ವರ್ಷದೊಳಗೆ 202 ಕೋಟಿ ರೂ ವೆಚ್ಚದಲ್ಲಿ 117 ಪೊಲೀಸ್ ಠಾಣೆ ನಿರ್ಮಾಣ: ಆರಗ ಜ್ಞಾನೇಂದ್ರ
ಮೈಸೂರು, ಅಕ್ಟೋಬರ್ 1: ವರ್ಷದೊಳಗೆ 202 ಕೋಟಿ ರೂ.ವೆಚ್ಚದಲ್ಲಿ ರಾಜ್ಯದಲ್ಲಿ 117 ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಶನಿವಾರ ಮೈಸೂರು ಜಿಲ್ಲಾ ಪೊಲೀಸ್ ಡಿಎಆರ್ ಘಟಕದ ಆಡಳಿತ ಕಚೇರಿ ಹಾಗೂ ಶಸ್ತ್ರಗಾರ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಪೊಲೀಸರಿಗೆ 2025ರ ವೇಳೆಗೆ ಸುಮಾರು 11 ಸಾವಿರ ಮನೆಗಳನ್ನು ನಿರ್ಮಾಣ ಮಾಡುವ ಮೂಲಕ ನೆಮ್ಮದಿಯಿಂದ ಬದುಕಲು ಸರಕಾರ ಅನುಕೂಲ ಮಾಡಿಕೊಡುತ್ತದೆ. ಜೊತೆಗೆ ಕರ್ತವ್ಯಕ್ಕೆ ಕಚೇರಿಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ಪೊಲೀಸರ ಕೈಗೆ ಶಸ್ತ್ರಾಸ್ತ್ರಗಳನ್ನು ನೀಡಿ, ಬೆರಳಚ್ಚು ತಂತ್ರಜ್ಞಾನ ಕೇಂದ್ರಗಳನ್ನು ಸ್ಥಾಪಿಸಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉತ್ತಮ ವಾತಾವರಣ ನಿರ್ಮಿಸಲಾಗುವುದು. ಈ ಮೂಲಕ ಅಪರಾಧಿಗಳನ್ನು ತಕ್ಷಣ ಪತ್ತೆ ಹಚ್ಚಲು ಸಹಕಾರಿಯಾಗಲಿದೆ. ಜೊತೆಗೆ ನ್ಯಾಯಾಲಯಕ್ಕೆ ಹೋಗುವ ಪ್ರಕರಣಗಳ ಸಂಖ್ಯೆಯನ್ನ ಸಹ ಕಡಿಮೆ ಮಾಡಲಾಗುವುದು ಎಂದು ತಿಳಿಸಿದರು.

ಕೇಂದ್ರ ಕಾರಾಗೃಹಕ್ಕೆ ಭೇಟಿ
ಜಿಲ್ಲಾ ಪ್ರವಾಸದಲ್ಲಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಶನಿವಾರ ಮೈಸೂರು ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಕಾರಾಗೃಹದ ಸಿಬ್ಬಂದಿಗಳೇ ನಿರ್ವಹಿಸುವ, ಕಾರಾಗೃಹದ ಎಫ್ಎಂ ಬಾನುಲಿ ಕೇಂದ್ರವನ್ನು ವೀಕ್ಷಿಸಿದರು. ಬಾನುಲಿ ಪ್ರಸಾರ ಕೇಂದ್ರದ ಮೂಲಕ, ಕಾರಾಗೃಹ ವಾಸಿಗಳನ್ನು ಉದ್ದೇಶಿಸಿ ಮಾತನಾಡಿ, ಕಾರಾಗೃಹವನ್ನು ಸುಧಾರಣೆಯ ಹಾಗೂ ಮನ ಪರಿವರ್ತನೆಯ ತಾಣವೆಂದು, ಸ್ವೀಕರಿಸಿ, ಹಾಗೂ ಇಲ್ಲಿನ ಹೊರತಾಗಿಯೂ ಬದುಕು ಇದೆ ಎಂಬ ವಾಸ್ತವವನ್ನು ಅರಿತು ಕೊಳ್ಳಿ ಎಂದು, ಹೇಳಿದ ಸಚಿವರು, ಎಲ್ಲರಿಗೂ ಶುಭ ಹಾರೈಸಿದರು.
ಕಾರಾಗೃಹ ದಲ್ಲಿರುವ, ಕೈ ಮಗ್ಗ ಘಟಕ, ಕೌಶಲ್ಯ ಅಭಿವೃದ್ದಿ ಕೇಂದ್ರ, ಹೊಲಿಗೆ ತರಭೇತಿ ಘಟಕಕ್ಕೂ ಭೇಟಿ ನೀಡಿದ ಸಚಿವರು, ಸಜಾ ಬಂಧಿ ಕೈದಿಗಳ ಜತೆ ಸಂಭಾಷಣೆ ನಡೆಸಿದರು. ಕಾರಾಗೃಹದ ಒಳಗಿರುವ, ಕೈದಿಗಳ ಪ್ರಾರ್ಥನಾ ಮಂದಿರಕ್ಕೆ ಭೇಟಿ ನೀಡಿದ ಸಚಿವರನ್ನು, ಕೈದಿಗಳು, ಸುಶ್ರಾವ್ಯ ವಾಗಿ ಹಾಡುವುದರ ಮೂಲಕ ಬರ ಮಾಡಿಕೊಂಡರು.
ಸಜಾ ಬಂಧಿ ಕೈದಿಗಳು, ಮಹಿಳಾ ಸಜಾಬಂಧಿಗಳನ್ನು ಸಚಿವರು ಅವರ ಅಹವಾಲುಗಳನ್ನು ಸ್ವೀಕರಿಸಿ, ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಸಚಿವರು ಭರವಸೆ ನೀಡಿದ ಸಚಿವ, ಕಾರಾಗೃಹದ ಅಡುಗೆ ವಿಭಾಗಕ್ಕೆ ಭೇಟಿ ನೀಡಿದ ಸಚಿವರು, ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು, ಸೂಚಿಸಿದರು.
ನಂತರ ಜೈಲು ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಜೈಲಿನ ಒಳಗಡೆ, ಮಾದಕ ವಸ್ತುಗಳು, ಮೊಬೈಲ್ ಫೋನ್ ಬಳಕೆ ವಿರುದ್ಧ ತೀವ್ರ ನಿಗಾ ವಹಿಸಬೇಕು ಎಂದು, ನಿರ್ದೇಶನ ನೀಡಿದರು.
-
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications