ಲೋಕಾಯುಕ್ತರ ದಾಳಿ ವೇಳೆ ಪ್ರಾಧ್ಯಾಪಕರ ಮನೆಯಲ್ಲಿ ಸಿಕ್ಕಿದ್ದು 1.4 ಕೋಟಿ!
ಮೈಸೂರು, ಡಿಸೆಂಬರ್ 6: ರಾಜ್ಯದ ವಿವಿಧೆಡೆ ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇರೆಗೆ ಹತ್ತಾರು ಕಡೆ ಲೋಕಾಯುಕ್ತರು ದಾಳಿ ಮಾಡಿದ್ದಾರೆ. ಅದರಂಯತೆ ನಂಜನಗೂಡಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರೊಬ್ಬರ ಮನೆ ಸೇರಿದಂತೆ 12 ಕಡೆ ಲೋಕಾಯುಕ್ತ ಪೊಲೀಸರು ಮಂಗಳವಾರ ಏಕ ಕಾಲದಲ್ಲಿ ದಾಳಿ ನಡೆಸಿದ್ದಾರೆ.
8.42 ಕೋಟಿ ರೂ. ಅಕ್ರಮ ಆಸ್ತಿ ಪತ್ತೆಯಾಗಿದ್ದು, ಇದರಲ್ಲಿ 2.33 ಕೋಟಿ ರೂ. ಚರಾಸ್ತಿ ಯಾಗಿದೆ. ಪ್ರತಿ ವರ್ಷ 1.4 ಕೋಟಿ ರೂ.ವರೆಗೆ ಆದಾಯ ಬರುವಂತೆ ವ್ಯವಹಾರ ನಡೆಸುತ್ತಿದ್ದರು ಎಂಬುದು ಪೊಲೀಸರ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಮೈಸೂರಿನ ಜೆಪಿ ನಗರದ ಗುರುಕುಲ ಬಡಾವಣೆ ನಿವಾಸಿಯೂ ಆದ ಡಾ.ಎಂ.ಎಸ್.ಮಹದೇವಸ್ವಾಮಿ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿರುವುದು.

ಮಹದೇವಸ್ವಾಮಿ ಮಾಲೀಕತ್ವದ ಗುರು ಕುಲ ವಿದ್ಯಾ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವ ಹಾರದ ಎಂ.ಎಸ್.ಗ್ರೂಪ್ ಆ್ಯಂಡ್ ಪ್ರಾಪ ರ್ಟೀಸ್, ಗೃಹ ನಿರ್ಮಾಣ ಸಹಕಾರ ಸಂಘದ ಕಚೇರಿ, ಸ್ಟೀಲ್ ಮತ್ತು ಕಬ್ಬಿಣದ ಅಂಗಡಿ ಸೇರಿದಂತೆ 12 ಕಡೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೈಸೂರು ನಗರದೊಂದಿಗೆ ನಂಜನಗೂಡು ಮತ್ತು ಕೆ.ಆರ್.ನಗರದಲ್ಲಿರುವ ಸ್ಟೀಲ್ ಅಂಗಡಿ, ಶ್ರೀರಂಗಪಟ್ಟಣದ ಅರಕೆರೆ ಗ್ರಾಮದ ಲ್ಲಿನ ಮನೆಯ ಮೇಲೂ ದಾಳಿ ಮಾಡಿ, ಶೋಧ ನಡೆಸಿದರು.
''ಕಾಲೇಜಿಗೆ ತೆರಳಿ ಪಾಠ ಮಾಡಿದ್ದಕ್ಕಿಂತ ವ್ಯಾಪಾರ ವಹಿವಾಟಿನಲ್ಲಿ ತೊಡಗಿಸಿಕೊಂಡಿದ್ದೇ ಹೆಚ್ಚು. ಗೃಹ ನಿರ್ಮಾಣ ಸಹಕಾರ ಸಂಘ ಸ್ಥಾಪಿಸಿ ಸಾಕಷ್ಟು ಮಂದಿಗೆ ನಿವೇಶನ ನೀಡದೇ ವಂಚಿಸಿದ್ದರು'' ಎಂಬ ಆರೋಪಗಳಿವೆ.
ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್, ಐಜಿಪಿ ಡಾ.ಸುಬ್ರಮಣ್ಯೇಶ್ವರ ರಾವ್, ಎಸ್ಪಿ ಸುರೇಶ್ ಬಾಬು ಮಾರ್ಗದರ್ಶ ನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ಕೃಷ್ಣಯ್ಯ ಅವರೊಂದಿಗೆ ಐದು ಮಂದಿ ಡಿವೈಎಸ್ಪಿಗಳು ಮತ್ತು 10 ಇನ್ಸ್ಪೆಕ್ಟರ್ಗಳು ಮತ್ತು ಸಿಬ್ಬಂದಿ ಇದ್ದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications