ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯೇಂದ್ರ ಕೈತಪ್ಪಿದ ಟಿಕೆಟ್: ಅನಂತ ಕುಮಾರ್ ಮೈಸೂರು ಪ್ರವಾಸ ರದ್ದು!

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಏಪ್ರಿಲ್ 27: ನಾಳೆ(ಏ.28)ಮೈಸೂರಿಗೆ ಆಗಮಿಸಬೇಕಿದ್ದ ಕೇಂದ್ರ ರಸಗೊಬ್ಬರ ಸಚಿವ ಅನಂತ ಕುಮಾರ್ ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಏಪ್ರಿಲ್ 28 ರಂದು ಮೈಸೂರಿನ ವರುಣಾ, ಕೃಷ್ಣರಾಜ, ಚಾಮರಾಜ ವಿಧಾನಸಭಾ ಕ್ಷೇತ್ರಗಳಿಗೆ ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್ ಭೇಟಿ ನೀಡಿ ಪ್ರಚಾರ ನಡೆಸಬೇಕಿತ್ತು. ನಂತರ ಸಂಜೆ ಪತ್ರಿಕಾಗೋಷ್ಠಿಯನ್ನೂ ಅನಂತ ಕುಮಾರ್ ಹಮ್ಮಿಕೊಂಡಿದ್ದರು. ಆದರೆ ತಮ್ಮ ಈ ಎಲ್ಲಾ ಕಾರ್ಯಕ್ರಮಗಳನ್ನೂ ರದ್ದುಗೊಳಿಸಿರುವ ಅನಂತ ಕುಮಾರ್ ನಡೆಗೂ, ವರುಣಾ ಕ್ಷೇತ್ರದಲ್ಲಿ ಬಿವೈ ವಿಜಯೇಂದ್ರ ಅವರಿಗೆ ಟಿಕೆಟ್ ತಪ್ಪಿದ್ದಕ್ಕೂ ಸಂಬಂಧ ಕಲ್ಪಿಸಲಾಗುತ್ತಿದೆ.

Karnataka elections: After Varuna controversy Anant Kumar cancels his trip to Mysuru

ವರುಣಾದಲ್ಲಿ ವಿಜಯೇಂದ್ರ ಬೆಂಬಲಿಗರ ಮಾಸ್ಟರ್‌ ಪ್ಲಾನ್‌ವರುಣಾದಲ್ಲಿ ವಿಜಯೇಂದ್ರ ಬೆಂಬಲಿಗರ ಮಾಸ್ಟರ್‌ ಪ್ಲಾನ್‌

ವಿಜಯೇಂದ್ರ ಅವರಿಗೆ ಟಿಕೆಟ್ ಸಿಗದಿರಲು ಸ್ವಪಕ್ಷೀಯರದೇ ಕೈವಾಡವಿದೆ ಎಂಬ ಕೂಗು ಕೇಳಿಬಂದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ವಿಜಯೇಂದ್ರ ಬೆಂಬಲಿಗರು ಅನಂತ ಕುಮಾರ್ ವಿರುದ್ಧವೇ ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ಅನಂತ ಕುಮಾರ್ ಪ್ರವಾಸ ರದ್ದು ಮಾಡಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ವರುಣಾದಲ್ಲಿ ಗೆಲ್ಲುವವರು ಯಾರು? ಇಲ್ಲಿದೆ ಗ್ರೌಂಡ್ ರಿಪೋರ್ಟ್ವರುಣಾದಲ್ಲಿ ಗೆಲ್ಲುವವರು ಯಾರು? ಇಲ್ಲಿದೆ ಗ್ರೌಂಡ್ ರಿಪೋರ್ಟ್

English summary
Karnataka Assembly Elections 2018: After some rumours stated that, Central minister Ananth Kumar has a role in Varuna BJP ticket controversy, he cancels his trip to Mysuru which will be scheduled on April 28th. Former CM BS Yeddyurappa's son BY Vijayendra missed his ticket from Varuna Constituency
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X