ಮೈಸೂರು ಅರಮನೆ ಫೋಟೋಶೂಟ್ ವಿವಾದ : ಏನು, ಎತ್ತ?
ಮೈಸೂರು, ಮೇ.26 : ಯುವರಾಜ ಯದುವೀರ ಅರಸ್ ವಿವಾಹಕ್ಕೂ ಮುನ್ನವೇ ಮೈಸೂರು ಅರಮನೆ ಸುದ್ದಿಯಲ್ಲಿದೆ. ಇದಕ್ಕೆ ಕಾರಣವಾಗಿರುವುದು ಯುವ ಜೋಡಿಗಳ ಫೋಟೋ ಶೂಟ್. ಗುರುವಾರ ಸಾಮಾಜಿಕ ತಾಣಗಳಲ್ಲಿ, ಟಿವಿ ವಾಹಿನಿಗಳಲ್ಲಿ ಮೈಸೂರು ಅರಮನೆಯದ್ದೇ ಸುದ್ದಿ.
ಮೈಸೂರು ಅರಮನೆ ಕೇವಲ ರಾಜಮನೆತನಕ್ಕೆ ಸೇರಿದ್ದಲ್ಲ. ಅದು ಕನ್ನಡಿಗರ ಸ್ವತ್ತು ಎಂದೇ ಕನ್ನಡಿಗರು ಪರಿಭಾವಿಸಿದ್ದಾರೆ. ಇಂಥ ವೇಳೆ ಈ ಬಗೆಯ ಫೋಟೋ ಶೂಟ್ ನಡೆದಿದ್ದು ಯುವ ಜೋಡಿಗಳು ಕೈ ಕೈ ಹಿಡಿದು ಓಡಾಡಿರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. [ಜೂನ್ 27ಕ್ಕೆ ಯದುವೀರ್ ಒಡೆಯರ್ ವಿವಾಹ]

ಏಪ್ರಿಲ್ ನಲ್ಲಿ ವಿಡಿಯೋವನ್ನು ಯೂಟ್ಯೂಬ್ ಗೆ ಅಪ್ ಲೋಡ್ ಮಾಡಲಾಗಿದ್ದು ಈಗ ಸುದ್ದಿ ಮಾಡುತ್ತಿದೆ. 2016 ಫೆಬ್ರುವರಿ 27, 28ರಂದು ನಡೆದ ಆದಿತ್ಯ-ನವ್ಯಾ ವಿವಾಹ ಕಾರ್ಯಕ್ರಮದ ವೇಳೆ ತೆಗೆದ ವಿಡಿಯೋ ಇದಾಗಿದೆ. ಬೆಂಗಳೂರು ನಿವಾಸಿ ಆದಿತ್ಯ ಲಂಡನ್ ನ ನ್ಯಾಟಿಂಗ್ಯಾಮ್ ವಿವಿಯಲ್ಲಿ ಎಂಎಸ್ಸಿ ಪದವಿ ಪಡೆದಿದ್ದಾರೆ ಎಂದು ಹೇಳಲಾಗಿದೆ. [ಯುವರಾಣಿ ತ್ರಿಷಿಕಾ ಕಾಣದೆ ನಿರಾಶರಾದ ಜನ]
ನಮಗೆ ಗೊತ್ತಿಲ್ಲ : 'ಫೋಟೋ ಶೂಟ್ ಬಗ್ಗೆ ನಮಗೆ ಗೊತ್ತಿಲ್ಲ. ಅರಮನೆಯಲ್ಲಿ ಭದ್ರತೆ ಇದ್ದರೂ ಹೇಗೆ ಫೋಟೋ ಮಾಡಿದ್ದಾರೆ ಎಂಬುದು ತಿಳಿದಿಲ್ಲ. ನಾವೇ ಎಂದೂ ಈ ಬಗೆಯಾಗಿ ಫೋಟೋ ತೆಗೆಸಿಕೊಂಡಿಲ್ಲ. ಇದು ಹೇಗೆ ಮಾಡಿದ್ದಾರೆ? ಎಂಬುದನ್ನು ತನಿಖೆ ಮಾಡುತ್ತೇವೆ' ಎಂದು ರಾಣಿ ಪ್ರಮೋದಾ ದೇವಿ ಅವರು ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರು ಅಂಬಾ ವಿಲಾಸ ಅರಮನೆಯ ದರ್ಬಾರ್ ಹಾಲ್, ಖಾಸಗಿ ಹಾಲ್, ಕಲ್ಯಾಣ ಮಂಟಪಗಳಲ್ಲಿ ಚಿತ್ರೀಕರಣ ಮಾಡಿರುವುದು ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಸಿನಿಮಾಗಳ ಶೂಟಿಂಗ್ ಗೂ ಸಹ ಕೇಳಲಾಗಿದ್ದರೂ ಅವಕಾಶ ಸಿಕ್ಕಿರಲಿಲ್ಲ. ಆದರೆ ಇದೀಗ ಫೋಟೋ ಶೂಟ್ ಗೆ ಅವಕಾಶ ಸಿಕ್ಕಿದ್ದಾದರೂ ಹೇಗೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications