ಮೈಸೂರು ವಿಜ್ಞಾನ ಹಬ್ಬಕ್ಕೆ 10,000 ಮಂದಿ ಬರುವ ನಿರೀಕ್ಷೆ
ಮೈಸೂರು, ಡಿಸೆಂಬರ್,26: ಸಾಂಸ್ಕೃತಿಕ ನಗರಿ ಮೈಸೂರು ಜನವರಿ 3 ರಿಂದ 7ರವರೆಗೆ ನಡೆಯುವ 103ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಅಧಿವೇಶನಕ್ಕೆ ಭರದಿಂದಲೇ ಸಜ್ಜುಗೊಳ್ಳುತ್ತಿದೆ. ಈಗಾಗಲೇ ಎಲ್ಲೆಡೆ ಬಿಗಿ ಬಂದೋಬಸ್ತ್ ಏರ್ಪಡಿಲಾಗಿದ್ದು, ವಿಶ್ವಮಟ್ಟದ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.
ಮೈಸೂರು ವಿಶ್ವವಿದ್ಯಾಲಯ 100 ವರ್ಷ ಪೂರೈಸಿದ ಸಂಭ್ರಮದ ಹಿನ್ನೆಲೆಯಲ್ಲೇ ಮೈಸೂರಿನ ಮಾನಸ ಗಂಗೋತ್ರಿ ಆವರಣದಲ್ಲಿ 103ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಅಧಿವೇಶನ ಉದ್ಘಾಟನೆ ಹಮ್ಮಿಕೊಂಡಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ವಿಭಿನ್ನ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಲಿದ್ದಾರೆ ಎಂದು ಮೈಸೂರು ವಿವಿ ಕುಲಪತಿ ರಂಗಪ್ಪ ತಿಳಿಸಿದರು.[ದೇಶದ ಅತಿದೊಡ್ಡ ವಿಜ್ಞಾನ ಹಬ್ಬಕ್ಕೆ ಮೈಸೂರು ಸಿದ್ಧತೆ]

103ನೇ ಮೈಸೂರು ವಿಜ್ಞಾನ ಹಬ್ಬ ಕಾರ್ಯಕ್ರಮದಲ್ಲಿ 'ಭಾರತದ ಬೆಳವಣಿಗೆಗೆ ವಿಜ್ಞಾನ ತಂತ್ರಜ್ಞಾನ ಹೇಗೆ ಪೂರಕವಾಗಲಿದೆ' ಎಂಬ ವಿಷಯ ಮೇಲೆ ವಿಚಾರಗೋಷ್ಠಿ ನಡೆಯಲಿದೆ. ಈ ವಿಶ್ವಮಟ್ಟದ ಅಧಿವೇಶನಕ್ಕೆ ಬರುವ ಪ್ರತಿಯೊಬ್ಬರಿಗೂ ಊಟ, ವಸತಿ ಸೌಲಭ್ಯ, ಸಮಾವೇಶಕ್ಕೆ ಸಂಬಂಧಿಸಿದ ಮಾಹಿತಿ ಕಿಟ್ ಸೇರಿದಂತೆ 1,800 ವೆಚ್ಚವನ್ನು ಮಾತ್ರ ತೆಗೆದುಕೊಳ್ಳುತ್ತಿದ್ದೇವೆ. ಚೀನಾದ ಮಂದಿಯೇ ಹೆಚ್ಚು ಆಗಮಿಸುವ ಸಾಧ್ಯತೆ ಇದೆ ಎಂದು ಡಾ. ರಾಜ ರಾಮಣ್ಣ ಹೇಳಿದರು.
ಈ ಕಾರ್ಯಕ್ರಮಕ್ಕೆ ಆಗಮಿಸಲು ಸುಮಾರು 8000 ಕ್ಕೂ ಹೆಚ್ಚು ಮಂದಿ ನೋಂದವಣೆ ಮಾಡಿಕೊಂಡಿದ್ದು, ಹಿರಿಯರು, ಕಿರಿಯರು ಸೇರಿದಂತೆ ಸುಮಾರು 10,000ಕ್ಕೂ ಹೆಚ್ಚು ಮಂದಿ ಈ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಾದ್ಯತೆ ಇದೆ. ಈಗಾಗಲೇ ಮದುವೆ ಮಂಟಪ ಸೇರಿದಂತೆ ಹಲವಾರು ಕಡೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. 8,500 ಹೋಟೆಲ್ ಕೋಣೆ, ಸುತ್ತೂರು ಮಠದಲ್ಲಿ 800ಕೋಣೆಗಳನ್ನು ಆಗಮಿಸುವ ಗಣ್ಯರಿಗಾಗಿ ಕಾಯ್ದಿರಿಸಲಾಗಿದೆ.[ದಲೈಲಾಮರ ರಕ್ಷಣಾ ಸಿಬ್ಬಂದಿಗೆ ನಾಯಿ ಕಚ್ಚಿದರೂ ರಜೆ ಇಲ್ಲ!]

ಮಹಿಳಾ ವಿಜ್ಞಾನ ಕಾಂಗ್ರೆಸ್ ಮತ್ತು ಮಕ್ಕಳ ವಿಜ್ಞಾನ ಕಾಂಗ್ರೆಸ್ ಎಂಬ ಎರಡು ವಿಭಾಗದಲ್ಲಿ ನಡೆಯುವ ಈ ಕಾರ್ಯಕ್ರಮವು ಜನವರಿ 7ರಂದು ಮುಕ್ತಾಯವಾಗಲಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ವಿದ್ಯಾರ್ಥಿಗಳು ಸೇರಿದಂತೆ ಸಾಮಾನ್ಯವಾರ್ಗದವರಿಗೂ ತಲುಪಲಿ ಎಂಬ ಉದ್ದೇಶದಿಂದ ನೋಂದಾವಣಿಗೆ ಕಡಿಮೆ ಹಣ ನಿಗದಿಪಡಿಸಲಾಗಿದೆ ಎಂದು 103ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ನ ಕಾರ್ಯದರ್ಶಿ ಡಾ.ಎನ್ ಬಿ ರಾಮಚಂದ್ರ ತಿಳಿಸಿದರು.
ವಿಜ್ಞಾನವು ಸಾಮಾನ್ಯ ಜನರ ಸಮಸ್ಯೆಯನ್ನು ಬಗೆಹರಿಸುವಲ್ಲಿ ಮೈಲಿಗಲ್ಲಾಗಲಿದೆ. ಇದರಿಂದ ಆರ್ಥಿಕ ಬೆಳವಣಿಗೆ ಮತ್ತು ಜನರ ಜೀವನ ಮಟ್ಟ ಸುಧಾರಣೆಯಾಗಲಿದೆ. ಆದರೆ ಇದು ನಮ್ಮ ಆಲೋಚನ ಮಟ್ಟವನ್ನು ಮತ್ತಷ್ಟು ಸುಧಾರಿಸಿಕೊಳ್ಳುವಲ್ಲಿ ಇದು ಒಳ್ಳೆಯ ಸಮಯ ಎಂದು ತಳಿಶಾಸ್ತ್ರ ಪ್ರಾಧ್ಯಾಪಕರಾದ ಡಾ. ರಾಮಚಂದ್ರ ಕಾರ್ಯಕ್ರಮದ ಉಪಯೋಗದ ಬಗ್ಗೆ ಮಾಹಿತಿ ಒದಗಿಸಿದರು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications