ನಂಜನಗೂಡಿನಲ್ಲಿ ಅಭ್ಯರ್ಥಿ ಹಾಕುತ್ತೇವೆ : ದೇವೇಗೌಡ
Recommended Video
ಮೈಸೂರು, ಡಿಸೆಂಬರ್. 14 : '2018ರ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ. ಉಪ ಚುನಾವಣೆಗೆ ಮಾತ್ರ ಅಭ್ಯರ್ಥಿ ಹಾಕಿರಲಿಲ್ಲ' ಎಂದು ಎಚ್.ಡಿ.ದೇವೇಗೌಡ ಹೇಳಿದರು.
ಗುರುವಾರ ನಂಜನಗೂಡಿನಲ್ಲಿ ಮಾತನಾಡಿದ ದೇವೇಗೌಡರು, '2013ರ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಸೋತಿದ್ದರು' ಎಂದರು.
ನಂಜನಗೂಡು: ಕಾಂಗ್ರೆಸ್ ಗೆದ್ದಿದ್ದೆಲ್ಲಿ? ಬಿಜೆಪಿ ಸೋತಿದ್ದೆಲ್ಲಿ?
'ಬಿಜೆಪಿಗೆ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಲ್ಲ. ಆದ್ದರಿಂದ, ಉಪ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. 2018ರ ಚುನಾವಣೆಗೆ ಅಭ್ಯರ್ಥಿ ಹಾಕುತ್ತೇವೆ' ಎಂದು ತಿಳಿಸಿದರು.
ಕಾಂಗ್ರೆಸ್ ಗೆಲುವಿಗೆ ಸೋಪಾನವಾದ 9 ಸಂಗತಿಗಳು
'ಸಂಬಂಧಿಕರ ಒತ್ತಾಯಕ್ಕೆ ಮಣಿದು, ಅರ್ಧ ವರ್ಷಕ್ಕಾಗಿ ಪಕ್ಷ ಬಿಟ್ಟು ಹೋಗಿದ್ದಾರೆ' ಎಂದು ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಶಾಸಕ ಕಳಲೆ ಕೇಶವಮೂರ್ತಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.
'ಶ್ರೀನಿವಾಸ ಪ್ರಸಾದ್ ಅವರು ಪಕ್ಷ ಬಿಟ್ಟು ಹೋದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಪ ಮಾಡಿಕೊಂಡರು. ಶ್ರೀನಿವಾಸ ಪ್ರಸಾದ್ ಅವರಷ್ಟು ಒಳ್ಳೆಯ ವ್ಯಕ್ತಿ ಇನ್ನೊಬ್ಬರಿಲ್ಲ' ಎಂದರು.