ಮೈಸೂರಲ್ಲಿ ಮರ್ಯಾದಾ ಹತ್ಯೆ; ತಂದೆಯಿಂದಲೇ ಮಗಳ ಕೊಲೆ
ಮೈಸೂರು, ಜೂನ್ 18; ಮಗಳು ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ತಂದೆಯೇ ಮಗಳನ್ನು ಹತ್ಯೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಆಧುನಿಕ ಜಗತ್ತಿನಲ್ಲಿ ಮರ್ಯಾದಾ ಹತ್ಯೆ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಈ ಘಟನೆ ದುರಂತ ಸಾಕ್ಷಿಯಾಗಿದೆ.
ಪಿರಿಯಾಪಟ್ಟಣದ ಗೊಲ್ಲರ ಬೀದಿಯ ನಿವಾಸಿ ಜಯರಾಂ ಪುತ್ರಿ ಗಾಯಿತ್ರಿ (19) ಎಂಬಾಕೆಯನ್ನು ಹತ್ಯೆ ಮಾಡಿದ ಆರೋಪಿ. ಗಾಯತ್ರಿ ಅನ್ಯ ಕೋಮಿನ ಯುವಕನನ್ನು ಪ್ರೀತಿಸುತ್ತಿರುವ ವಿಚಾರ ಹೆತ್ತವರಿಗೆ ಗೊತ್ತಾಗಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.
ಆದರೆ ಗಾಯತ್ರಿ ಮಾತ್ರ ತಾನು ಆತನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು. ಈ ವಿಷಯವಾಗಿ ಮನೆಯಲ್ಲಿ ಜಟಾಪಟಿ ನಡೆದಿತ್ತು. ಮಗಳ ಮನಸ್ಸನ್ನು ಬದಲಾಯಿಸಲು ತಂದೆ ಜಯರಾಂ ಸರ್ವ ರೀತಿಯಲ್ಲಿಯೂ ಪ್ರಯತ್ನ ಮಾಡಿದ್ದರು. ಆದರೆ ಆಕೆ ಯಾವುದೇ ಒತ್ತಡಕ್ಕೂ ಮಣಿದಿರಲಿಲ್ಲ.

ಶುಕ್ರವಾರ ಜಮೀನಿನಲ್ಲಿ ಜಯರಾಂ ಉಳುಮೆ ಮಾಡುತ್ತಿದ್ದ. ಮಧ್ಯಾಹ್ನ 12.30ಕ್ಕೆ ಮಗಳು ಗಾಯತ್ರಿ ಊಟ ತೆಗೆದುಕೊಂಡು ಹೋಗಿದ್ದಳು. ಊಟದ ಸಮಯದಲ್ಲಿ ಮತ್ತೆ ಮಗಳೊಂದಿಗೆ ಮಾತು ಶುರುಮಾಡಿದ ಜಯರಾಂ ನೀನು ಪ್ರೀತಿಸುತ್ತಿರುವ ಯುವಕ ನಮ್ಮ ಕೋಮಿನವನಲ್ಲ. ದಯವಿಟ್ಟು ಅವನನ್ನು ಬಿಟ್ಟು ಬಿಡು ಎಂದಿದ್ದಾನೆ.
ಆಗ ಗಾಯತ್ರಿ ನಾನು ಮದುವೆಯಾಗುವುದಾದರೆ ಅವನನ್ನೇ. ಈ ವಿಚಾರದಲ್ಲಿ ನಾನು ಯಾರ ಮಾತನ್ನೂ ಕೇಳುವುದಿಲ್ಲ ಎಂದಿದ್ದಾಳೆ. ಇದರಿಂದ ಕೋಪಗೊಂಡ ಜಯರಾಂ ತನ್ನ ಬಳಿಯಿದ್ದ ಮಚ್ಚನ್ನು ಆಕೆಯತ್ತ ಬೀಸಿದ್ದಾನೆ. ಈ ವೇಳೆ ಆಕೆ ಕೈಯನ್ನು ಅಡ್ಡ ಮಾಡಿದ್ದು ಮೊದಲ ಏಟು ಕೈಗೆ ಬಿದ್ದಿದೆ.
ಪುನಃ ಮತ್ತೆ ಮಚ್ಚಿನಿಂದ ಮಗಳ ಕುತ್ತಿಗೆ ಭಾಗಕ್ಕೆ ಬೀಸಿದ್ದಾನೆ. ಪರಿಣಾಮ ಗಾಯತ್ರಿ ರಕ್ತದ ಮಡುವಿನಲ್ಲಿ ಬಿದ್ದು ಪ್ರಾಣ ಬಿಟ್ಟಿದ್ದಾಳೆ. ಮಗಳನ್ನು ಕೊಂದ ಬಳಿಕ ಜಯರಾಂ ನೇರವಾಗಿ ಪಿರಿಯಾಪಟ್ಟಣ ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆಯೇ ಕೃತ್ಯ ನಡೆದ ಸ್ಥಳಕ್ಕೆ ಎಸ್ಪಿ ಚೇತನ್, ಡಿವೈಎಸ್ಪಿ ರವಿಪ್ರಸಾದ್, ಇನ್ಸ್ ಪೆಕ್ಟರ್ ಜಗದೀಶ್, ಬಿ. ಆರ್. ಪ್ರದೀಪ್, ಪಿಎಸ್ಐ ಸದಾಶಿವತಿಪರೆಡ್ಡಿ, ಪುಟ್ಟರಾಜು ಭೇಟಿ ನೀಡಿ ಸ್ಥಳ ಮಹಜರು ನಡೆಸಿದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications