ಸರಳ ದಸರಾ; ಮೃಗಾಲಯದ ಆದಾಯ ಭಾರಿ ಕುಸಿತ!
ಮೈಸೂರು, ಅಕ್ಟೋಬರ್ 30 : ಕೋವಿಡ್ ಕಾರಣದಿಂದಾಗಿ ಈ ಬಾರಿಯ ಮೈಸೂರು ದಸರಾವನ್ನು ಸರಳವಾಗಿ ಆಚರಣೆ ಮಾಡಲಾಯಿತು. ಪ್ರವಾಸಿಗರು ಕಡಿಮೆ ಸಂಖ್ಯೆಯಲ್ಲಿ ನಗರಕ್ಕೆ ಭೇಟಿ ನೀಡಿದರು. ಇದರಿಂದಾಗಿ ಮೃಗಾಲಯದ ಆದಾಯವೂ ಕುಸಿತವಾಗಿದೆ.
ದಸರಾ ಸಮಯದಲ್ಲಿ ಮೈಸೂರಿನಲ್ಲಿ ಜನಜಂಗುಳಿ ಕಂಡು ಬರುತ್ತಿತ್ತು. ಆದರೆ, ಈ ಬಾರಿ ದಸರಾ ಸಮಯದಲ್ಲಿ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡಿದ್ದು 20 ಸಾವಿರಕ್ಕೂ ಅಧಿಕ ಪ್ರವಾಸಿಗರು ಮಾತ್ರ.
10 ದಿನಗಳ ಅವಧಿಯಲ್ಲಿ 20 ಸಾವಿರಕ್ಕೂ ಅಧಿಕ ಪ್ರವಾಸಿಗರು ಮೃಗಾಲಯಕ್ಕೆ ಆಗಮಿಸಿದ್ದು, 19.56 ಲಕ್ಷ ಆದಾಯ ಬಂದಿದೆ. ಕಳೆದ ಬಾರಿಯ ದಸರಾ ಸಂದರ್ಭಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿದೆ.

ಮೃಗಾಲಯಕ್ಕೆ 2017ರಲ್ಲಿ 1.23 ಲಕ್ಷ, 2018ರಲ್ಲಿ 1.53 ಲಕ್ಷ ಮತ್ತು 2019ರಲ್ಲಿ 1.65 ಲಕ್ಷ ಜನರು ಭೇಟಿ ನೀಡಿದ್ದರು. ಮೃಗಾಲಯ ಮಾತ್ರವಲ್ಲ ಅರಮನೆಗೆ ಸಹ ಭೇಟಿ ನೀಡಿದ ಜನರ ಸಂಖ್ಯೆ ಕಡಿಮೆ ಇದೆ. ಖಾಸಗಿ ದರ್ಬಾರ್ ವೀಕ್ಷಣೆಗೆ ಈ ಬಾರಿ ಅವಕಾಶವನ್ನು ನೀಡಿರಲಿಲ್ಲ.
ಅರಮನೆಗೆ ಭೇಟಿ : ಅಕ್ಟೋಬರ್ 17ರಿಂದ 25ರ ತನಕ ಮೈಸೂರು ಅರಮನೆಗೆ 9,516 ಪ್ರವಾಸಿಗರು ಭೇಟಿ ನೀಡಿದ್ದಾರೆ. ಅಕ್ಟೋಬರ್ 27ರಂದು 2,758 ಜನ, ಅ. 28ರಂದು 2606 ಜನರು ಭೇಟಿ ಕೊಟ್ಟಿದ್ದಾರೆ.
ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಸರಳವಾಗಿ ದಸರಾ ಆಚರಣೆ ಮಾಡಲಾಗಿತ್ತು. ಜಂಬೂ ಸವಾರಿ ಸಹ ಅರಮನೆ ಆವರಣಕ್ಕೆ ಸೀಮಿತವಾಗಿತ್ತು. ಅರಮನೆಯಲ್ಲಿ ನಡೆಯುವ ಖಾಸಗಿ ದರ್ಬಾರ್ ನೋಡಲು ಈ ಬಾರಿ ಜನರಿಗೆ ಅವಕಾಶವನ್ನು ನೀಡಿರಲಿಲ್ಲ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications