ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೃಷ್ಣರಾಜರನ್ನು ಏಕವಚನದಲ್ಲಿ ಕರೆದಿದ್ದಕ್ಕೆ ಯದುವೀರ್ ಬೇಸರ

By Yashaswini
|
Google Oneindia Kannada News

ಮೈಸೂರು, ಸೆಪ್ಟೆಂಬರ್ 2 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಏಕವಚನದಲ್ಲಿ ಸಂಬೋಧಿಸಿದ ವಿಷಯಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ನನಗೂ ಘಾಸಿಗೊಳಿಸಿದೆ ಎಂದಿದ್ದಾರೆ.

ಇಂದಿರಾ ಕ್ಯಾಂಟೀನ್ ಕುರಿತು ಟ್ವೀಟ್: ವಿವಾದ ಸೃಷ್ಟಿಸಿದ ಪ್ರತಾಪ್ ಸಿಂಹ!ಇಂದಿರಾ ಕ್ಯಾಂಟೀನ್ ಕುರಿತು ಟ್ವೀಟ್: ವಿವಾದ ಸೃಷ್ಟಿಸಿದ ಪ್ರತಾಪ್ ಸಿಂಹ!

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯುಕ್ತಿಕವಾಗಿ ಪ್ರತಿಕ್ರಿಯಿಸಲು ನಾನು ಬಹಳ ಚಿಕ್ಕವನು. ಮೈಸೂರಿನ ಜನ ಅವರನ್ನು ದೇವರೆಂದು ನಂಬಿದ್ದಾರೆ. ಜನರ ಭಾವನಾತ್ಮಕ ಸಂಬಂಧವನ್ನು ಅರ್ಥೈಸಿ ಮಾತನಾಡಬೇಕಿತ್ತು. ಈ ರಾಜ್ಯದ ಮುಖ್ಯಮಂತ್ರಿಯಾಗಿ ಈ ರೀತಿ ವರ್ತಿಸಬಾರದಿತ್ತು ಎಂದರು.

Yaduveer expresses displeasure over Siddu statement on Krishnaraja

ಸಿಎಂ ಹೇಳಿಕೆಗೆ ಸಂಸದ ಪ್ರತಾಪ್ ತಿರುಗೇಟು

ಮಹಾರಾಜ ದೇವರಲ್ಲ, ಜನರ ಹಣದಿಂದ ಮಾರ್ಕೆಟ್ ಕಟ್ಟಿದ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ಅಕ್ಕಿ ಪ್ಯಾಕ್, ಉಪ್ಪಿನ ಪ್ಯಾಕು ಎಲ್ಲಾ ಯೋಜನೆಗಳ ಮೇಲೆ ನಿಮ್ಮ ಫೋಟೋ ಹಾಕಿಕೊಳ್ಳುತ್ತೀರಲ್ಲ, ಅದು ನಿಮ್ಮ ಸ್ವಂತ ಹಣವೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

Yaduveer expresses displeasure over Siddu statement on Krishnaraja

ಮೈಸೂರು ಮಹಾನಗರ ಪಾಲಿಕೆಯ ಸದಸ್ಯರು ಮೈಸೂರು ಅಭಿವೃದ್ದಿಗೆ ಹೆಚ್ಚಿನ ಹಣ ಕೊಡಬೇಕು ಹಾಗೂ ದೇವರಾಜ ಮಾರುಕಟ್ಟೆಯ ವ್ಯಾಪಾರಸ್ಥರನ್ನು ತೆರವುಗೊಳಿಸಬಾರದು, ಅದು ನಾಲ್ವಡಿ ಕೃಷ್ಣ ರಾಜ ಒಡೆಯರ್ ಕಟ್ಟಿಸಿದ ಮಾರುಕಟ್ಟೆ ಎಂದು ಮನವಿ ಮಾಡಿದ್ದರು.

ಆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯನವರು ಮಾತಿನ ಭರದಲ್ಲಿ, ಮಹಾರಾಜರು ದೇವರಲ್ಲ, ಜನರ ಹಣದಿಂದ ಮಾರುಕಟ್ಟೆ ಕಟ್ಟಿಸಿದ್ದಾರೆ ಪಾಲಿಕೆ ಸದಸ್ಯರಿಗೆ ಎಂದು ಪಾಠ ಹೇಳಿದ್ದರು. ಈ ಹೇಳಿಕೆ ರಾಜ್ಯಾದ್ಯಂತ ತೀವ್ರ ಟೀಕೆಗೆ ಗುರಿಯಾಗಿದೆ. ಒಬ್ಬ ಮುಖ್ಯಮಂತ್ರಿಯಾಗಿ ಈರೀತಿ ದುರಹಂಕಾರದಿಂದ, ಬೇಜವಾಬ್ದಾರಿಯಿಂದ ಹೇಳಿಕೆ ನೀಡಬಾರದಿತ್ತು ಎಂಬ ಮಾತುಗಳು ಕೇಳಿಬಂದಿವೆ.

English summary
Royal family member Yaduveer Narasimhadatta Wodeyar and MP of Mysuru-Kodagu Pratap Simha have lambasted Siddaramaiah for calling Nalvadi Krishnaraja Wodeyar in singular terms.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X