ಆರ್ಬಿಐ ನೌಕರನೆಂದು ವಂಚಿಸುತ್ತಿದ್ದವರ ಬಂಧನ; 3 ಐಷಾರಾಮಿ ಕಾರು ವಶ
ಮೈಸೂರು, ಮಾರ್ಚ್ 16: ಐಷಾರಾಮಿ ಜೀವನ ನಡೆಸುವ ನಿಟ್ಟಿನಲ್ಲಿ ಆರ್ಬಿಐ ನೌಕರನೆಂದು ಸಾರ್ವಜನಿಕರನ್ನು ನಂಬಿಸಿ, ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ವಂಚಿಸುತ್ತಿದ್ದ ವಂಚಕರಿಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ನಕಲಿ ದಾಖಲಾತಿಗಳು ಹಾಗೂ 3 ದುಬಾರಿ ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.
ಮೈಸೂರಿನ ಹೆಬ್ಬಾಳದ ಮಾದೇಗೌಡ ಸರ್ಕಲ್ ನಿವಾಸಿ, ರಿಯಲ್ ಎಸ್ಟೇಟ್ ವ್ಯವಹಾರಿ ಎನ್.ಮಂಜು (30), ನಂಜನಗೂಡು ತಾಲ್ಲೂಕು ಎಂ.ಕೊಂಗಹಳ್ಳಿ ನಿವಾಸಿ, ನಿವೃತ್ತ ಕಂಡಕ್ಟರ್ ಬಿ.ಶಂಕರ್ (ಹಾಲಿವಾಸ ಶ್ರೀರಾಂಪುರ) ಬಂಧಿತ ಆರೋಪಿಗಳು.
ಆರೋಪಿಗಳಿಂದ ಆರ್ಬಿಐನ ನಕಲಿ ದಾಖಲಾತಿಗಳು, ನಕಲಿ ದಾಖಲಾತಿಗಳನ್ನು ಸೃಷ್ಟಿಸಲು ಬಳಸುತ್ತಿದ್ದ ಲ್ಯಾಪ್ಟಾಪ್, ಪ್ರಿಂಟರ್ಸ್, ಆರ್ಬಿಐನ 25 ನಕಲಿ ಬಾಂಡ್ ಪೇಪರ್ಗಳು, 2 ಸೀಲುಗಳು ಆರೋಪಿ ಮಂಜುಗೆ ಸಂಬಂಧಿಸಿದ ವಿವಿಧ ಬ್ಯಾಂಕುಗಳ ಪಾಸ್ ಪುಸ್ತಕಗಳು, ಚೆಕ್ ಪುಸ್ತಕಗಳು, ಮಹೇಂದ್ರ ಎಕ್ಸ್ ಯುವಿ 500, ಮಾರುತಿ ಸುಜುಕಿ ಬಲೇನೋ, ಬಿಎಂಡಬ್ಲ್ಯೂ ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.

ಮಂಜು ಎಂಬಾತ ತಾನು ಭಾರತೀಯ ರಿಸರ್ವ್ ಬ್ಯಾಂಕ್ನ ನೌಕರೆನಂದು ಹೇಳಿ, ಹಣ ದ್ವಿಗುಣಗೊಳಿಸಿ ಕೊಡುವುದಾಗಿ ನಂಬಿಸುತ್ತಿದ್ದ. ಈತನೊಂದಿಗೆ ಸೇರಿಕೊಂಡಿದ್ದ ಬಿ.ಶಂಕರ್, ಆರ್ಬಿಐನ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ನೀಡುತ್ತಿದ್ದ. ಹೆಬ್ಬಾಳ್ ಜಯಮ್ಮ ತಿಮ್ಮೇಗೌಡ ಕಾಂಪ್ಲೆಕ್ಸ್ ನಲ್ಲಿ ಎಂ.ಎಸ್. ಡೆವಲಪರ್ಸ್ ಮತ್ತು ಕನ್ಸ್ಟ್ರಕ್ಷನ್ ಕಚೇರಿ ಇಟ್ಟುಕೊಂಡಿದ್ದ ಕೆಎಸ್ಆರ್ಟಿ ಸಿ ಲೇಔಟ್ನ ನಿವಾಸಿಯೊಬ್ಬರಿಗೆ 30 ಲಕ್ಷ ರೂ. ವಂಚಿಸಿದ್ದರು.
ಈ ಸಂಬಂಧ ಅವರು ನಗರದ ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ಸಂಬಂಧ ತನಿಖೆ ಕೈಗೊಂಡ ಸಿಸಿಬಿ ಪೊಲೀಸರು ಮಾ.8 ರಂದು ಇಬ್ಬರು ಆರೋಪಿಗಳನ್ನು ಮೈಸೂರಿನ ಕೆ.ಆರ್.ಎಸ್ ರಸ್ತೆಯಲ್ಲಿರುವ ಪಿಕೆಟಿಬಿ ಆಸ್ಪತ್ರೆಯ ಬಳಿ ವಶಕ್ಕೆ ಪಡೆದು, ವಿಚಾರಣೆ ಮಾಡಿದಾಗ ವಂಚನೆ ಎಸಗಿರುವುದು ಬೆಳಕಿಗೆ ಬಂದಿದೆ.
ಇವರು ಹಲವಾರು ಬ್ಯಾಂಕ್ಗಳಲ್ಲಿ ಖಾತೆ ಹೊಂದಿ, ಜನರಿಗೆ ಹಣ ದ್ವಿಗುಣಗೊಳಿಸುವುದಾಗಿ ನಂಬಿಸಿ, ಆರ್ಬಿಐನ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ನೀಡಿ, ಕೋಟ್ಯಂತರ ರೂ. ಪಡೆದು ವಂಚಿಸಿದ್ದರು. ಅಲ್ಲದೇ, ದುಬಾರಿ ಕಾರುಗಳಲ್ಲಿ ಓಡಾಡುತ್ತಾ, ಬೆಂಗಳೂರು, ದೆಹಲಿ, ಬಾಂಬೆ ಮತ್ತಿತರ ಸ್ಥಳಗಳಿಗೆ ವಿಮಾನದ ಮೂಲಕ ಓಡಾಡಿಕೊಂಡು, ಸ್ಟಾರ್ ಹೊಟೇಲ್ಗಳಲ್ಲಿ ವಾಸ್ತವ್ಯ ಹೂಡಿ ಹಣ ಖರ್ಚು ಮಾಡಿ, ಐಷಾರಾಮಿ ಜೀವನ ನಡೆಸುತ್ತಿದ್ದರೆಂಬ ಅಂಶ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಈ ಸಂಬಂಧ ಮತ್ತಷ್ಟು ತನಿಖೆ ಮುಂದುವರಿದಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications