ಜೆಡಿಎಸ್ ನಂತೆ ಕಾಂಗ್ರೆಸ್ ಕೂಡ ಅಪ್ಪ-ಮಕ್ಕಳ ಪಕ್ಷ: ವಿಶ್ವನಾಥ್
ರಾಜ್ಯದಲ್ಲಿ ಕಾಂಗ್ರೆಸ್ ಕೂಡ ಜೆಡಿಎಸ್ ನಂತೆಯೇ ಅಪ್ಪ-ಮಕ್ಕಳ ಪಕ್ಷವಾಗುತ್ತಿದೆ ಎಂದು ಸಿದ್ದರಾಮಯ್ಯ ಮತ್ತವರ ಮಗ ಯತೀಂದ್ರ ಅವರ ಬಗ್ಗೆ ಮೈಸೂರಿನಲ್ಲಿ ಕುಟುಕಿದ್ದಾರೆ ಮಾಜಿ ಸಚಿವ ಎಚ್.ವಿಶ್ವನಾಥ್
ಮೈಸೂರು, ಏಪ್ರಿಲ್ 7: ಕಾಂಗ್ರೆಸ್ ಕೂಡ ಜೆಡಿಎಸ್ ಹಾದಿಯನ್ನು ಹಿಡಿದಿದ್ದು, ಅಪ್ಪ-ಮಕ್ಕಳ ಪಕ್ಷವಾಗುತ್ತಿದೆ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದ್ದಾರೆ. ಮೈಸೂರಿನಲ್ಲಿ ಗುರುವಾರ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗಾಗಿ ಜೆಡಿಎಸ್ ವರಿಷ್ಠ ದೇವೇಗೌಡ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಆ ಮೂಲಕ ಕಾಂಗ್ರೆಸ್ ಬೆಂಬಲಕ್ಕೆ ನಿಂತಿದ್ದಾರೆ ಎಂದು ಅವರು ಹೇಳಿದ್ದಾರೆ.
ಸರಕಾರದಲ್ಲಿ ಆಗುತ್ತಿರುವ ಸೋರಿಕೆಯನ್ನು ತಡೆದು, ರೈತರ ಸಾಲಮನ್ನಾ ಮಾಡಬೇಕು. ಈ ನಿಟ್ಟಿನಲ್ಲಿ ಉತ್ತರಪ್ರದೇಶ ಸರಕಾರ ಕರ್ನಾಟಕಕ್ಕೆ ಆದರ್ಶವಾಗಲಿ. ಇದರ ಜತೆಗೆ ಧರಣಿ, ಪ್ರತಿಭಟನಾನಿರತರ ಮೇಲಿನ ಪೊಲೀಸ್ ದೌರ್ಜನ್ಯ ನಿಲ್ಲಬೇಕು ಎಂದು ಅಭಿಪ್ರಾಯಪಟ್ಟರು.[ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಒನ್ಇಂಡಿಯಾ ಸಂದರ್ಶನ]

ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ ಸ್ವಪ್ರತಿಷ್ಠೆಯ ಕಣವಾಗಿದೆ. ಇದು ಪ್ರಜಾಪ್ರಭುತ್ವ ವಿರೋಧಿ. ಹಾಲಿ ಹಾಗೂ ಮಾಜಿ ಮುಖ್ಯಮಂತ್ರಿಗಳು ಏಕವಚನದಲ್ಲಿ ದೋಷಾರೋಪ ಮಾಡುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಧಕ್ಕೆಯಾಗುತ್ತದೆ. ಇಬ್ಬರೂ ಚುನಾವಣೆ ಸಂಸ್ಕøತಿಯನ್ನೇ ಕೊಂದಿದ್ದಾರೆ. ಸಾರ್ವಜನಿಕರು ನಾಯಕರಿಂದ ಇಂಥದ್ದನ್ನು ನಿರೀಕ್ಷಿಸುವುದಿಲ್ಲ ಎಂದಿದ್ದಾರೆ.
ಇನ್ನೊಂದು ವರ್ಷಕ್ಕೆ ಚುನಾವಣೆ ಎದುರಾಗಲಿದೆ. ಈ ಉಪಚುನಾವಣೆಗೆ ಈ ಪ್ರಮಾಣದಲ್ಲಿ ರಾಜ್ಯ ನಾಯಕರನ್ನು ಬಳಸುವ ಅಗತ್ಯ ಇರಲಿಲ್ಲ. ಸ್ಥಳೀಯ ಮುಖಂಡರು, ನಾಯಕರನ್ನು ದೂರ ಮಾಡಿದ್ದು ಉತ್ತಮ ವಾತಾವರಣವಲ್ಲ ಎಂದು ಅವರು ಹೇಳಿದ್ದಾರೆ.[ಸಿದ್ದರಾಮಯ್ಯ ರಾಜಕೀಯ ನಿವೃತ್ತರಾಗಲ್ಲ: ಡಾ ಯತೀಂದ್ರ ಸಂದರ್ಶನ]
ಮೂವತ್ತು ವರ್ಷಗಳಿಂದ ಕಾಂಗ್ರೆಸ್ ಗಾಗಿ ದುಡಿದಿದ್ದೇನೆ. ಪಕ್ಷದಲ್ಲಿ ಹಿರಿಯ ನಾಯಕರಿಗೆ ಬೆಲೆ ಇಲ್ಲ. ಆದರೂ ಪಕ್ಷ ಬಿಡುವ ಆಲೋಚನೆ ಮಾಡಿಲ್ಲ. ಏಪ್ರಿಲ್ 15ರಂದು ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ, ಇಲ್ಲಿನ ಪರಿಸ್ಥಿತಿ ಬಗ್ಗೆ ವಿವರಿಸುತ್ತೇನೆ ಎಂದು ವಿಶ್ವನಾಥ್ ತಿಳಿಸಿದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications