ನೀಲಂಬೂರು-ನಂಜನಗೂಡು ರೈಲ್ವೆ ಯೋಜನೆಗೆ ಕೇರಳದ ಒಪ್ಪಿಗೆ
ಮೈಸೂರು, ಅ.18 : ನೀಲಂಬೂರು-ನಂಜನಗೂಡು ರೈಲು ಮಾರ್ಗ ಯೋಜನೆ ಜಾರಿಗೊಳಿಸಲು ಕೇರಳ ಸರ್ಕಾರ ಒಪ್ಪಿಗೆ ನೀಡಿದೆ. ಕರ್ನಾಟಕ ಸರ್ಕಾರ ಈ ರೈಲು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದೆ.
ಗದಗ-ವಾಡಿ ರೈಲು ಮಾರ್ಗ ಯೋಜನೆ ಕಾಮಗಾರಿ ಆರಂಭ
ಕೇರಳ ಲೋಕೋಪಯೋಗಿ ಸಚಿವ ಜಿ.ಸುಧಾಕರನ್ ವಿಧಾನಸಭೆಯಲ್ಲಿ ಈ ಕುರಿತು ಹೇಳಿಕೆ ನೀಡಿದ್ದಾರೆ. 'ಬಂಡೀಪುರ ಕಾಡಿನ ಮೂಲಕ ಮಾರ್ಗ ಹಾದು ಹೋಗುತ್ತದೆ ಎಂಬ ಕಾರಣಕ್ಕೆ ಕರ್ನಾಟಕ ವಿರೋಧ ವ್ಯಕ್ತಪಡಿಸುತ್ತಿದೆ. ಎರಡೂ ರಾಜ್ಯಗಳನ್ನು ಸಂಪರ್ಕಿಸುವ ಯೋಜನೆಗೆ ನಮ್ಮ ಒಪ್ಪಿಗೆ ಇದೆ' ಎಂದು ಹೇಳಿದ್ದಾರೆ.
ನೀಲಂಬೂರು-ನಂಜನಗೂಡು ರೈಲು ಮಾರ್ಗ ಕೇರಳ ಭಾಗದ ಜನರ ಬಹುದಿನದ ಬೇಡಿಕೆ. ಕರ್ನಾಟಕ ಸರ್ಕಾರ ಒಪ್ಪಿದರೆ ಪರ್ಯಾಯ ಮಾರ್ಗದಲ್ಲಿ ರೈಲ್ವೆ ಹಳಿ ಹಾಕಿ ಯೋಜನೆಯನ್ನು ಜಾರಿಗೊಳಿಸಲು ಕೇರಳ ಸಿದ್ಧವಿದೆ. ಯೋಜನೆ ಜಾರಿಯಾದರೆ ಮೈಸೂರು ಮತ್ತು ಮಲ್ಲಪ್ಪುರಂ ನಡುವೆ ಸಂಪರ್ಕ ಸಾಧ್ಯವಾಗಲಿದೆ.
ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆ ಆರಂಭಕ್ಕೆ ಸಿದ್ದರಾಮಯ್ಯ ಮನವಿ
ಈಗಾಗಲೇ ಕೇರಳ ಸರ್ಕಾರ ಯೋಜನೆಯ ಸಮೀಕ್ಷೆಗಾಗಿ 8 ಕೋಟಿ ರೂ. ಅನುದಾನ ಘೋಷಣೆ ಮಾಡಿದೆ. ಎರಡು ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಆದರೆ, ಸಮೀಕ್ಷೆ ನಡೆಸಲು ಕರ್ನಾಟಕ ಸರ್ಕಾರ ಇನ್ನೂ ಒಪ್ಪಿಗೆ ನೀಡಿಲ್ಲ.