ಕಳೆದೆರಡು ದಿನಗಳಿಂದ ಮಳೆ, ನಂಜನಗೂಡಿನ ಹೆಡತಲೆ ಗ್ರಾಮ ಜಲಾವೃತ
ಮೈಸೂರು, ಮೇ 29 : ಕಳೆದೆರಡು ದಿನಗಳಿಂದ ಮೈಸೂರು ಹಾಗೂ ನಂಜನಗೂಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಗ್ರಾಮಗಳ ಗುಡಿಸಲಿಗೆ ನೀರು ನುಗ್ಗಿ ಮನೆಗಳು ಕುಸಿದು ಬಿದ್ದಿವೆ.
ಹೆಡತಲೆ ಗ್ರಾಮದಲ್ಲಿ 60ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿದ್ದರೆ 6 ಗುಡಿಸಲುಗಳು ನೆಲಕಚ್ಚಿವೆ. ಮಳೆ ಇಲ್ಲದೆ ಕಂಗೆಟ್ಟಿದ್ದ ಜನತೆ ಮಳೆ ಬಂತು ಎಂದು ನಿಟ್ಟುಸಿರು ಬಿಡುವಾಗಲೇ ಅತಿವೃಷ್ಟಿಯಿಂದ ನೂರಾರು ಜನ ಈಗ ಬೀದಿಗೆ ಬಂದು ನಿಲ್ಲುವಂತಾಗಿದೆ.

ಈ ಗ್ರಾಮಮದಲ್ಲಿ ಹರಿಯುವ ಗುಂಡ್ಲು ನದಿ ಪಾತ್ರದ ಮೇಲ್ಭಾಗದಲ್ಲಿ ಸಣ್ಣ ನೀರಾವರಿ ಇಲಾಖೆ ನಿರ್ಮಿಸಿದ್ದ ಹಲವು ಚೆಕ್ಡ್ಯಾಮ್ ಗಳು ಮಳೆ ನೀರಿನ ಪ್ರವಾಹಕ್ಕೆ ಕೊಚ್ಚಿಹೋಗಿವೆ.
ಮಳೆಯಿಂದಾಗಿ ಅನಾಹುತ ಸಂಭವಿಸಿರುವ ವಿಷಯ ತಿಳಿದ ಶಾಸಕ ಕಳಲೆ ಕೇಶವಮೂರ್ತಿ, ತಾಪಂ ಇಒ ರೇವಣ್ಣ ಮತ್ತು ತಹಸಿಲ್ದಾರ್ ಬಸವರಾಜ್ ಚಿಗರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿರು.

ಬಳಿಕ ಪ್ರತಿಕ್ರಿಯಿಸಿದ ಶಾಸಕ ಕಳಲೆ ಕೇಶವಮೂರ್ತಿ, ಗುಂಡ್ಲು ನದಿಗೆ ಸೇತುವೆ ನಿರ್ಮಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರಲ್ಲದೆ, ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ಶ್ರೀಕಂಠೇಶ್ವರ ದೇವಾಲಯದ ದಾಸೋಹ ಭವನದಿಂದ ಊಟದ ವ್ಯವಸ್ಥೆ ಮತ್ತು ಸರ್ಕಾರಿ ಶಾಲೆಗಳಲ್ಲಿ ತಂಗಲು ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು.
ನಂಜನಗೂಡು ನಗರದಲ್ಲೂ ರಾತ್ರಿಯಿಂದ ಮುಂಜಾನೆಯವರಿಗೆ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಬಹುತೇಕ ರಸ್ತೆಗಳೆಲ್ಲಾ ಕೆರೆಯಂತಾಗಿದ್ದವು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications