ಯದುವೀರ್ ಬಿಜೆಪಿಗೆ ಸೇರುತ್ತಾರಾ? ಇಲ್ಲಿದೆ ಅವರ ಉತ್ತರ
Recommended Video
ಮೈಸೂರು, ಮಾರ್ಚ್ 29 : ಬಿಜೆಪಿಗೆ ಮೈಸೂರಿನ ಯುವರಾಜ ಸೇರುತ್ತಾರೆಂಬ ವದಂತಿಗೆ ಮೈಸೂರು ರಾಜವಂಶಸ್ಥ ಯದುವೀರ್ ತೆರೆ ಎಳೆದಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ನಾಳೆ(ಮಾರ್ಚ್ 30) ಮೈಸೂರು ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಮೈಸೂರು ರಾಜವಂಶಸ್ಥೆ ಪ್ರಮೋದಾ ದೇವಿ ಅವರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಯದುವೀರ್ ಅವರ ರಾಜಕೀಯದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿತ್ತು.
ಸಿದ್ದರಾಮಯ್ಯ, ಅಮಿತ್ ಶಾರಿಂದ ಮೈಸೂರಿನಲ್ಲಿ ಭರ್ಜರಿ ಮತ ಬೇಟೆ
ಅಷ್ಟೇ ಅಲ್ಲ, ಯದುವೀರ್ ಅವರಿಗೆ ಬಿಜೆಪಿ ಗಾಳ ಹಾಕಿದೆ ಎಂಬ ಸುದ್ದಿ ಇತ್ತೀಚೆಗೆ ಹರಡಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಯದುವಂಶಸ್ಥ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ಯಾವ ಪಕ್ಷದಿಂದಲೂ ಆಹ್ವಾನ ಬಂದಿಲ್ಲ. ನಾನು ಬಿಜೆಪಿಗೆ ಸೇರುತ್ತೇನೆ ಎನ್ನೋದು ಸುಳ್ಳು ಎಂದಿದ್ದಾರೆ.
ಮೈಸೂರು ನಂಜನಗೂಡು ಮುಖ್ಯ ರಸ್ತೆಯಲ್ಲಿರುವ ಮಹಿಳಾ ಪುನರ್ ವಸತಿ ಕೇಂದ್ರವಾದ ಶಕ್ತಿಧಾಮದಲ್ಲಿ ಆಶ್ರಯ ಪಡೆಯುತ್ತಿರುವ ಉತ್ತರ ಕರ್ನಾಟಕ ಮಕ್ಕಳೊಂದಿಗೆ ಮೈಸೂರು ರಾಜ ವಂಶಸ್ಥ ಯದುವೀರ್ ಸಂವಾದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಯದುವೀರ್ ಸ್ಪಷ್ಟನೆ ನೀಡಿದ್ದಾರೆ.
ಅಮಿತ್ ಶಾ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಇದುವರೆಗೂ ನನಗೆ ಅದರ ಮಾಹಿತಿಯೇ ಗೊತ್ತಿಲ್ಲ. ಮಾಧ್ಯಮಗಳಲ್ಲಿ ಈ ವಿಷಯಗಳನ್ನ ತಿಳಿಯುತಿದ್ದೇನೆ ಅಷ್ಟೇ. ನಾನು ಯಾವ ಪಕ್ಷಕ್ಕೂ ಹೋಗುವುದಿಲ್ಲ. ಯಾವ ಪಕ್ಷದ ಪರವಾಗಿಯೂ ಪ್ರಚಾರಕ್ಕೆ ಹೋಗುವಿದಲ್ಲವೆಂದು ಗೊಂದಲಗಳಿಗೆ ತೆರೆ ಎಳೆದರು.