ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಪೌರಕಾರ್ಮಿಕರ ಮುಷ್ಕರ ಅಂತ್ಯ:ಸಿಎಂ ಸಂಧಾನ ಯಶಸ್ವಿ

|
Google Oneindia Kannada News

ಮೈಸೂರು, ಅಕ್ಡೋಬರ್ 9: ಕಳೆದ ಏಳು ದಿನಗಳಿಂದ ಸ್ವಚ್ಛತಾ ಕಾರ್ಯದಿಂದ ಪೌರಕಾರ್ಮಿಕರು ದೂರ ಉಳಿದ ಪರಿಣಾಮ ಕಸದ ಕೊಂಪೆಯಾಗಿದ್ದ ಮೈಸೂರಿಗೆ ದಸರಾ ಮುನ್ನಾ ದಿನ ಸಿಹಿ ಸುದ್ದಿ ದೊರೆತಿದೆ.

ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಮಂಗಳವಾರ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಪೌರಕಾರ್ಮಿಕರು ಹಾಗೂ ಸರ್ಕಾರದ ನಡುವಿನ ಸಭೆ ಯಶಸ್ವಿಯಾಗಿದ್ದು, ಬುಧವಾರ ಬೆಳಗ್ಗೆಯಿಂದಲೇ ಸ್ವಚ್ಛತಾ ಕಾರ್ಯ ಆರಂಭಿಸುವುದಾಗಿ ಪೌರಕಾರ್ಮಿಕರ ಸಂಘಟನೆ ಘೋಷಿಸಿದೆ.

ಮುಂದುವರೆದ ಪೌರಕಾರ್ಮಿಕರ ಪ್ರತಿಭಟನೆ: ಗಬ್ಬೆದ್ದು ನಾರುತ್ತಿದೆ ಸ್ವಚ್ಛ ನಗರಿ ಮುಂದುವರೆದ ಪೌರಕಾರ್ಮಿಕರ ಪ್ರತಿಭಟನೆ: ಗಬ್ಬೆದ್ದು ನಾರುತ್ತಿದೆ ಸ್ವಚ್ಛ ನಗರಿ

ಸುದೀರ್ಘ ಎರಡು ತಾಸುಗಳ ಸಭೆ ಬಳಿಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿಟಿ ದೇವೇಗೌಡ ಈ ವಿಷಯ ತಿಳಿಸಿದರು. ಕಳೆದ ಏಳು ದಿನಗಳಲ್ಲಿ ಮುಷ್ಕರ ನಡೆಸಿದ್ದ ಪೌರಕಾರ್ಮಿಕರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸುವುದಾಗಿ ಕುಮಾರಸ್ವಾಮಿಯವರು ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆಯಿಂದಲೇ ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯವನ್ನು ಪೌರಕಾರ್ಮಿಕರು ಕೈಗೊಳ್ಳಲಿದ್ದಾರೆ.

Mysuru PKs seven days strike ends

ನಾಡಹಬ್ಬ ದಸರಾ ಅಂಗವಾಗಿ ಮೈಸೂರು ನಗರವನ್ನು ಅಚ್ಚುಕಟ್ಟಾಗಿಡುವ ನಿಟ್ಟಿನಲ್ಲಿ ಅಕ್ಟೋಬರ್ 10ರಿಂದಲೇ ಕರ್ತವ್ಯಕ್ಕೆ ಹಾಜರಾಗುವುದಾಗಿ ಪೌರಕಾರ್ಮಿಕರು ಹೇಳಿದ್ದಾರೆ ಎಂದು ತಿಳಿಸಿದರು.

ಮೈಸೂರು: ಬರಿಗೈನಲ್ಲೇ ಒಳಚರಂಡಿ ಸ್ವಚ್ಛಗೊಳಿಸಿದ ಪೌರಕಾರ್ಮಿಕ ಮೈಸೂರು: ಬರಿಗೈನಲ್ಲೇ ಒಳಚರಂಡಿ ಸ್ವಚ್ಛಗೊಳಿಸಿದ ಪೌರಕಾರ್ಮಿಕ

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪೌರಕಾರ್ಮಿಕ ಸಂಘಟನೆ ಅಧ್ಯಕ್ಷ ನಾರಾಯಣ್ ಅವರು,ಮುಖ್ಯಮಂತ್ರಿಗಳು ನಮ್ಮ ಭರವಸೆಗೆ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯಿಂದಲೇ ಕೆಲಸಕ್ಕೆ ಹಾಜರಾಗುತ್ತೇವೆ ಎಂದು ಪ್ರಕಟಿಸಿದರು.

ಸ್ವಚ್ಛ ನಗರಿಯಲ್ಲಿ ಮೂರನೇ ದಿನಕ್ಕೆ ಕಾಲಿಟ್ಟ ಪೌರಕಾರ್ಮಿಕರ ಪ್ರತಿಭಟನೆ ಸ್ವಚ್ಛ ನಗರಿಯಲ್ಲಿ ಮೂರನೇ ದಿನಕ್ಕೆ ಕಾಲಿಟ್ಟ ಪೌರಕಾರ್ಮಿಕರ ಪ್ರತಿಭಟನೆ

ನಾವು ಪ್ರಮುಖವಾಗಿ ಮೂರು ಬೇಡಿಕೆಗಳನ್ನು ಮುಂದಿಟ್ಟಿದ್ದೆವು, ಆ ಮೂರು ಬೇಡಿಕೆಯನ್ನು ಮುಂಬರುವ ಸಚಿವ ಸಂಪುಟದಲ್ಲಿ ಈಡೇರಿಸುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.ಈ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಆಚರಣೆ ಸುಗಮವಾಗಿ ನಡೆಯುವ ನಿಟ್ಟಿನಲ್ಲಿ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದರು.

ಪೌರಕಾರ್ಮಿಕರ ವೇತನ ವಿಳಂಬ, ಹಿಂದಿರುವ ಆ ಐದು ಕಾರಣಗಳುಪೌರಕಾರ್ಮಿಕರ ವೇತನ ವಿಳಂಬ, ಹಿಂದಿರುವ ಆ ಐದು ಕಾರಣಗಳು

ಮೂರು ಬೇಡಿಕೆಗಳೇನು?: ಪ್ರತಿ 500 ಜನರಿಗೆ ಒಬ್ಬ ಪೌರಕಾರ್ಮಿಕನಂತೆ ಪೌರಕಾರ್ಮಿಕರ ನೇಮಕಾತಿ ನಡೆಸಬೇಕು. ಹಾಲಿ ಇರುವ 700 ಮಂದಿಗೆ ಒಬ್ಬ ಪೌರಕಾರ್ಮಿಕ ಎಂಬ ನೀತಿಯನ್ನು ಕೈಬಿಡಬೇಕು ಎಂಬ ಬೇಡಿಕೆಗಳಿಗೆ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

English summary
In a crucial meeting with Poura Karmika's union of Mysuru, chief minister H.D. Kumaraswamy had convince to end their seven days strike in Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X