ಹಸಿರು ಬೆಳೆಸಿ, ನೀರು ಉಳಿಸಿ : ಇದು ಮೈಸೂರು ದಸರಾ ಥೀಮ್
ಮೈಸೂರು, ಆಗಸ್ಟ್ 10: ವಿಶ್ವವಿಖ್ಯಾತ ಮೈಸೂರು ದಸರಾವನ್ನು ಅಕ್ಟೋಬರ್ 1 ರಿಂದ 11 ರ ವರೆಗೆ ಒಟ್ಟು ಹನ್ನೊಂದು ದಿನ ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ 21ರಂದು ಹುಣಸೂರಿನ ವೀರನಹೊಸಳ್ಳಿಯಿಂದ ಹೊರಡುವ ಗಜಪಯಣ ಅಶೋಕಪುರಂನಲ್ಲಿರುವ ಅರಣ್ಯಭವನಕ್ಕೆ ಆಗಮಿಸಲಿದೆ. ಆಗಸ್ಟ್ 26ರಂದು ಆನೆಗಳನ್ನು ಅರಮನೆಯಲ್ಲಿ ಸ್ವಾಗತಿಸಲಾಗುವುದು ಎಂದರು.

ನಾಡೋಜ, ಕವಿ ಚೆನ್ನವೀರ ಕಣವಿ ಅವರು ದಸರಾ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಆಗಸ್ಟ್ 16ರಂದು ದಸರಾ ವೆಬ್ಸೈಟಿಗೆ ಚಾಲನೆ ನೀಡಲಾಗುವುದು. ಈ ಬಾರಿ ದಸರಾವನ್ನು ವಿಷಯಾಧಾರಿತವಾಗಿ ಆಚರಿಸಲು ಯೋಜಿಸಿದ್ದು, ಹಸಿರು ಹಾಗೂ ನೀರಿನ ಸಂರಕ್ಷಣೆ ಮುಖ್ಯ ವಿಷಯವಾಗಿರಲಿದೆ.
ನಗರದಲ್ಲಿರುವ ಅರಮನೆ ಸೇರಿದಂತೆ ಮೈಸೂರಿನ ಸುತ್ತಮುತ್ತ 7 ರಿಂದ 8 ಅರಮನೆಗಳಿದ್ದು, ಇವುಗಳನ್ನೂ ಜನಾಕರ್ಷಿತ ಪ್ರದೇಶವಾಗಿ ಅಭಿವೃದ್ಧಿಗೊಳಿಸಲಾಗುವುದು. ಇದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಲಿದೆ.
ದಸರೆ ಆಚರಣೆಗಾಗಿ ಜಿಲ್ಲಾಡಳಿತದಿಂದ 14.25 ಕೋಟಿ ರು. ಅಂದಾಜು ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇದರಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ದಸರೆ ಆಚರಣೆಗೆ 1 ಕೋಟಿ ಹಾಗೂ ಶ್ರೀರಂಗಪಟ್ಟಣದಲ್ಲಿ ದಸರಾ ಆಚರಣೆಗೆ 50 ಲಕ್ಷ ವೆಚ್ಚವೂ ಸೇರಿದೆ ಎಂದರು.

ಆಹಾರ ಮೇಳದಲ್ಲಿ ಹೆಚ್ಚಿನ ಜನರು ಭಾಗವಹಿಸುವುದರಿಂದ ಈ ಬಾರಿ 2 ಸ್ಥಳದಲ್ಲಿ ಆಹಾರ ಮೇಳ ಆಯೋಜಿಸಲಾಗುವುದು. ಆಹಾರ ಉಪಸಮಿತಿಯವರು ಚರ್ಚಿಸಿ, ಸಾರ್ವಜನಿಕರಿಗೆ ಉಪಯುಕ್ತವಾಗುವ ಸ್ಥಳಗಳನ್ನು ಗುರುತಿಸಲಿದ್ದಾರೆ ಎಂದರು.
ಸಣ್ಣ ವಿಮಾನ, ಹೆಲಿಕಾಪ್ಟರ್ ವ್ಯವಸ್ಥೆ: ದೇಶ- ವಿದೇಶಗಳಿಂದ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ದಸರಾ ಸಂದರ್ಭದಲ್ಲಿ ಸಣ್ಣ ವಿಮಾನ ಹಾಗೂ ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗುವುದು. ಮುಖ್ಯ ಸ್ಥಳಗಳಲ್ಲಿ ಮಾಹಿತಿ ಕೇಂದ್ರಗಳನ್ನು ತೆರೆದು ದಸರಾ ಹಾಗೂ ಪ್ರವಾಸಿ ತಾಣಗಳ ಸಂಪೂರ್ಣ ಮಾಹಿತಿ ನೀಡಲಾಗುವುದು ಎಂದರು.
ಸ್ವಾಗತ ಮತ್ತು ಆಮಂತ್ರಣ, ಮೆರವಣಿಗೆ, ಪಂಜಿನ ಕವಾಯತು, ಸ್ತಬ್ಧಚಿತ್ರ, ರೈತ ಮತ್ತು ಗ್ರಾಮೀಣ ದಸರಾ, ಕ್ರೀಡಾ, ಸಾಂಸ್ಕೃತಿಕ, ಲಲಿತಕಲೆ ಮತ್ತು ಕರಕುಶಲ ಕಲೆ, ಯುವ ದಸರಾ, ಮಹಿಳಾ ಮತ್ತು ಮಕ್ಕಳ ದಸರಾ, ಆಹಾರ ಮೇಳ, ಸ್ವಚ್ಛತಾ ಸಮಿತಿ, ಯೋಗ ದಸರಾ, ಚಲನಚಿತ್ರ ದಸರಾ ದರ್ಶನ, ಕುಸ್ತಿ, ದೀಪಾಲಂಕಾರ ಹಾಗೂ ಕವಿಗೋಷ್ಠಿ ಸೇರಿದಂತೆ ಇತರ ಕಾರ್ಯಕ್ರಮಗಳ ಅಯೋಜನೆಗೆ ಉಪಸಮಿತಿಗಳನ್ನು ರಚಿಸಿ, ಜವಾಬ್ದಾರಿ ವಹಿಸಲಾಗುವುದು ಎಂದು ಹೇಳಿದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications