ಇಂದು 12 ಗಂಟೆಗೆ ಸಿದ್ದರಾಮಯ್ಯ, ಜಿಟಿ ದೇವೇಗೌಡ ನಾಮಪತ್ರ ಸಲ್ಲಿಕೆ
Recommended Video
ಮೈಸೂರು, ಏಪ್ರಿಲ್ 20: ಕರ್ನಾಟಕ ವಿಧಾನಸಭೆ ಚುನಾವಣೆಯ ಅತ್ಯಂತ ಮಹತ್ವದ ಕ್ಷೇತ್ರ ಎನ್ನಿಸಿರುವ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಇಂದು ಇಬ್ಬರು ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ 2018 : ನಾಮಪತ್ರ ಸಲ್ಲಿಕೆ ಜೋರು
ಕಾಂಗ್ರೆಸ್ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ಜಿಟಿ ದೇವೇಗೌಡ ಅವರು ತಮ್ಮ ಉಮೇದುವಾರಿಕೆಯನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಲಿದ್ದಾರೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಇಂದು ಮಧ್ಯಾಹ್ನ 12 ಗಂಟೆಗೆ ತಮ್ಮ ಅಪಾರ ಬೆಂಬಲಿಗರ ಸಮ್ಮುಖದಲ್ಲಿ ಮೈಸೂರಿನ ನಜರ್ ಬಾದ್ ನಲ್ಲಿರುವ ಮಿನಿ ವಿಧಾನಸೌಧದಲ್ಲಿ ಉಭಯ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ.
ರಾಜ್ಯ ಮಾತ್ರವಲ್ಲದೆ, ಇಡೀ ದೇಶದ ಕುತೂಹಲವನ್ನೂ ಕೆರಳಿಸಿರುವ ಈ ಕ್ಷೇತ್ರದಲ್ಲಿ ಘಟಾನುಘಟಿಗಳ ನಾಮಪತ್ರ ಸಲ್ಲಿಕೆಗೆ ಅವರ ಅಪಾರ ಬೆಂಬಲಿಗರು ಸಾಕ್ಷಿಯಾಗಲಿದ್ದಾರೆ. ತನ್ನಿಮಿತ್ತ ಮಿನಿ ವಿಧಾನಸೌಧದ ಬಳಿ ಭಾರೀ ಪೊಲೀಸ್ ಬಿಗಿ ಬಂದೊಬಸ್ತ್ ಏರ್ಪಡಿಸಲಾಗಿದೆ.