Mysuru: ಹೆಣ್ಣು ಭ್ರೂಣ ಹತ್ಯೆ ಪ್ರಕರಣ; 17 ಮಂದಿ ವಿರುದ್ಧ ದೂರು ದಾಖಲು
ಮೈಸೂರು: ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ರಾಜ್ಯದಲ್ಲೇ ದೊಡ್ಡ ಸದ್ದು ಮಾಡಿತ್ತು. ಈ ಸಂಬಂಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಆದೇಶದ ಮೇರೆಗೆ ಮೈಸೂರು ಜಿಲ್ಲೆಯಲ್ಲಿ 17 ಮಂದಿ ವಿರುದ್ಧ ದೂರು ದಾಖಲಾಗಿದೆ.
ಉದಯಗಿರಿ ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂತಾನೋತ್ಪತ್ತಿ ಮಕ್ಕಳ ಆರೋಗ್ಯಾಧಿಕಾರಿ ಡಾ.ಎಸ್.ಗೋಪಿನಾಥ್ ಅವರು 5 ಮಹಿಳೆಯರನ್ನೂ ಒಳಗೊಂಡಂತೆ 17 ಆರೋಪಿಗಳ ವಿರುದ್ಧ ದೂರು ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಯನ್ ಕುಮಾರ್, ಸುನಂದ, ಶಿವನಂಜೇಗೌಡ, ಡಾ.ತುಳಸೀರಾಮ್, ಸಿದ್ದೇಶ್, ಪುಟ್ಟರಾಜು, ಎ.ಎಲ್.ಸತ್ಯ, ಧನಂಜಯ್ ಗೌಡ, ಡಾ.ಚಂದನ್ ಬಲ್ಲಾಳ್, ಅಭಿಷೇಕ್ ಗೌಡ, ನವೀನ್ಕುಮಾರ್, ವಿರೇಶ್, ಮೀನ, ರಿಜ್ಞಾ ಖಾನಂ, ನಿಸಾರ್ ಅಹಮದ್, ಮಂಜುಳ, ಉಷಾರಾಣಿ ವಿರುದ್ಧ ದೂರು ದಾಖಲಾಗಿದೆ.
ಗರ್ಭಪಾತ ಮಾಡಿಸಿಕೊಳ್ಳಲು ಒಪ್ಪಿದ ಗರ್ಭಿಣಿಯರಿಗೆ ಉಷಾರಾಣಿ ಮುಖಾಂತರ ಮೈಸೂರಿನ ಚಾಮುಂಡೇಶ್ವರಿ ಆಸ್ಪತ್ರೆಯಲ್ಲಿ ವೈದ್ಯರಿಗೆ ಮತ್ತು ಮಾಲೀಕರಿಗೆ ಅನುಮಾನ ಬಾರದ ರೀತಿಯಲ್ಲಿ ಗರ್ಭಪಾತ ಮಾಡಿಸುತ್ತಿದ್ದರು. ನಂತರ ಕಮೀಷನ್ ಹಣವನ್ನು ಮಧ್ಯವರ್ತಿಗಳ ಅಕೌಂಟ್ಗೆ ಅಥವಾ ನಗದು ರೂಪದಲ್ಲಿ ಪಾವತಿಸುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಸ್ಕ್ಯಾನಿಂಗ್ನಲ್ಲಿ ಹೆಣ್ಣುಮಗುವೆಂದು ತಿಳಿದು ಬಂದರೆ ಡಾ.ಚಂದನ್ ಬಲ್ಲಾಳ್ ಅವರಿಗೆ ಸೇರಿದ ಮೈಸೂರಿನ ಮಾತ ಆಸ್ಪತ್ರೆ ಮತ್ತು ಆಯುರ್ವೇದಿಕ್ ಪೈಲ್ಸ್ ಡೇ ಕೇರ್ ಸೆಂಟರ್ಗಳಲ್ಲಿ ಮೀನ, ರಿಜ್ಞಾ ಖಾನಂ, ನಿಸಾರ್ ಅಹಮದ್, ಮಂಜುಳ ಅವರ ಮೂಲಕ ಗರ್ಭಪಾತ ಮಾಡಿಸಲಾಗುತ್ತಿತ್ತು. ಗರ್ಭಪಾತ ಮಾಡಿದ ಭ್ರೂಣಗಳನ್ನು ನಿಸಾರ್ ಅಹಮದ್ ವಿಲೇವಾರಿ ಮಾಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಶಿವನಂಜೇಗೌಡ, ನಯನ್ ಕುಮಾರ್, ಸುನಂದ ಎಂಬುವರು ಲ್ಯಾಬ್ಗಳಿಗೆ ಪರೀಕ್ಷೆಗೆ ಬರುತ್ತಿದ್ದ ಗರ್ಭಿಣಿಯರು ಹಾಗೂ ಮಧ್ಯವರ್ತಿಗಳಾದ ಡಾ.ತುಳಸೀರಾಮ್, ಸಿದ್ದೇಶ್, ಪುಟ್ಟರಾಜು, ಎ.ಎಲ್.ಸತ್ಯ, ಅಭಿಷೇಕ್ ಗೌಡ, ಧನಂಜಯ್ ಗೌಡ ಅವರು ಕರೆತರುತ್ತಿದ್ದ ಗರ್ಭಿಣಿಯರನ್ನು ತಮ್ಮ ಸಂಬಂಧಿಕರಿಗೆ ಸೇರಿದ ಮಂಡ್ಯ ಜಿಲ್ಲೆಯ ಹಾಡ್ಯ ಗ್ರಾಮದ ಜಮೀನಿನಲ್ಲಿರುವ ಆಲೆಮನೆಗೆ ಕಳುಹಿಸಿ ಸ್ಕ್ಯಾನಿಂಗ್ ಮಾಡಿಸುತ್ತಿದ್ದರು ಎಂದು ದೂರಿನಲ್ಲಿ ದಾಖಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications