ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಮೈಸೂರಿನಲ್ಲಿ ವಿನೂತನ ಪ್ರತಿಭಟನೆ

By ಯಶಸ್ವಿನಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್. 7: ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿರುವ ಬೆನ್ನಲ್ಲೇ ಮೈಸೂರು ನಗರದಲ್ಲಿ ವಿವಿಧ ಸಂಘಟನೆಗಳು ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದವು.

ನಗರದ ನ್ಯಾಯಾಲಯದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಜಮಾವಣೆಗೊಂಡ ಕರ್ನಾಟಕ ಸೇನಾಪಡೆಯ ಕಾರ್ಯಕರ್ತರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಗಳೂರಲ್ಲಿ ಲೀಟರ್‌ಗೆ 83ರೂ ಮೀರಿದ ಪೆಟ್ರೋಲ್ಗಳೂರಲ್ಲಿ ಲೀಟರ್‌ಗೆ 83ರೂ ಮೀರಿದ ಪೆಟ್ರೋಲ್

ಸೇನಾಪಡೆಯ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 9 ತಿಂಗಳಿಗೊಮ್ಮೆ ಪರಿಷ್ಕರಿಸುತ್ತಿದ್ದ ಪೆಟ್ರೋಲ್, ಡೀಸೆಲ್ ದರವನ್ನು ಬಿಜೆಪಿ ಸರ್ಕಾರ ಪ್ರತಿದಿನವೂ ಪರಿಷ್ಕರಿಸಿ ಜನರ ಕಣ್ಣಿಗೆ ಮಣ್ಣೆರಚುತ್ತಿದೆ.

Various organizations protest against the increase in petrol prices.

ಪ್ರಣಾಳಿಕೆಯಲ್ಲಿ 40 ರೂ.ಗೆ ಲೀಟರ್ ಪೆಟ್ರೋಲ್ ನೀಡುವುದಾಗಿ ಘೋಷಿಸಿದ್ದ ಬಿಜೆಪಿ ಮಾತು ತಪ್ಪಿದೆ. ಕೇಂದ್ರ ಸರ್ಕಾರದ ಅಚ್ಛೇ ದಿನ್ ಮರಿಚಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 ತೈಲ ಬೆಲೆ ಏರಿಕೆಗೆ ವಿರೋಧ: ಸೆಪ್ಟೆಂಬರ್ 10ರಂದು ಭಾರತ್ ಬಂದ್‌ ತೈಲ ಬೆಲೆ ಏರಿಕೆಗೆ ವಿರೋಧ: ಸೆಪ್ಟೆಂಬರ್ 10ರಂದು ಭಾರತ್ ಬಂದ್‌

ಅಗ್ರಹಾರ ವೃತ್ತದಲ್ಲಿ ತಳ್ಳುಗಾಡಿ ಮೇಲೆ ದ್ವಿಚಕ್ರವಾಹನ ನಿಲ್ಲಿಸುವ ಮೂಲಕ ಕೇಂದ್ರ ಸರ್ಕಾರದ ಬೆಲೆ ಏರಿಕೆಯನ್ನು ಕಾರ್ಯಕರ್ತರು ವಿನೂತನ ರೀತಿಯಲ್ಲಿ ಪ್ರತಿಭಟಿಸಿದರು.

Various organizations protest against the increase in petrol prices.

ಅಮೆರಿಕಾದ ಹಿಡಿತದಲ್ಲಿರುವ ಕೇಂದ್ರ ಸರ್ಕಾರ ಆರ್ಥಿಕ ನೀತಿಯನ್ನೇ ಗಾಳಿಗೆ ತೂರಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡುತ್ತಿರುವುದು ಖಂಡನೀಯ ಎಂದರು.

English summary
In Mysuru various organizations protest against the increase in petrol prices. Petrol and diesel prices should be cut shortly. Otherwise he warned that we would fight fiercely.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X