ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿಪಾ ವೈರಸ್: ಮಂಡ್ಯ, ಮಡಿಕೇರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ಸ್ಥಾಪನೆ

By ಬೆಂಗಳೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮೇ 23 : ಕೇರಳದ ಎರಡು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿರುವ ನಿಪಾ ವೈರಸ್ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಜಿಲ್ಲೆಗಳಲ್ಲೂ ಕೂಡಾ ಕಟ್ಟೆಚ್ಚರಿಕೆ ವಹಿಸಲಾಗಿದೆ. ಒಂದೊಮ್ಮೆ ಶಂಕಿತ ವೈರಸ್ ಸೋಂಕಿತರು ಪತ್ತೆಯಾದರೆ ಅವರಿಗೆ ಚಿಕಿತ್ಸೆ ನೀಡಲೆಂದು ಮಂಡ್ಯ, ಗುಂಡ್ಲುಪೇಟೆ ಹಾಗೂ ಮಡಿಕೇರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾದ ವಾರ್ಡ್ ಗಳನ್ನು ಸೃಜಿಸಲಾಗಿದೆ.

ಸಾಯುವ ಮುನ್ನ ನರ್ಸ್ ಲಿನಿ ಹೇಳಿದ ಮಾತುಗಳೇನು!?ಸಾಯುವ ಮುನ್ನ ನರ್ಸ್ ಲಿನಿ ಹೇಳಿದ ಮಾತುಗಳೇನು!?

ಆರೋಗ್ಯ ಇಲಾಖೆಯ ಮೂಲಗಳ ಪ್ರಕಾರ ಈ ಮೂರು ಜಿಲ್ಲೆಗಳೂ ಕೇರಳದ ಗಡಿಗೆ ಹೊಂದಿಕೊಂಡಂತಿವೆ. ಹೀಗಾಗಿ ಸಹಜವಾಗಿಯೇ ಪ್ರವಾಸಿಗರ ಓಡಾಟ, ವ್ಯಾಪಾರ ವಹಿವಾಟು ಹೆಚ್ಚು. ಈ ಹಿನ್ನೆಲೆಯಲ್ಲಿ ಒಂದೊಮ್ಮೆ ನಿಪಾ ವೈರಸ್ ಈ ಜಿಲ್ಲೆಗಳಿಗೂ ಹರಡಿದರೆ ಎಂಬ ಕಾರಣಕ್ಕಾಗಿ, ರೋಗಿಗಳಿಗೆ ಚಿಕಿತ್ಸೆ ನೀಡಲು ಈ ಪ್ರತ್ಯೇಕ ವಾರ್ಡ್ ಗಳನ್ನು ಸೃಜಿಸಲಾಗಿದೆ.

Separate wards were installed at Mandya, Madikeri public hospitals to treat

ಈ ವಾರ್ಡ್ ಗಳನ್ನು ಐಸೋಲೇಶನ್ ವಾರ್ಡ್ ಗಳೆಂದು ಕರೆಯಲಾಗುವುದು. ರೋಗ ಇನ್ನೊಬ್ಬರಿಗೆ ಹರಡದಿರಲಿ ಎಂಬ ಕಾರಣಕ್ಕಾಗಿ ಇಲ್ಲಿ ಪ್ರತ್ಯೇಕವಾಗಿ ಶಂಕಿತರಿಗೆ ಚಿಕಿತ್ಸೆ ನೀಡಲಾಗುವುದು. ಖಾಸಗಿ ಆಸ್ಪತ್ರೆಗಳಲ್ಲಿ ಇಂತಹ ವ್ಯವಸ್ಥೆ ಇರುವುದಿಲ್ಲ ಎನ್ನುತ್ತಾರೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು.

ನಿಪಾಹ್ ವೈರಸ್ ಎಂದರೇನು? ಮಾರಣಾಂತಿಕ ಜ್ವರದ ಕುರಿತು ಮಾಹಿತಿ ನಿಪಾಹ್ ವೈರಸ್ ಎಂದರೇನು? ಮಾರಣಾಂತಿಕ ಜ್ವರದ ಕುರಿತು ಮಾಹಿತಿ

ಪೋರ್ಕ್ ಆಮದು ನಿಷೇಧ?
ಈ ನಡುವೆ ಕೇರಳದ ಗಡಿಗೆ ಹೊಂದಿಕೊಂಡಿರುವ ಚಾಮರಾಜನಗರದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಈ ರೋಗಾಣು ಹಂದಿಗಳ ಮೂಲಕ ಕೂಡಾ ಹರಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಬಿಬಿ ಕಾವೇರಿ ಜಿಲ್ಲೆಯಿಂದ ಹಂದಿ ಉತ್ಪನ್ನಗಳ ಆಮದು-ರಫ್ತು ಸಂಪೂರ್ಣ ನಿಷೇಧ ಮಾಡುವ ಪ್ರಸ್ತಾಪ ಮುಂದಿಟ್ಟಿದ್ದಾರೆ.

English summary
In the wake of nipah virus appearing in two districts of Kerala even in the border districts of Karnataka awareness is taken. Separate wards were installed at Mandya, Gundlupet and Madikeri public hospitals to treat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X