ಮೈಸೂರಿನಲ್ಲಿ ಭಗವದ್ಗೀತೆ ಸುಟ್ಟು ಹಾಕಿದ ಯುವ ಹೋರಾಟಗಾರ ಹಾರೋಹಳ್ಳಿ ರವೀಂದ್ರ!
ಮೈಸೂರು, ಆಗಸ್ಟ್ 12 :ನವದೆಹಲಿಯ ಜಂತರ್- ಮಂತರ್ ಬಳಿ ಸಂವಿಧಾನವನ್ನು ಸುಟ್ಟಿರುವುದನ್ನು ಖಂಡಿಸಿ ವ್ಯಕ್ತಿಯೊಬ್ಬರು ಮೈಸೂರಿನಲ್ಲಿ ಭಗವದ್ಗೀತೆಯನ್ನು ಸುಟ್ಟಿರುವ ಘಟನೆ ನಡೆದಿದೆ.
ಯುವ ಹೋರಾಟಗಾರ ಹಾರೋಹಳ್ಳಿ ರವೀಂದ್ರ ಎಂಬುವವರು ಭಗವದ್ಗೀತೆಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದು, ಈ ದೃಶ್ಯವನ್ನು ಫೇಸ್ ಬುಕ್ ನಲ್ಲಿ ಅಪ್ ಲೋಡ್ ಕೂಡ ಮಾಡಿದ್ದಾರೆ.
ಶಿವಮೊಗ್ಗ: ಕಳ್ಳತನ ಮಾಡಿ ಬೀರುಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
"ಮನುವಾದಿಗಳನ್ನು ಗಡಿಪಾರು ಮಾಡಬೇಕು. ಸಂವಿಧಾನವನ್ನು ಸುಡುವ ಶಕ್ತಿಗಳು ದೇಶಕ್ಕೇ ಬೆಂಕಿ ಹಚ್ಚುತ್ತವೆ. ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕು" ಎಂದು ತಮ್ಮ ವಿಡಿಯೋದಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಸುಬ್ರಹ್ಮಣೇಶ್ವರ ರಾವ್, ಭಗವದ್ಗೀತೆ ಪ್ರತಿ ಸುಟ್ಟು ಹಾಕಿರುವ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಪರಿಶೀಲಿಸಲಾಗುವುದು, ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವುದು ಧೃಢಪಟ್ಟರೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿರುವ ಈ ಕೃತ್ಯ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಹಾರೋಹಳ್ಳಿ ಗ್ರಾಮದಲ್ಲಿ ರವೀಂದ್ರ ಅವರು ಭಗವದ್ಗೀತೆಗೆ ಬೆಂಕಿ ಹಚ್ಚುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ಅಪ್ ಲೋಡ್ ಮಾಡಿದ ಈ ವಿಡಿಯೋವನ್ನು ಕೇವಲ ಐದು ಗಂಟೆ ಅವಧಿಯಲ್ಲಿ ಏಳು ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ.
200 ಕ್ಕೂ ಹೆಚ್ಚು ಮಂದಿ ಶೇರ್ ಮಾಡಿದ್ದು, ನೂರಾರು ಮಂದಿ ಪರ ಮತ್ತು ವಿರೋಧ ಪ್ರತಿಕ್ರಿಯೆ ನೀಡಿದ್ದಾರೆ.