ಮೈಸೂರು ವಿಜ್ಞಾನ ಹಬ್ಬಕ್ಕೆ 10,000 ಮಂದಿ ಬರುವ ನಿರೀಕ್ಷೆ
ಮೈಸೂರು, ಡಿಸೆಂಬರ್,26: ಸಾಂಸ್ಕೃತಿಕ ನಗರಿ ಮೈಸೂರು ಜನವರಿ 3 ರಿಂದ 7ರವರೆಗೆ ನಡೆಯುವ 103ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಅಧಿವೇಶನಕ್ಕೆ ಭರದಿಂದಲೇ ಸಜ್ಜುಗೊಳ್ಳುತ್ತಿದೆ. ಈಗಾಗಲೇ ಎಲ್ಲೆಡೆ ಬಿಗಿ ಬಂದೋಬಸ್ತ್ ಏರ್ಪಡಿಲಾಗಿದ್ದು, ವಿಶ್ವಮಟ್ಟದ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.
ಮೈಸೂರು ವಿಶ್ವವಿದ್ಯಾಲಯ 100 ವರ್ಷ ಪೂರೈಸಿದ ಸಂಭ್ರಮದ ಹಿನ್ನೆಲೆಯಲ್ಲೇ ಮೈಸೂರಿನ ಮಾನಸ ಗಂಗೋತ್ರಿ ಆವರಣದಲ್ಲಿ 103ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಅಧಿವೇಶನ ಉದ್ಘಾಟನೆ ಹಮ್ಮಿಕೊಂಡಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ವಿಭಿನ್ನ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಲಿದ್ದಾರೆ ಎಂದು ಮೈಸೂರು ವಿವಿ ಕುಲಪತಿ ರಂಗಪ್ಪ ತಿಳಿಸಿದರು.[ದೇಶದ ಅತಿದೊಡ್ಡ ವಿಜ್ಞಾನ ಹಬ್ಬಕ್ಕೆ ಮೈಸೂರು ಸಿದ್ಧತೆ]

103ನೇ ಮೈಸೂರು ವಿಜ್ಞಾನ ಹಬ್ಬ ಕಾರ್ಯಕ್ರಮದಲ್ಲಿ 'ಭಾರತದ ಬೆಳವಣಿಗೆಗೆ ವಿಜ್ಞಾನ ತಂತ್ರಜ್ಞಾನ ಹೇಗೆ ಪೂರಕವಾಗಲಿದೆ' ಎಂಬ ವಿಷಯ ಮೇಲೆ ವಿಚಾರಗೋಷ್ಠಿ ನಡೆಯಲಿದೆ. ಈ ವಿಶ್ವಮಟ್ಟದ ಅಧಿವೇಶನಕ್ಕೆ ಬರುವ ಪ್ರತಿಯೊಬ್ಬರಿಗೂ ಊಟ, ವಸತಿ ಸೌಲಭ್ಯ, ಸಮಾವೇಶಕ್ಕೆ ಸಂಬಂಧಿಸಿದ ಮಾಹಿತಿ ಕಿಟ್ ಸೇರಿದಂತೆ 1,800 ವೆಚ್ಚವನ್ನು ಮಾತ್ರ ತೆಗೆದುಕೊಳ್ಳುತ್ತಿದ್ದೇವೆ. ಚೀನಾದ ಮಂದಿಯೇ ಹೆಚ್ಚು ಆಗಮಿಸುವ ಸಾಧ್ಯತೆ ಇದೆ ಎಂದು ಡಾ. ರಾಜ ರಾಮಣ್ಣ ಹೇಳಿದರು.
ಈ ಕಾರ್ಯಕ್ರಮಕ್ಕೆ ಆಗಮಿಸಲು ಸುಮಾರು 8000 ಕ್ಕೂ ಹೆಚ್ಚು ಮಂದಿ ನೋಂದವಣೆ ಮಾಡಿಕೊಂಡಿದ್ದು, ಹಿರಿಯರು, ಕಿರಿಯರು ಸೇರಿದಂತೆ ಸುಮಾರು 10,000ಕ್ಕೂ ಹೆಚ್ಚು ಮಂದಿ ಈ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಾದ್ಯತೆ ಇದೆ. ಈಗಾಗಲೇ ಮದುವೆ ಮಂಟಪ ಸೇರಿದಂತೆ ಹಲವಾರು ಕಡೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. 8,500 ಹೋಟೆಲ್ ಕೋಣೆ, ಸುತ್ತೂರು ಮಠದಲ್ಲಿ 800ಕೋಣೆಗಳನ್ನು ಆಗಮಿಸುವ ಗಣ್ಯರಿಗಾಗಿ ಕಾಯ್ದಿರಿಸಲಾಗಿದೆ.[ದಲೈಲಾಮರ ರಕ್ಷಣಾ ಸಿಬ್ಬಂದಿಗೆ ನಾಯಿ ಕಚ್ಚಿದರೂ ರಜೆ ಇಲ್ಲ!]

ಮಹಿಳಾ ವಿಜ್ಞಾನ ಕಾಂಗ್ರೆಸ್ ಮತ್ತು ಮಕ್ಕಳ ವಿಜ್ಞಾನ ಕಾಂಗ್ರೆಸ್ ಎಂಬ ಎರಡು ವಿಭಾಗದಲ್ಲಿ ನಡೆಯುವ ಈ ಕಾರ್ಯಕ್ರಮವು ಜನವರಿ 7ರಂದು ಮುಕ್ತಾಯವಾಗಲಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ವಿದ್ಯಾರ್ಥಿಗಳು ಸೇರಿದಂತೆ ಸಾಮಾನ್ಯವಾರ್ಗದವರಿಗೂ ತಲುಪಲಿ ಎಂಬ ಉದ್ದೇಶದಿಂದ ನೋಂದಾವಣಿಗೆ ಕಡಿಮೆ ಹಣ ನಿಗದಿಪಡಿಸಲಾಗಿದೆ ಎಂದು 103ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ನ ಕಾರ್ಯದರ್ಶಿ ಡಾ.ಎನ್ ಬಿ ರಾಮಚಂದ್ರ ತಿಳಿಸಿದರು.
ವಿಜ್ಞಾನವು ಸಾಮಾನ್ಯ ಜನರ ಸಮಸ್ಯೆಯನ್ನು ಬಗೆಹರಿಸುವಲ್ಲಿ ಮೈಲಿಗಲ್ಲಾಗಲಿದೆ. ಇದರಿಂದ ಆರ್ಥಿಕ ಬೆಳವಣಿಗೆ ಮತ್ತು ಜನರ ಜೀವನ ಮಟ್ಟ ಸುಧಾರಣೆಯಾಗಲಿದೆ. ಆದರೆ ಇದು ನಮ್ಮ ಆಲೋಚನ ಮಟ್ಟವನ್ನು ಮತ್ತಷ್ಟು ಸುಧಾರಿಸಿಕೊಳ್ಳುವಲ್ಲಿ ಇದು ಒಳ್ಳೆಯ ಸಮಯ ಎಂದು ತಳಿಶಾಸ್ತ್ರ ಪ್ರಾಧ್ಯಾಪಕರಾದ ಡಾ. ರಾಮಚಂದ್ರ ಕಾರ್ಯಕ್ರಮದ ಉಪಯೋಗದ ಬಗ್ಗೆ ಮಾಹಿತಿ ಒದಗಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications