ಸಿಡ್ಲು ಮಲ್ಲಿಕಾರ್ಜುನನಿಗೆ ಟಿಬೆಟಿಯನ್ನರೇ ಭಕ್ತರು!
ಮೈಸೂರು: ಸುಂದರ ನಿಸರ್ಗ ರಮಣೀಯ, ಹಸಿರ ಹಚ್ಚಡದ ಬೆಟ್ಟದ ಮೇಲೆ ನೆಲೆ ನಿಂತಿರುವ ಶ್ರೀ ಸಿಡ್ಲುಮಲ್ಲಿಕಾರ್ಜುನ ದೇಗುಲ ಆಸ್ತಿಕ, ನಾಸ್ತಿಕರೆನ್ನದೆ ಎಲ್ಲರನ್ನೂ ತನ್ನಡೆಗೆ ಸೆಳೆಯುವ ಸುಂದರ ತಾಣವಾಗಿದೆ. ಇಲ್ಲಿಗೆ ಟಿಬೆಟಿಯನ್ನರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವುದು ಗಮನಾರ್ಹವಾಗಿದೆ.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದಲ್ಲಿ ಸಿಡ್ಲುಮಲ್ಲಿಕಾರ್ಜುನ ದೇಗುಲವಿದ್ದು, ಎತ್ತರವಾದ ಬೆಟ್ಟದ ಮೇಲೆ ನಿರ್ಮಾಣವಾಗಿರುವ ದೇಗುಲ ಆಕರ್ಷಣೀಯವಾಗಿದೆ. ಪಶ್ಚಿಮಘಟ್ಟಗಳ ಬೆಟ್ಟಶ್ರೇಣಿಗಳ ಸಾಲಿಗೆ ಸೇರ್ಪಡೆಯಾಗಿರುವ ಸಿಡಿಲುಬೆಟ್ಟವು ಮಲ್ಲಿಕಾರ್ಜುನ ನೆಲೆ ನಿಂತ ಭವ್ಯ ತಾಣವಾಗಿದೆ. ಇಲ್ಲಿನ ಮಲ್ಲಿಕಾರ್ಜುನಸ್ವಾಮಿ ಸುತ್ತಮುತ್ತಲಿನ ಜನರ ಆರಾಧ್ಯದೈವನಾಗಿದ್ದಾನೆ.[ಮೈಗಾಡ್, ಪಿರಿಯಾಪಟ್ಟಣದಲ್ಲಿ ಏಲಿಯನ್ ಮತ್ತೆ ಕಾಣಿಸಿತಾ?]
ಕೊಡಗು ಮತ್ತು ಮೈಸೂರಿಗೆ ಗಡಿಭಾಗದಲ್ಲಿರುವ ಈ ಬೆಟ್ಟವು ನಿಸರ್ಗ ಸೌಂದರ್ಯದ ಗಣಿಯಾಗಿದೆ. ಬೆಟ್ಟದ ಮೇಲ್ಭಾಗದಲ್ಲಿರುವ ದೇವಾಲಯ ಚೋಳರ ಕಾಲದಲ್ಲಿ ನಿರ್ಮಾಣವಾಗಿದ್ದೆಂದು ಹೇಳಲಾಗಿದ್ದು, ಆಕರ್ಷಕವಾಗಿರುವ ಈ ದೇವಾಲಯದ ಬಳಿಗೆ ಹೋಗಬೇಕಾದರೆ ಸುಮಾರು 3,600 ಮೆಟ್ಟಿಲನ್ನು ಹತ್ತಿಹೋಗಬೇಕು.[ಪಿರಿಯಾಪಟ್ಟಣದಲ್ಲೊಂದು ಪರಿಸರ ಸ್ನೇಹಿ ಅಂಗನವಾಡಿ!]

