ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮದುವೆ ನಿಶ್ಚಯವಾಗಿದ್ದ ಯೋಧ ಎದೆನೋವಿನಿಂದ ಸಾವು

By ಮೈಸೂರು ಪ್ರತಿನಿಧಿ
|
Google Oneindia Kannada News

ಕೆ.ಆರ್.ನಗರ, ಡಿಸೆಂಬರ್ 8: ಎದೆನೋವು ಕಾಣಿಸಿಕೊಂಡು ಚಿಕಿತ್ಸೆಗೆ ದಾಖಲಾಗಿದ್ದ ಯೋಧನೊಬ್ಬ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಕೆ.ಆರ್.ನಗರ ತಾಲೂಕಿನ ಕನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಮಂಜುನಾಥ್ ಎಂಬುವರ ಪುತ್ರ ಪ್ರತೀಪ್ (28) ಮೃತಪಟ್ಟ ದುರ್ದೈವಿ.

ಈತ ಕಳೆದ 9 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ. ಕೆಲವು ಸಮಯಗಳಿಂದ ಜಮ್ಮು-ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಈ ನಡುವೆ ಪ್ರತೀಪ್ ನಿಗೆ ವಿವಾಹ ಗೊತ್ತು ಮಾಡಲಾಗಿತ್ತು. ಅದಕ್ಕಾಗಿ ರಜೆಯಲ್ಲಿ ಊರಿಗೆ ಬಂದಿದ್ದ. ಇಪ್ಪತ್ತು ದಿನಗಳ ಹಿಂದೆ ಬಂದಿದ್ದ ಈತನಿಗೆ ವಿವಾಹ ನಿಶ್ಚಿತಾರ್ಥ ಆಗಿತ್ತು.[ಆಕಸ್ಮಿಕ: ಬಾದಾಮಿಯ ಯುವ ಯೋಧ ಸಾವು]

Pratheep

ಆದರೆ, ಆರೋಗ್ಯವಾಗಿಯೇ ಇದ್ದ ಈತನಿಗೆ ಮಂಗಳವಾರ ತೀವ್ರ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದಾನೆ. ಮೃತನ ಅಂತ್ಯಕ್ರಿಯೆ ಸ್ವಗ್ರಾಮ ಕನುಗನಹಳ್ಳಿಯಲ್ಲಿ ನೆರವೇರಿತು. ಈ ಸಂಬಂಧ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.[ಸಿಯಾಚಿನ್ ಹಿಮಪಾತದಲ್ಲಿ ಸಿಲುಕಿದ್ದ ಯೋಧರ ಸಾವು]

English summary
Prateep, soldier dies by chest pain K.R.Nagar, Mysuru on Wednesday. His marriage fixed recently. He came to native place on leave.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X