ಅಪಘಾತದಿಂದ ಪಾರಾದ ಪೊಲೀಸ್ ಅಧಿಕಾರಿ ಹೃದಯಾಘಾತದಿಂದ ಸಾವು
ಮೈಸೂರು, ಜನವರಿ 10: ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಬಳಿಯ ಹೆದ್ದಾರಿಯಲ್ಲಿ ನಡೆದಿದ್ದ ಸರಣಿ ಅಪಘಾತದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಎಸ್ಕಾರ್ಟ್ ಕಾರು ಜಖಂಗೊಂಡಿತ್ತು. ಆಗ ಆ ಎಸ್ಕಾರ್ಟ್ ವಾಹನದಲ್ಲಿದ್ದ ಪೊಲೀಸ್ ಅಧಿಕಾರಿ ಇದೀಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ
ಪೊಲೀಸ್ ಅಧಿಕಾರಿ ಮರೀಗೌಡ (56) ಮಂಡ್ಯ ಪೊಲೀಸ್ ನಿವಾಸದಲ್ಲಿ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ. ಮರೀಗೌಡ ನಿನ್ನೆ ಬೆಳಗ್ಗೆ ಟಿ.ಎಂ.ಹೊಸೂರು ಗೇಟ್ ಬಳಿ ನಡೆದಿದ್ದ ಸರಣಿ ಅಪಘಾತ ಪ್ರಕರಣದಲ್ಲಿ ದೂರುದಾರರಾಗಿದ್ದರು.
ತುಳುಭಾಷೆ, ಸಂಸ್ಕೃತಿಯ ಸಂಶೋಧಕ ಪ್ರೊ.ಪೀಟರ್ ಜೆ ಕ್ಲಾಸ್ ಇನ್ನಿಲ್ಲ
ಸರಣಿ ಅಪಘಾತದಲ್ಲಿ 3 ಪೊಲೀಸ್ ವಾಹನಗಳು, 2 ಖಾಸಗಿ ವಾಹನಗಳು ಜಖಂಗೊಂಡಿದ್ದವು. ಅದರಲ್ಲಿ ಮರೀಗೌಡ ಕೆಎ-11 ಜಿ-591 ಸಂಖ್ಯೆಯ ವಾಹನದಲ್ಲಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಮೈಸೂರಿಗೆ ಬೆಂಗಾವಲು ವಾಹನದೊಂದಿಗೆ ಸಿದ್ದರಾಮಯ್ಯ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.