ಬುದ್ಧಪೂರ್ಣಿಮೆ ವಿಶೇಷ: ನಿಸರ್ಗದ ಸುಂದರ ದೃಶ್ಯಗಳನ್ನು ಸವಿಯುತ್ತಾ ತೆರಳುತ್ತಿದ್ದರೆ ಮೆಟ್ಟಿಲೇರುವ ಆಯಾಸವೇ ಗೊತ್ತಾಗುವುದಿಲ್ಲ. ಬಹಳಷ್ಟು ಜನ ಬೆಟ್ಟವನ್ನೇರಲೆಂದೇ ಬರುತ್ತಾರೆ. ಅದರಲ್ಲೂ ಟಿಬೆಟಿಯನ್ನರಂತು ಇಲ್ಲಿಗೆ ಲಗ್ಗೆಯಿಡುತ್ತಿರುತ್ತಾರೆ. ಹಬ್ಬದ ಸಂದರ್ಭಗಳಲ್ಲಿ ಅದರಲ್ಲೂ ಬುದ್ಧಪೂರ್ಣಿಮೆಯ ಸಮಯದಲ್ಲಂತು ಸಹಸ್ರಾರು ಸಂಖ್ಯೆಯಲ್ಲಿ ಟಿಬೆಟಿಯನ್ನರು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಇನ್ನು ಸ್ಥಳೀಯರಲ್ಲದೆ ದೂರದ ಪ್ರವಾಸಿಗರು ಇಲ್ಲಿಗೆ ಬಂದು ಬೆಟ್ಟವನ್ನೇರಿ ಇಲ್ಲಿಂದ ಕಂಡು ಬರುವ ಸುಂದರ ದೃಶ್ಯಗಳನ್ನು ಸವಿದು ತೆರಳುತ್ತಾರೆ.[ಕಬಿನಿಯಲ್ಲಿ ಮುಳುಗಿದ ದೇಗುಲಗಳ ಬಗ್ಗೆ ಗೊತ್ತಾ?]
ಬೆಟ್ಟವನ್ನೇರಿ ನಿಂತು ನೋಡಿದಾಗ ಕಾಣಸಿಗುವ ಸುಂದರ ದೃಶ್ಯಗಳು ಮನಮೋಹಕವಾಗಿರುತ್ತದೆ. ಒಂದೆಡೆ ಮಲೆನಾಡು ಮತ್ತೊಂದೆಡೆ ಅರೆಮಲೆನಾಡು. ಇದೆರಡರ ಸುಂದರ ದೃಶ್ಯಗಳ ಸಮ್ಮಿಲನ ಕಣ್ಣಿಗೆ ರಾಚುತ್ತದೆ. ಹಸಿರಿನಿಂದ ಕಂಗೊಳಿಸುವ ಹೊಲಗದ್ದೆಗಳು.. ದೂರದಲ್ಲಿ ಹಸಿರನ್ನೊದ್ದು ಮಲಗಿರುವ ಬೆಟ್ಟಶ್ರೇಣಿಗಳು.. ಕಂದಕಗಳಲ್ಲಿ ಒತ್ತೊತ್ತಾಗಿ ಬೆಳೆದು ನಿಂತ ಮರಗಿಡಗಳು.. ಆಗಾಗ್ಗೆ ಬೀಸಿ ಬರುವ ತಂಪಾದ ಗಾಳಿ.. ಒಂದು ಕ್ಷಣ ತಮ್ಮೆಲ್ಲ ಜಂಜಾಟವನ್ನು ಮರೆಸಿ ಮೈಮನಸ್ಸನ್ನು ಉಲ್ಲಾಸಗೊಳಿಸಿಬಿಡುತ್ತದೆ.
ಬೆಟ್ಟದಪುರ ಎನ್ನುವುದೇ ಎತ್ತರದ ಪ್ರದೇಶದಲ್ಲಿ ನಿರ್ಮಾಣವಾದ ಊರು. ಇಲ್ಲಿರುವ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ನೆಲೆ ನಿಂತ ಬೆಟ್ಟವು ಮೈಸೂರು ಜಿಲ್ಲೆಯಲ್ಲೇ ಅತೀ ಹೆಚ್ಚು ಎತ್ತರದ ಬೆಟ್ಟ ಎಂದು ಹೇಳಲಾಗಿದೆ. ಹೀಗಾಗಿಯೇ ದೇವರ ದರ್ಶನಕ್ಕೆಂದು ಒಂದಷ್ಟು ಮಂದಿ ಬಂದರೆ ಮತ್ತೊಂದಷ್ಟು ಮಂದಿ ಚಾರಣ ಮಾಡಲು ಬರುತ್ತಾರೆ.

ಇಲ್ಲಿ ಮುಂಜಾನೆ ಕಂಡುಬರುವ ಮಂಜಿನ ಆಟ ಮನಸೆಳೆಯುತ್ತದೆ. ಇಡೀ ಬೆಟ್ಟವನ್ನೇ ಆವರಿಸುವ ಮಂಜು ಮುದ ನೀಡುತ್ತದೆ. ಮಂಜಿನ ತೆರೆಯನ್ನು ಸೀಳಿ ಬಂದು ಸ್ಪರ್ಶಿಸುವ ಸೂರ್ಯ ರಶ್ಮಿ ಮೈಮನವನ್ನು ಪುಳಕಗೊಳಿಸುತ್ತದೆ. ಬೆಟ್ಟದ ಸುತ್ತಲಿನ ಕಾನನದಲ್ಲಿ ಪ್ರಾಣಿಪಕ್ಷಿಗಳು ಬೀಡು ಬಿಟ್ಟಿದ್ದು ಆಗೊಮ್ಮೆ ಈಗೊಮ್ಮೆ ನವಿಲುಗಳು ಭೇಟಿ ನೀಡುವ ಪ್ರವಾಸಿಗರ ಕಣ್ಣಿಗೆ ಬಿದ್ದು ಅಚ್ಚರಿ ಮೂಡಿಸುತ್ತವೆ.
ಇನ್ನು ಹಕ್ಕಿಗಳ ಚಿಲಿಪಿಲಿ, ಪ್ರಶಾಂತ ವಾತಾವರಣ ಮುದನೀಡುತ್ತದೆ. ಮುಂಜಾನೆ ಬೆಟ್ಟವೇರಿದ್ದೇ ಆದರೆ ಸಿಗುವ ಅನುಭವ ವರ್ಣಿಸಲಾಗದ್ದಾಗಿರುತ್ತದೆ. ಸದಾ ಪಟ್ಟಣದ ಗೌಜು ಗದ್ದಲಗಳಿಗೆ ಒಳಗಾಗಿ ಅಯ್ಯೋ ಒಂದಷ್ಟು ಸಮಯವನ್ನಾದರೂ ಪ್ರಶಾಂತ ಸ್ಥಳದಲ್ಲಿ ಕಳೆದು ಬರೋಣ ಎಂದು ಯೋಚಿಸುವ ಮಂದಿ ಧಾರಾಳವಾಗಿ ಶಿಡ್ಲಮಲ್ಲಿಕಾರ್ಜುನ ಬೆಟ್ಟಕ್ಕೆ ಹೋಗಿ ಬರಬಹುದು.
-
"ನಾನು ಔಟ್ ಆಗಿದ್ದಕ್ಕೇ ತುಂಬಾ ಖುಷಿಯಾಯ್ತು": ಸಿಎಸ್ಕೆ ಎದುರು ರನ್ ಮಳೆ ಹರಿಸಿದ ಬಳಿಕ ಪಡಿಕ್ಕಲ್ ಹೀಗಂದಿದ್ದೇಕೆ? -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
Silk Board: ಹಳದಿ-ನೀಲಿ ಮೆಟ್ರೋ ಲೈನ್ ಪ್ರಯಾಣಿಕರಿಗಾಗಿ 'ಟ್ರಾವೆಲೇಟರ್-ಕನೆಕ್ಟಿಂಗ್ ವಾಕ್ವೇ ಸಂಪರ್ಕ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ












Click it and Unblock the Notifications