ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬದ ಸಂಭ್ರಮ ಹೆಚ್ಚಿಸಲಿ

By Yashaswini
|
Google Oneindia Kannada News

ಮೈಸೂರು, ಆಗಸ್ಟ್ 17: ಪರಿಸರ ಮಾಲಿನ್ಯವನ್ನು ಹತೋಟಿಯಲ್ಲಿಡುವ ದೃಷ್ಟಿಯಿಂದ ಪರಿಸರ ಸ್ನೇಹಿ ಗೌರಿ-ಗಣೇಶನನ್ನು ಪೂಜಿಸಲು ಜಿಲ್ಲಾಧಿಕಾರಿ ಡಿ.ರಂದೀಪ್ ಆದೇಶ ಹೊರಡಿಸಿದ್ದು, ಗುರುವಾರ ಈ ಕುರಿತು ಜಾಗೃತಿ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿದರು.

ರಾಜ್ಯ ನಿಯಂತ್ರಣ ಮಂಡಳಿಯ ಸಹಯೋಗದಲ್ಲಿ ನಿರ್ಮಿಸಲಾದ ಭಿತ್ತಿಪತ್ರಗಳನ್ನು ಜಿಲ್ಲಾಧಿಕಾರಿ ಡಿ.ರಂದೀಪ್ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, 'ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ಬಣ್ಣದ ಗೌರಿ ಗಣೇಶ ವಿಗ್ರಹಗಳ ಬಳಕೆ ಬೇಡ ಈ ಕುರಿತು ಜನರಲ್ಲಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ಭಿತ್ತಿ ಪತ್ರವನ್ನು ಬಿಡುಗಡೆಗೊಳಿಸಲಾಗಿದ್ದು, ಪ್ರಮುಖ ಸ್ಥಳಗಳಲ್ಲಿ ಅವಡಿಸಲಾಗುವುದು. ಶಾಲೆಗಳಲ್ಲಿಯೂ ಈ ಕುರಿತು ಜಾಗೃತಿ ಮೂಡಿಸಲಾಗುವುದು.

Mysuru DC asks people to use eco-friendly Ganesha

ಪ್ಲಾಸ್ಟರ್ ಪ್ಯಾರಿಸ್ ಗಣಪನ ತಡೆಗೆ ವಿಶೇಷ ಪೊಲೀಸ್ ಚೆಕ್ ಪೋಸ್ಟ್ ನಿರ್ಮಿಸಲಾಗುವುದು. ಪ್ಲಾಸ್ಟರ್ ಆಫ್ ಪ್ಯಾರಿಸ್ ಅಥವಾ ಬಣ್ಣದ ಗೌರಿ ಗಣೇಶ ವಿಗ್ರಹಗಳು ಬಳಕೆಯಾಗಿರುವುದು ತಿಳಿದು ಬಂದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು' ಎಂದು ತಿಳಿಸಿದರು.

English summary
Please use eco friendly Ganesh to protect our enivironment, Mysuru Deputy commissioner Randeep requested people. The Ganesha festival will be celebrating in the state on Aug 25th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X