Get Updates
Get notified of breaking news, exclusive insights, and must-see stories!

ಮೈಸೂರಲ್ಲಿ ಮರ್ಯಾದಾ ಹತ್ಯೆ; ತಂದೆಯಿಂದಲೇ ಮಗಳ ಕೊಲೆ

ಮೈಸೂರು, ಜೂನ್ 18; ಮಗಳು ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ತಂದೆಯೇ ಮಗಳನ್ನು ಹತ್ಯೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಆಧುನಿಕ ಜಗತ್ತಿನಲ್ಲಿ ಮರ್ಯಾದಾ ಹತ್ಯೆ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಈ ಘಟನೆ ದುರಂತ ಸಾಕ್ಷಿಯಾಗಿದೆ.

ಪಿರಿಯಾಪಟ್ಟಣದ ಗೊಲ್ಲರ ಬೀದಿಯ ನಿವಾಸಿ ಜಯರಾಂ ಪುತ್ರಿ ಗಾಯಿತ್ರಿ (19) ಎಂಬಾಕೆಯನ್ನು ಹತ್ಯೆ ಮಾಡಿದ ಆರೋಪಿ. ಗಾಯತ್ರಿ ಅನ್ಯ ಕೋಮಿನ ಯುವಕನನ್ನು ಪ್ರೀತಿಸುತ್ತಿರುವ ವಿಚಾರ ಹೆತ್ತವರಿಗೆ ಗೊತ್ತಾಗಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಆದರೆ ಗಾಯತ್ರಿ ಮಾತ್ರ ತಾನು ಆತನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು. ಈ ವಿಷಯವಾಗಿ ಮನೆಯಲ್ಲಿ ಜಟಾಪಟಿ ನಡೆದಿತ್ತು. ಮಗಳ ಮನಸ್ಸನ್ನು ಬದಲಾಯಿಸಲು ತಂದೆ ಜಯರಾಂ ಸರ್ವ ರೀತಿಯಲ್ಲಿಯೂ ಪ್ರಯತ್ನ ಮಾಡಿದ್ದರು. ಆದರೆ ಆಕೆ ಯಾವುದೇ ಒತ್ತಡಕ್ಕೂ ಮಣಿದಿರಲಿಲ್ಲ.

19 Year Old Killed In Honour Killing At Piriyapatna

ಶುಕ್ರವಾರ ಜಮೀನಿನಲ್ಲಿ ಜಯರಾಂ ಉಳುಮೆ ಮಾಡುತ್ತಿದ್ದ. ಮಧ್ಯಾಹ್ನ 12.30ಕ್ಕೆ ಮಗಳು ಗಾಯತ್ರಿ ಊಟ ತೆಗೆದುಕೊಂಡು ಹೋಗಿದ್ದಳು. ಊಟದ ಸಮಯದಲ್ಲಿ ಮತ್ತೆ ಮಗಳೊಂದಿಗೆ ಮಾತು ಶುರುಮಾಡಿದ ಜಯರಾಂ ನೀನು ಪ್ರೀತಿಸುತ್ತಿರುವ ಯುವಕ ನಮ್ಮ ಕೋಮಿನವನಲ್ಲ. ದಯವಿಟ್ಟು ಅವನನ್ನು ಬಿಟ್ಟು ಬಿಡು ಎಂದಿದ್ದಾನೆ.

ಆಗ ಗಾಯತ್ರಿ ನಾನು ಮದುವೆಯಾಗುವುದಾದರೆ ಅವನನ್ನೇ. ಈ ವಿಚಾರದಲ್ಲಿ ನಾನು ಯಾರ ಮಾತನ್ನೂ ಕೇಳುವುದಿಲ್ಲ ಎಂದಿದ್ದಾಳೆ. ಇದರಿಂದ ಕೋಪಗೊಂಡ ಜಯರಾಂ ತನ್ನ ಬಳಿಯಿದ್ದ ಮಚ್ಚನ್ನು ಆಕೆಯತ್ತ ಬೀಸಿದ್ದಾನೆ. ಈ ವೇಳೆ ಆಕೆ ಕೈಯನ್ನು ಅಡ್ಡ ಮಾಡಿದ್ದು ಮೊದಲ ಏಟು ಕೈಗೆ ಬಿದ್ದಿದೆ.

ಪುನಃ ಮತ್ತೆ ಮಚ್ಚಿನಿಂದ ಮಗಳ ಕುತ್ತಿಗೆ ಭಾಗಕ್ಕೆ ಬೀಸಿದ್ದಾನೆ. ಪರಿಣಾಮ ಗಾಯತ್ರಿ ರಕ್ತದ ಮಡುವಿನಲ್ಲಿ ಬಿದ್ದು ಪ್ರಾಣ ಬಿಟ್ಟಿದ್ದಾಳೆ. ಮಗಳನ್ನು ಕೊಂದ ಬಳಿಕ ಜಯರಾಂ ನೇರವಾಗಿ ಪಿರಿಯಾಪಟ್ಟಣ ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆಯೇ ಕೃತ್ಯ ನಡೆದ ಸ್ಥಳಕ್ಕೆ ಎಸ್ಪಿ ಚೇತನ್, ಡಿವೈಎಸ್ಪಿ ರವಿಪ್ರಸಾದ್, ಇನ್ಸ್ ಪೆಕ್ಟರ್ ಜಗದೀಶ್, ಬಿ. ಆರ್. ಪ್ರದೀಪ್, ಪಿಎಸ್ಐ ಸದಾಶಿವತಿಪರೆಡ್ಡಿ, ಪುಟ್ಟರಾಜು ಭೇಟಿ ನೀಡಿ ಸ್ಥಳ ಮಹಜರು ನಡೆಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+