ನಾಳೆಯಿಂದ ಮೈಸೂರಿನಲ್ಲಿ ಟ್ರಿಣ್ ಟ್ರಿಣ್ ರಿಂಗಣ
ಮೈಸೂರು ಜಿಲ್ಲಾಡಳಿತ ಹಾಗೂ ಮೈಸೂರು ಮಹಾನಗರಪಾಲಿಕೆ ಜಂಟಿಯಾಗಿ ರೂಪಿಸಿರುವ ಟ್ರಿಣ್ ಟ್ರಿಣ್ ಯೋಜನೆಯ ವಿದ್ಯುಕ್ತ ಉದ್ಘಾಟನೆ ಹಲವಾರು ದಿನಗಳಿಂದ ಮುಂದೂಡುತ್ತಲೇ ಇತ್ತು. ಆದರೆ, ಈಗ ಅದಕ್ಕೆ ಕಾಲ ಕೂಡಿ ಬಂದಿದೆ.
ಮೈಸೂರು, ಮೇ 20 : ಹಲವು ದಿನಗಳಿಂದ ಮುಂದೂಡುತ್ತಲೇ ಬಂದಿದ್ದ ದೇಶದ ಮೊದಲ ಸಾರ್ವಜನಿಕ ಬೈಸಿಕಲ್ ಹಂಚಿಕೆ (ಪಿಬಿಎಸ್) ಯೋಜನೆ ಟ್ರಿಣ್ ಟ್ರಿಣ್ ಗೆ ಮೇ 20ರ ನಾಳೆ ವಿದ್ಯುಕ್ತ ಚಾಲನೆ ದೊರೆಯಲಿದ್ದು ಸಾಂಸ್ಕತಿಕ ನಗರಿ ಮೈಸೂರಿನಲ್ಲಿ ಟ್ರಿಣ್ ಟ್ರಿಣ್ ಸದ್ದು ರಿಂಗಣಿಸಲಿದೆ.
ಕೇಂದ್ರದ ನಗರ ರಸ್ತೆ ಸಾರಿಗೆ ಇಲಾಖೆ ಪರಿಸರ ಸ್ನೇಹಿ ಯೋಜನೆಯನ್ನು ಮೈಸೂರಿನಲ್ಲಿ ಮೊದಲ ಬಾರಿಗೆ ಆರಂಭಿಸಲು ಉತ್ಸಾಹ ತೋರಿಸಿ ಜಿಲ್ಲಾಡಳಿತ ಹಾಗೂ ಮೈಸೂರು ಮಹಾನಗರಪಾಲಿಕೆ ಜಂಟಿಯಾಗಿ ರೂಪಿಸಿರುವ ಟ್ರಿಣ್ ಟ್ರಿಣ್ ಯೋಜನೆ ಹಲವು ದಿನಗಳಿಂದ ಚಾಲನೆಗೊಳ್ಳದೆ ಮುಂದೂಡುತ್ತಲೇ ಇತ್ತು.[ಟ್ರಿಣ್ ಟ್ರಿಣ್ ಪರಿಸರ ಸ್ನೇಹಿ ಸೈಕಲ್ ತುಳಿದ ಮೈಸೂರಿನ ಡಿಸಿ]

ಜಿಲ್ಲಾಧಿಕಾರಿ ರಂದೀಪ್ ಅವರು ಸಾಂಕೇತಿಕವಾಗಿ ಚಾಲನೆ ನೀಡಿದ್ದರಾದರೂ ಯೋಜನೆಗೆ ವಿದ್ಯುಕ್ತವಾಗಿ ಚಾಲನೆ ದೊರೆತಿರಲಿಲ್ಲ. ಇದೀಗ ವಿದ್ಯುಕ್ತ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದ್ದು ಮೇ 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಮೈಸೂರು ಅರಮನೆ, ಮೃಗಾಲಯ, ಚಾಮುಂಡಿ ಬೆಟ್ಟ ಮತ್ತು ತಪ್ಪಲು, ರೈಲ್ವೇ ನಿಲ್ದಾಣ, ಸಿಟಿ ಹಾಗೂ ಸಬರ್ಬ್ ಬಸ್ ನಿಲ್ದಾಣ, ರಾಮಸ್ವಾಮಿ ವೃತ್ತ, ಆರ್ಟಿಓ ವೃತ್ತ, ಒಂಟಿಕೊಪ್ಪಲ್ ಆಕಾಶವಾಣಿ, ಸರಸ್ವತಿಪುರಂ ಅಗ್ನಿಶಾಮಕ ದಳ, ಬಲ್ಲಾಳ್ ವೃತ್ತ, ಮಿನಿ ವಿಧಾನಸೌಧ, ನಜರ್ಬಾದ್ ಸೇರಿದಂತೆ ನಗರದ ಒಟ್ಟು 52 ಡಾಕಿಂಗ್ ಸೆಂಟರ್ ಗಳು ವಾರ್ವಜನಿಕರ ಬಳಕೆಗೆ ಮುಕ್ತವಾಗಲಿವೆ. ಆ ಮೂಲಕ ನಗರದೆಲ್ಲೆಡೆ ಟ್ರಿನ್ ಟ್ರಿನ್ ಸದ್ದು ಜೋರಾಗಿ ಕೇಳಿಸಲಿದೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications