ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಬಿನಿ ಡ್ಯಾಂ ಬಳಿ 50 ಎಕರೆಯಲ್ಲಿ ಉದ್ಯಾನವನ

|
Google Oneindia Kannada News

ಬೆಂಗಳೂರು, ಜು. 21 : ಕರ್ನಾಟಕ ಸರ್ಕಾರ ಕಬಿನಿ ಜಲಾಶಯದ ಸಮೀಪದಲ್ಲಿ ಕೆಆರ್ ಎಸ್ ಬೃಂದಾವನ ಮಾದರಿಯಲ್ಲಿ ಉದ್ಯಾನವ ನಿರ್ಮಿಸಲಿದೆ ಎಂದು ಕಂದಾಯ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ಭಾನುವಾರ ಪೂರ್ಣ ತುಂಬಿರುವ ಕಬಿನಿ ಜಲಾಶಯಕ್ಕೆ ಭಾಗಿನ ಅರ್ಪಿಸಿ ಅವರು ಮಾತನಾಡುತ್ತಿದ್ದರು.

ಭಾನುವಾರ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಬಳಿಯ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ಮಾತನಾಡಿದ ಸಚಿವ ವಿ.ಶ್ರೀನಿವಾಸ ಪ್ರಸಾದ್, ಕೆಆರ್ ಎಸ್ ಜಲಾಶಯದಲ್ಲಿರುವ ಬೃಂದಾವನದ ಮಾದರಿಯಲ್ಲಿ ಕಬಿನಿ ಜಲಾಶಯದ ಸುತ್ತಲೂ 50 ಎಕರೆ ಪ್ರದೇಶದಲ್ಲಿ ಉದ್ಯಾನವನ ನಿರ್ಮಿಸಿ, ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.

Kabini

ಕಬಿನಿ ಜಲಾಶಯ ತುಂಬಿದ ಬಳಿಕ 20,000 ಕ್ಯುಸೆಕ್ ನೀರು ಹೊರಬಿಟ್ಟರೆ ಜಲಾಶಯದ ಮುಂದಿರುವ ಸೇತುವೆ ಮುಳುಗಡೆಯಾಗುತ್ತದೆ ಎಂಬ ಬಗ್ಗೆ ಮಾಹಿತಿ ನೀಡಿದ ಸಚಿವರು, ಸೇತುವೆ ಎತ್ತರವನ್ನು ಹೆಚ್ಚಿಸುವ ಕಾಮಗಾರಿಯನ್ನು ಶೀಘ್ರದಲ್ಲೇ ಕೈಗೊಳ್ಳಲಾಗುತ್ತದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಹಲವು ಯೋಜನೆಗಳನ್ನು ಜಾರಿಗೊಳಿಸಲು ಮುಂದಾಗಿದ್ದಾರೆ ಎಂದು ತಿಳಿಸಿದರು. [ದಸರಾ ಉದ್ಘಾಟಿಸಲಿದ್ದಾರೆ ಗಿರೀಶ್ ಕಾರ್ನಾಡ್]

ತುಂಬಿದ ಕಬಿನಿ : ಕಬಿನಿ ಜಲಾಶಯ ಕಳೆದ ಗುರುವಾರವೇ ಭರ್ತಿಯಾಗಿತ್ತು. ಗರಿಷ್ಠ ಮಟ್ಟ 2,284 ಅಡಿ ಜಲಾಶಯದಲ್ಲಿ ಅಪಾಯ ಮಟ್ಟ ತಲುಪುವುದನ್ನು ತಪ್ಪಿಸುವ ಸಲುವಾಗಿ 2,281 ಅಡಿಗಳಷ್ಟು ನೀರನ್ನು ಸಂಗ್ರಹಿಸ­ಲಾಗಿದೆ. ಸದ್ಯ ಜಲಾಶಯದಲ್ಲಿ 17 ಟಿಎಂಸಿ ನೀರು ಸಂಗ್ರಹಣೆಯಾಗಿದೆ.

English summary
The Karnataka government is planning to develop a park on 55 acres of land close to the Kabini reservoir, on the lines of the Brindavan Garden of Krishnaraja Sagar reservoir, said Revenue Minister V.Sreenivas Prasad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X