ಲೋಕಾಯುಕ್ತರ ದಾಳಿ ವೇಳೆ ಪ್ರಾಧ್ಯಾಪಕರ ಮನೆಯಲ್ಲಿ ಸಿಕ್ಕಿದ್ದು 1.4 ಕೋಟಿ!
ಮೈಸೂರು, ಡಿಸೆಂಬರ್ 6: ರಾಜ್ಯದ ವಿವಿಧೆಡೆ ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇರೆಗೆ ಹತ್ತಾರು ಕಡೆ ಲೋಕಾಯುಕ್ತರು ದಾಳಿ ಮಾಡಿದ್ದಾರೆ. ಅದರಂಯತೆ ನಂಜನಗೂಡಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರೊಬ್ಬರ ಮನೆ ಸೇರಿದಂತೆ 12 ಕಡೆ ಲೋಕಾಯುಕ್ತ ಪೊಲೀಸರು ಮಂಗಳವಾರ ಏಕ ಕಾಲದಲ್ಲಿ ದಾಳಿ ನಡೆಸಿದ್ದಾರೆ.
8.42 ಕೋಟಿ ರೂ. ಅಕ್ರಮ ಆಸ್ತಿ ಪತ್ತೆಯಾಗಿದ್ದು, ಇದರಲ್ಲಿ 2.33 ಕೋಟಿ ರೂ. ಚರಾಸ್ತಿ ಯಾಗಿದೆ. ಪ್ರತಿ ವರ್ಷ 1.4 ಕೋಟಿ ರೂ.ವರೆಗೆ ಆದಾಯ ಬರುವಂತೆ ವ್ಯವಹಾರ ನಡೆಸುತ್ತಿದ್ದರು ಎಂಬುದು ಪೊಲೀಸರ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಮೈಸೂರಿನ ಜೆಪಿ ನಗರದ ಗುರುಕುಲ ಬಡಾವಣೆ ನಿವಾಸಿಯೂ ಆದ ಡಾ.ಎಂ.ಎಸ್.ಮಹದೇವಸ್ವಾಮಿ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿರುವುದು.

ಮಹದೇವಸ್ವಾಮಿ ಮಾಲೀಕತ್ವದ ಗುರು ಕುಲ ವಿದ್ಯಾ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವ ಹಾರದ ಎಂ.ಎಸ್.ಗ್ರೂಪ್ ಆ್ಯಂಡ್ ಪ್ರಾಪ ರ್ಟೀಸ್, ಗೃಹ ನಿರ್ಮಾಣ ಸಹಕಾರ ಸಂಘದ ಕಚೇರಿ, ಸ್ಟೀಲ್ ಮತ್ತು ಕಬ್ಬಿಣದ ಅಂಗಡಿ ಸೇರಿದಂತೆ 12 ಕಡೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೈಸೂರು ನಗರದೊಂದಿಗೆ ನಂಜನಗೂಡು ಮತ್ತು ಕೆ.ಆರ್.ನಗರದಲ್ಲಿರುವ ಸ್ಟೀಲ್ ಅಂಗಡಿ, ಶ್ರೀರಂಗಪಟ್ಟಣದ ಅರಕೆರೆ ಗ್ರಾಮದ ಲ್ಲಿನ ಮನೆಯ ಮೇಲೂ ದಾಳಿ ಮಾಡಿ, ಶೋಧ ನಡೆಸಿದರು.
''ಕಾಲೇಜಿಗೆ ತೆರಳಿ ಪಾಠ ಮಾಡಿದ್ದಕ್ಕಿಂತ ವ್ಯಾಪಾರ ವಹಿವಾಟಿನಲ್ಲಿ ತೊಡಗಿಸಿಕೊಂಡಿದ್ದೇ ಹೆಚ್ಚು. ಗೃಹ ನಿರ್ಮಾಣ ಸಹಕಾರ ಸಂಘ ಸ್ಥಾಪಿಸಿ ಸಾಕಷ್ಟು ಮಂದಿಗೆ ನಿವೇಶನ ನೀಡದೇ ವಂಚಿಸಿದ್ದರು'' ಎಂಬ ಆರೋಪಗಳಿವೆ.
ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್, ಐಜಿಪಿ ಡಾ.ಸುಬ್ರಮಣ್ಯೇಶ್ವರ ರಾವ್, ಎಸ್ಪಿ ಸುರೇಶ್ ಬಾಬು ಮಾರ್ಗದರ್ಶ ನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ಕೃಷ್ಣಯ್ಯ ಅವರೊಂದಿಗೆ ಐದು ಮಂದಿ ಡಿವೈಎಸ್ಪಿಗಳು ಮತ್ತು 10 ಇನ್ಸ್ಪೆಕ್ಟರ್ಗಳು ಮತ್ತು ಸಿಬ್ಬಂದಿ ಇದ್ದರು.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications