ನಾಗರಹೊಳೆ ರಾತ್ರಿ ಸಂಚಾರ ನಿರ್ಬಂಧಕ್ಕೆ ಸುಪ್ರೀಂ ಸಮ್ಮತಿ
ಮೈಸೂರು, ಏಪ್ರಿಲ್ 21: ನಾಗರಹೊಳೆ ಹುಲಿ ಧಾಮದ ಮೂಲಕ ಹಾದು ಹೋಗುವ ಹೆದ್ದಾರಿಯನ್ನು ಸಂಜೆ 65ರಿಂದ ಮುಂಜಾನೆ 6ರವರೆಗೆ ಬಂದ್ ಮಾಡಿದ ರಾಜ್ಯ ಸರ್ಕಾರದ ನಡೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ನಾಗರಹೊಳೆ: ಆನೆ ದಾಳಿಗೆ ಅರಣ್ಯಾಧಿಕಾರಿ ಬಲಿ
ನ್ಯಜೀವಿ ಸಂರಕ್ಷಣೆ ನಿಟ್ಟಿನಲ್ಲಿ ಇದೊಂದು ಮಹತ್ವದ ತೀರ್ಪು ಎಂದು ಬಣ್ಣಿಸಲಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದ ದಕ್ಷಿಣ ಭಾಗದಲ್ಲಿ ಸಾಗುವ ಮೈಸೂರು-ಮಾನಂದವಾಡಿ ಹೆದ್ದಾರಿಯಲ್ಲಿ ರಾತ್ರಿ ಸಂಚಾರಕ್ಕೆ ನಿರ್ಬಂಧ ಹೇರಿ 2008ರ ಜುಲೈಯಲ್ಲಿ ಮೈಸೂರು ಜಿಲ್ಲಾಧಿಕಾರಿಗಳು ಆದೇಶಿಸಿದ್ದರು.
ಅಷ್ಟೇ ಅಲ್ಲದೆ, ಈ ಹೆದ್ದಾರಿಗೆ ಪರ್ಯಾಯ ಮಾರ್ಗವನ್ನೂ ಸೂಚಿಸಲಾಗಿತ್ತು. ಆದರೆ ಸರ್ಕಾರ ಈ ನಡೆಯನ್ನು ಮಾನಂದವಾಡಿ-ಮೈಸೂರು ರಸ್ತೆ ಜಂಟಿ ಕ್ರಿಯಾ ಸಮಿತಿ ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು.
ಇದೀಗ ಸುಪ್ರೀಂಕೋರ್ಟ್ ಪ್ರಕರಣದ ವಿಚಾರಣೆ ನಡೆಸಿ, ನಾಗರಹೊಳೆಯಲ್ಲಿ ರಾತ್ರಿ ಸಂಚಾರ ನಿರ್ಬಂಧಿಸಿ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದೆ. ಹಾಗೆಯೇ ಪರ್ಯಾಯ ಮಾರ್ಗಕ್ಕೂ ಅಸ್ತು ಎಂದಿದೆ. ಬಂಡೀಪುರ ಅಭಯಾರಣ್ಯದಲ್ಲೂ ರಾತ್ರಿ ಸಂಚಾರಕ್ಕೆ ನಿರ್ಬಂಧ ವಿಧಿಸಿರುವ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಇನ್ನೂ ವಿಚಾರಣೆ ಹಂತದಲ್ಲಿದೆ.