ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮುಂಡಿ ಸನ್ನಿಧಿಯಲ್ಲಿ 'ಕುಮಾರಪರ್ವ'ಕ್ಕೆ ಮುನ್ನುಡಿ ಬರೆದ ಜೆಡಿಎಸ್

By ಮೈಸೂರು ಪ್ರತಿನಿಧಿ
|
Google Oneindia Kannada News

Recommended Video

ಚಾಮುಂಡಿ ಸನ್ನಿಧಿಯಲ್ಲಿ ಎಚ್ ಡಿ ಕುಮಾರಸ್ವಾಮಿ | ಜೆಡಿಎಸ್ ವಿಕಾಸ ಯಾತ್ರೆಗೆ ಚಾಲನೆ | Oneindia Kannada

ಮೈಸೂರು, ನವೆಂಬರ್ 07: ಮುಂಬರುವ ವಿಧಾನಸಭಾ ಚುನಾವಣೆಗೆ ಇಂದಿನಿಂದಲೇ ಭರ್ಜರಿ ಪ್ರಚಾರಕ್ಕೆ ಚಾಲನೆ ನೀಡಲು ಜೆಡಿಎಸ್ ಮುಂದಾಗಿದೆ. ಜೆಡಿಎಸ್ ಪರ ಬಿರುಸಿನ ಪ್ರಚಾರ ನಡೆಸಲು ವಿಶೇಷವಾಗಿ ವಿನ್ಯಾಸಗೊಳಿಸಿರುವ 'ಕರ್ನಾಟಕ ವಿಕಾಸ ವಾಹಿನಿ' ವಾಹನದ ಸಂಚಾರಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಚಾಮುಂಡಿ ಬೆಟ್ಟದಲ್ಲಿ ಅಧಿಕೃತ ಚಾಲನೆ ನೀಡಿದರು.

ಮೈತ್ರಿ ಮಾಡಿಕೊಳ್ಳೋ ದಾರಿದ್ರ್ಯ ನಮಗಿಲ್ಲ ಅಂದ್ರು ಕುಮಾರಣ್ಣ: ಮಾತು ಮಾತಾಗಿರ್ಲಿ!ಮೈತ್ರಿ ಮಾಡಿಕೊಳ್ಳೋ ದಾರಿದ್ರ್ಯ ನಮಗಿಲ್ಲ ಅಂದ್ರು ಕುಮಾರಣ್ಣ: ಮಾತು ಮಾತಾಗಿರ್ಲಿ!

ಜೆಡಿಎಸ್ ವಿಕಾಸ ವಾಹಿನಿ ವಾಹನವನ್ನೇರಿ ಪತ್ನಿ ಅನಿತಾ ಕುಮಾರಸ್ವಾಮಿಯವರ ಜೊತೆ ಚಾಮುಂಡೇಶ್ವರಿ ದೇಗುಲವನ್ನು ಒಂದು ಸುತ್ತು ಹಾಕಿದ ಕುಮಾರಸ್ವಾಮಿಯವರು ಮಾಧ್ಯಮದೊಂದಿಗೆ ಮಾತನಾಡಿದರು. "ಇತ್ತೀಚಿನ ಬಹುತೇಕ ಸಮೀಕ್ಷೆಗಳು ಜೆಡಿಎಸ್ 65 ಸ್ಥಾನ ಗಳಿಸಲಿದೆ ಎಂದು ಹೇಳಿವೆ, ಆದರೆ ಇದನ್ನು ಮೀರಿ 113ರ ಗಡಿ ತಲುಪುವುದೇ ನಮ್ಮ ಏಕೈಕ ಗುರಿಯಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 113ರ ಗಡಿ ತಲುಪಿ ಅಧಿಕಾರಕ್ಕೆ ಬರುವುದು ಶತಃಸಿದ್ಧ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

In Pics : ಕುಮಾರಸ್ವಾಮಿಯ ವಿಕಾಸ ವಾಹಿನಿ ಯಾತ್ರೆ ಆರಂಭ

We will definitely win 113 seats in Karnataka assembly elections 2018: HD Kumaraswamy

"ಜೆಡಿಎಸ್ ಅಧಿಕಾರಕ್ಕೆ ಬಂದರೆ ರಾಷ್ಟ್ರೀಕೃತ, ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಎಲ್ಲಾ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು. ಜೆಡಿಎಸ್ ತೊರೆದಿದ್ದ ಬಹುತೇಕ ನಾಯಕರು ಮತ್ತೆ ಜೆಡಿಎಸ್ ಗೆ ಸೇರ್ಪಡೆಯಾವಲು ಸಂಪರ್ಕದಲ್ಲಿದ್ದಾರೆ. ಆದರೆ ಕಡೆ ಕ್ಷಣದಲ್ಲಿ ಪಕ್ಷಕ್ಕೆ ಬರುವವರಿಗೆ ರೆಡ್ ಕಾರ್ಪೆಟ್ ಹಾಸುವುದಿಲ್ಲ. ಅವಕಾಶವಾದಿ ರಾಜಕಾರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಎಚ್.ಡಿ. ಕುಮಾರಸ್ವಾಮಿ ನುಡಿದರು.

'ವಿಕಾಸ ಯಾತ್ರೆ' ಯಶಸ್ಸಿಗಾಗಿ ದೇವೇಗೌಡರಿಂದ ಹೋಮ 'ವಿಕಾಸ ಯಾತ್ರೆ' ಯಶಸ್ಸಿಗಾಗಿ ದೇವೇಗೌಡರಿಂದ ಹೋಮ

We will definitely win 113 seats in Karnataka assembly elections 2018: HD Kumaraswamy

ಹೈಟೆಕ್ ವ್ಯವಸ್ಥೆಯನ್ನು ಒಳಗೊಂಡಿರುವ ಜೆಡಿಎಸ್ ನ ವಿಕಾಸ ವಾಹಿನಿ ವಾಹನವು ಜೆಡಿಎಸ್ ಅಧಿಕಾರಕ್ಕೆ ಬಂದರೆ ಈಡೇರಿಸುವ ಭರವಸೆಗಳನ್ನೊಳಗೊಂಡ ಘೋಷ ವಾಕ್ಯಗಳಿಂದ ರಾರಾಜಿಸುತ್ತಿದೆ.

English summary
"We will definitely win 113 seats in Karnataka assembly elections 2018, and will come to power with majority" JDS state president HD Kumaraswamy told to media in Mysuru. JDS's Karnataka Vikasa Vahini rally has started from Nov 7th in Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X