ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಲ ಬಾಧೆಗೆ ಬೇಸತ್ತು ಕೆ.ಆರ್.ಪೇಟೆಯಲ್ಲಿ ನೇಣಿಗೆ ಕೊರಳೊಡ್ಡಿದ ರೈತ

ಮೈಸೂರು ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಬೀರುವಳ್ಳಿ ಗ್ರಾಮದಲ್ಲಿ ಸಾಲಬಾಧೆಯಿಂದ ರೈತ ಬಿಕೆ ಸುರೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ಎಕರೆ ಜಮೀನಿದ್ದ ಅವರು ಬ್ಯಾಂಕ್ ನಿಂದ ಸಾಲ ಹಾಗೂ ಇತರೆಡೆ ಕೈ ಸಾಲ ಮಾಡಿದ್ದರು

By ಮೈಸೂರು ಪ್ರತಿನಿಧಿ
|
Google Oneindia Kannada News

ಕೆ.ಆರ್.ಪೇಟೆ, ಏಪ್ರಿಲ್ 8: ಸಾಲ ಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೀರುವಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಗ್ರಾಮದ ದಿವಂಗತ ಕಾಳೇಗೌಡ ಅವರ ಮಗ ಬಿ.ಕೆ.ಸುರೇಶ್ (50) ಆತ್ಮಹತ್ಯೆ ಮಾಡಿಕೊಂಡಿರುವ ರೈತ.

ರೈತ ಬಿ.ಕೆ.ಸುರೇಶ್ ಬೀರುವಳ್ಳಿ ಗ್ರಾಮದಲ್ಲಿ ಸುಮಾರು 3 ಎಕರೆ ಜಮೀನು ಹೊಂದಿದ್ದು, ಕೃಷಿಗಾಗಿ ಮಂದಗೆರೆ ವಿಜಯ ಬ್ಯಾಂಕಿನಲ್ಲಿ ಸುಮಾರು 1 ಲಕ್ಷ ರುಪಾಯಿ ಬೆಳೆ ಸಾಲ, ಜೊತೆಗೆ ಲಕ್ಷಾಂತರ ರುಪಾಯಿ ಕೈಸಾಲ ಮಾಡಿಕೊಂಡಿದ್ದರು. ಬ್ಯಾಂಕಿನವರು ಸಾಲ ವಸೂಲಿಗಾಗಿ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸುವ ನೋಟಿಸ್ ಜಾರಿ ಮಾಡಿದ್ದರು.[ಉಪಚುನಾವಣೆ ಕಾವಿರುವ ಗುಂಡ್ಲುಪೇಟೆಯಲ್ಲಿ ಒಂದೇ ತಿಂಗಳು 3ರೈತರ ಆತ್ಮಹತ್ಯೆ]

KR Pete farmer commits suicide due to heavy loan

ಇದರಿಂದ ಮನನೊಂದು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರಾಮಾಂತರ ಪೊಲೀಸ್ ಠಾಣೆಗೆ ಅವರ ಪತ್ನಿ ಮಂಜುಳಾ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಅಕ್ಕಿಹೆಬ್ಬಾಳು ನಾಡ ಕಚೇರಿಯ ಉಪ ತಹಸೀಲ್ದಾರ್ ಚಂದ್ರಶೇಖರ್, ಗ್ರಾಮ ಲೆಕ್ಕಾಧಿಕಾರಿ ಪ್ರವೀಣ್ ಕುಮಾರ್, ಸಬ್‍ ಇನ್ ಸ್ಪೆಕ್ಟರ್ ಗಿರೀಶ್, ಎಎಸ್ಐ ಪ್ರಮೋದ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

English summary
BK Suresh, farmer commits suicide due to heavy loan in Beeruvalli village, KR Pete taluk, Mysuru district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X