ಮೈಸೂರು ದಸರಾ: ಖಾಸಗಿ ದರ್ಬಾರ್ ಗೆ ಸಿದ್ಧವಾದ ರತ್ನ ಖಚಿತ ಸಿಂಹಾಸನ
Recommended Video
ಮೈಸೂರು, ಅಕ್ಟೋಬರ್. 04 : ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗುತ್ತಿದ್ದಂತೆ ಅಂಬಾವಿಲಾಸ ಅರಮನೆಯಲ್ಲಿಯೂ ಸಿದ್ಧತೆಗಳು ಆರಂಭವಾಗಿವೆ. ನವರಾತ್ರಿಯಲ್ಲಿ ನಡೆಯುವ ಖಾಸಗಿ ದರ್ಬಾರ್ ಗೆ ಇಂದು ರತ್ನ ಖಚಿತ ಸಿಂಹಾಸನ ಜೋಡಣೆ ಕಾರ್ಯ ಸಾಂಗವಾಗಿ ನೆರವೇರಿದೆ.
ದಸರಾ ಸಿದ್ಧತೆಯ ಮೊದಲು ಅರಮನೆ ದರ್ಬಾರ್ ಹಾಲ್ ನಲ್ಲಿ ನವಗ್ರಹ ಹೋಮ, ಶಾಂತಿ ಪೂಜೆ ನವರಾತ್ರಿಯ ಆರಂಭದ ಪೂಜಾ ವಿಧಾನಗಳು ನಡೆದವು.
ಮೈಸೂರು ದಸರಾ ಹಿನ್ನೆಲೆ: ಈ ದಿನಗಳಂದು ಅರಮನೆಗೆ ಪ್ರವೇಶ ನಿರ್ಬಂಧ
ಅಲ್ಲದೇ ಅಂಬಾವಿಲಾಸ ದರ್ಬಾರ್ ಹಾಲ್ ನಲ್ಲಿ ಬೆಳಗ್ಗೆ 9.45 ರಿಂದ 10.15ರವರೆಗೆ ಗೆಜ್ಜಗಳ್ಳಿ ಗ್ರಾಮಸ್ಥರು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರ ಸಮ್ಮುಖದಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ ಕಾರ್ಯ ಪೂರ್ಣಗೊಳಿಸಿದರು.
ಈ ಹಿನ್ನೆಲೆಯಲ್ಲಿ ಅರಮನೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿತ್ತು. ರತ್ನಖಚಿತ ಸಿಂಹಾಸನವನ್ನು ದಸರಾ ಮಹೋತ್ಸವದ ಸಂದರ್ಭದಲ್ಲಿ ಮಾತ್ರ ಜೋಡಿಸಿ ರಾಜವಂಶಸ್ಥರ ಖಾಸಗಿ ದರ್ಬಾರ್ ಗೆ ಬಳಸಲಾಗುವುದು. ನಂತರ ಸ್ವಲ್ಪ ದಿನದವರೆಗೆ ಸಾರ್ವಜನಿಕ ದರ್ಶನಕ್ಕೂ ಅವಕಾಶ ನೀಡಲಾಗುವುದು.
ಯದುರಾಯರಿಂದ ಯದುವೀರ್ ವರೆಗೆ, ತಿಳಿಯಲೇಬೇಕಾದ ರಾಜಮನೆತನದ ಇತಿಹಾಸ
ಕರಿಮರ, ದಂತ, ಚಿನ್ನ, ಬೆಳ್ಳಿಗಳಿಂದ ನಿರ್ಮಿಸಿರುವ ಸಿಂಹಾಸನಕ್ಕೆ ವಜ್ರ, ಮುತ್ತು, ರತ್ನಗಳನ್ನು ಅಳವಡಿಸಲಾಗಿದೆ. ಅನುವಂಶಿಕ ಸಿಂಹಾಸನವನ್ನು ರಾಜವಂಶಸ್ಥರು ದಸರಾ ಮಹೋತ್ಸವದ ಅಂಗವಾಗಿ ನಡೆಯುವ ರಾಜಸಭೆಯ ಸಮಯದಲ್ಲಿ ಮೊದಲು ಇದಕ್ಕೆ ಪೂಜೆ ಸಲ್ಲಿಸಿ ಆರೋಹಣ ಮಾಡುವರು.
ಸಿಂಹಾಸನದ ಜೋಡಣೆ ಕಾರ್ಯವನ್ನು ಈ ಹಿಂದಿನಿಂದಲೂ ನಡೆಸಿಕೊಂಡು ಬಂದಿರುವ ಹೆಗ್ಗಳಿಕೆ ಗೆಜ್ಜಗಳ್ಳಿ ಗ್ರಾಮಸ್ಥರದು.
ದಸರಾ ಹಿನ್ನೆಲೆ: ರತ್ನಖಚಿತ ಸಿಂಹಾಸನ ಜೋಡಣೆಗೆ ಕ್ಷಣಗಣನೆ ಆರಂಭ
ಈ ಬಾರಿ ನಡೆಯಲಿರುವ ದಸರಾ ಹಬ್ಬದ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ನವರಾತ್ರಿಯ ಪೂಜಾ ಕೈಂಕರ್ಯಗಳಲ್ಲಿ ರಾಜವಂಶಸ್ಥ ಯದುವೀರ್ ಪಾಲ್ಗೊಳ್ಳಲಿದ್ದಾರೆ. ಅಕ್ಟೋಬರ್ 10ರಂದು ದಸರಾ ಹಬ್ಬ ಉದ್ಘಾಟನೆಗೊಳ್ಳಲಿದ್ದು, ರಾಜವಂಶಸ್ಥರ ಖಾಸಗಿ ದರ್ಬಾರ್ ಕೂಡ ಅಂದೇ ಆರಂಭವಾಗಲಿದೆ.