ಮೈಸೂರು ಬ್ಲಾಸ್ಟ್ನಲ್ಲಿ ಹೊಸ ಉಗ್ರ ಸಂಘಟನೆಯ ಹೆಸರು
ಮೈಸೂರು, ಆಗಸ್ಟ್ 04: ಮೈಸೂರು ಕೋರ್ಟ್ ಆವರಣದ ಸಾರ್ವಜನಿಕ ಶೌಚಾಲಯದಲ್ಲಿ ಆಗಸ್ಟ್ 1 ರಂದು ಸಂಜೆ ಸಂಭವಿಸಿದ ಬಾಂಬ್ ಸ್ಫೋಟದ ತನಿಖೆ ತೀವ್ರಗೊಂಡಿದೆ. ಬಾಂಬ್ ಇಟ್ಟಿದ್ದಕ್ಕೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲವಾದರೂ ಬಾಂಬ್ ಇಟ್ಟವರು ಮಾತ್ರ ಇಂಥ ಕೆಲಸದಲ್ಲಿ ನಿಷ್ಣಾತರು ಎಂಬುದು ಗೊತ್ತಾಗಿದೆ.
ಆಂಧ್ರ ಪ್ರದೇಶದ ಚಿತ್ತೂರು(ಏಪ್ರಿಲ್ 7) ಮತ್ತು ಕೇರಳದ ಕೋಲಂ ( ಜೂನ್ 15) ಕೋರ್ಟ್ ನ ಹೊರ ಆವರಣದಲ್ಲಿ ನಡೆದ ಬಾಂಬ್ ಸ್ಫೋಟಕ್ಕೂ ಇದಕ್ಕೂ ಅನೇಕ ಹೋಲಿಕೆಗಳು ಕಂಡುಬಂದಿವೆ.[ಮೈಸೂರು: ಕೋರ್ಟಿನ ಬಳಿ 'ಕುಕ್ಕರ್ ಬಾಂಬ್' ಇಟ್ಟವರು ಯಾರು?]

ಪ್ರಕರಣದಲ್ಲಿ ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಕೈವಾಡ ಇರುವ ಬಗ್ಗೆಯೂ ಶಂಕೆ ವ್ಯಕ್ತವಾಗಿದೆ. ಅದರೊಂದಿಗೆ ಅಲ್ -ಉಮಾ ಸಂಘಟನೆಯ ಕೃತ್ಯ ಎಸಗಿರಬಹುದು ಎಂದು ತನಿಖೆ ನಡೆಸುತ್ತಿರುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತನಿಖೆಯ ದಿಕ್ಕು ತಪ್ಪಿಸಲು ಸಂಘಟನೆ ತನ್ನನ್ನು ತಾನು 'ಬೇಸ್ ಮೂಮೆಂಟ್' ಎಂದು ಕರೆದುಕೊಂಡಿದೆ.
ತನಿಖೆ ಯಾವ ರೀತಿ?
ಚಿತ್ತೂರಿನಲ್ಲಿ ಸ್ಫೋಟ ನಡೆದ ನಂತರ ಅಮೆರಿಕದಿಂದ ಹತನಾದ ಉಗ್ರ ಒಸಾಮಾ ಬಿನ್ ಲಾಡೆನ್ ಭಾವಚಿತ್ರ ಇರುವ ಪತ್ರವೊಂದು ರವಾನೆಯಾಗಿದ್ದು ಸುದ್ದಿಯಾಗಿತ್ತು, ಆದರೆ ಕೋಲಂ ಸ್ಫೋಟದ ಹೊಣೆಯನ್ನು ಯಾವ ಸಂಘಟನೆಯೂ ಹೊತ್ತುಕೊಂಡಿರಲಿಲ್ಲ.[ಮೈಸೂರು ಕೋರ್ಟ್ ಆವರಣದಲ್ಲಿ ಬಾಂಬ್ ಸ್ಫೋಟ]
ಇದೆಲ್ಲವನ್ನು ಆಧರಿಸಿಕೊಂಡಿರುವ ಕರ್ನಾಟಕ ಪೊಲೀಸರು ಆಂಧ್ರ ಮತ್ತು ಕೇರಳದಲ್ಲಿ ಪ್ರಕರಣದ ಮೂಲ ಹುಡುಕುತ್ತಿದ್ದಾರೆ. ಅಲ್-ಉಮಾ ಸಂಘಟನೆಯ ಮೂಲ ನೆಲೆಗಳನ್ನು ಹುಡುಕಾಡುತ್ತಿದ್ದಾರೆ.
ಮಲ್ಲೇಶ್ವರಂ ಬಾಂಬ್ ಸ್ಫೋಟದಲ್ಲಿಯೂ ಅಲ್-ಉಮಾ ಸಂಘಟನೆಯ ಹೆಸರು ಕೇಳಿ ಬಂದಿತ್ತು. ಆದರೆ ಅದೇ ಸಂಘಟನೆ ಇದೀಗ 'ಬೇಸ್ ಮೂಮೆಂಟ್' ಎಂಬ ಹೆಸರಿನಲ್ಲಿ ಕಾರ್ಯಚಟುವಟಿಕೆ ನಡೆಸುತ್ತಿದೆ ಎಂಬ ಅನುಮಾನ ದಟ್ಟವಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications