ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕನ್ನಡ ಸಾಹಿತ್ಯ ಸಮ್ಮೇಳನ: ಮೈಸೂರಿನ ಶಾಲೆಗಳಿಗೆ ನ.24, 25 ರಜಾ

|
Google Oneindia Kannada News

ಮೈಸೂರು, ನವೆಂಬರ್ 22: ಇದೇ ತಿಂಗಳ 24, 25, ಮತ್ತು 26ನೇ ತಾರೀಕು ಮೈಸೂರಿನಲ್ಲಿ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಎರಡು ದಿನ (ನವೆಂಬರ್ 24, 25) ಮೈಸೂರು ಜಿಲ್ಲೆ ವ್ಯಾಪ್ತಿಯ ಶಾಲೆಗಳಿಗೆ ರಜಾ ಘೋಷಿಸಲಾಗಿದೆ.

ಮೈಸೂರು: ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ಮಾದರಿ ಕದ್ದಿದ್ದಂತೆ!ಮೈಸೂರು: ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ಮಾದರಿ ಕದ್ದಿದ್ದಂತೆ!

ಈ ಎರಡು ದಿನ ರಜಾ ನೀಡುವುದರಿಂದ ವಿದ್ಯಾರ್ಥಿಗಳಿಗೆ ಪಾಠ-ಪ್ರವಚನಕ್ಕೆ ಹಾಗೂ ಪಠ್ಯಕ್ರಮ ಪೂರ್ಣಗೊಳಿಸಲು ಯಾವುದೇ ತೊಂದರೆ ಆಗದಂತೆ ಮುಂದಿನ ಶನಿವಾರಗಳಂದು ಪೂರ್ತಿ ದಿನ ಶಾಲೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ.

Kannada

83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಈ ಬಾರಿ ಮೈಸೂರಿನಲ್ಲಿ ನಡೆಯಲಿದ್ದು, ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಚಂದ್ರಶೇಖರ ಪಾಟೀಲ (ಚಂಪಾ) ಆಯ್ಕೆ ಆಗಿದ್ದಾರೆ. ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾಗಿದ್ದು, ಅವರ ಆಡಳಿತಾವಧಿಯ ಕೊನೆ ಘಟ್ಟ ಇದಾಗಿದೆ. ಆದ್ದರಿಂದ ಸ್ಮರಣೀಯ ಎನಿಸುವಂತೆ ಅಚ್ಚುಕಟ್ಟಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ತಯಾರಿ ನಡೆದಿದೆ.

English summary
November 24th, 25th holiday declared for Mysuru district schools on the event of 83rd All India Kannada Literature Convention, which will be held in Mysuru between November 24 to 26th. Chandrashekhara Patila (Champa) will preside the convention.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X