ಮೈಸೂರಿನಲ್ಲಿ 20 ಸಾವಿರ ಜನರಿಂದ ಯೋಗಾಭ್ಯಾಸ
ಮೈಸೂರು, ಜೂನ್ 18 : ಇದೇ ಜೂನ್ 21ರಂದು ನಡೆಯುವ ಅಂತಾರಾಷ್ಟ್ರೀಯ ವಿಶ್ವ ಯೋಗ ದಿನದಂದು ವಿಶ್ವದಾಖಲೆ ನಿರ್ಮಿಸುವ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಭಾನುವಾರ ಬೆಳಗ್ಗೆ ರೇಸ್ ಕೋರ್ಸ್ ಗೆ ಸಾಗರೋಪಾದಿಯಲ್ಲಿ ಹರಿದು ಬಂದ ಯೋಗ ಪಟುಗಳು ಯೋಗಾಭ್ಯಾಸ ನಡೆಸಿದರು.
ಮೈಸೂರಿನ ರೇಸ್ ಕೋರ್ಸ್ ಮೈದಾನದಲ್ಲಿ ಭಾನುವಾರ ನಡೆದ ಪೂರ್ವ ತಾಲೀಮಿನ ಯೋಗ ಪ್ರದರ್ಶನದಲ್ಲಿ 20 ಸಾವಿರಕ್ಕೂ ಹೆಚ್ಚು ಯೋಗ ಪಟುಗಳು ಪಾಲ್ಗೊಂಡಿದ್ದರು.
ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ, ಅವರ ಪತ್ನಿ ಅರ್ಪಿತ, ಶಾಸಕ ಎಂ.ಕೆ ಸೋಮಶೇಖರ್, ಜಿಲ್ಲಾಧಿಕಾರಿ ಡಿ. ರಂದೀಪ್, ಪಾಲಿಕೆ ಆಯುಕ್ತ ಜಿ. ಜಗದೀಶ್, ಮುಡಾ ಆಯುಕ್ತ ಡಾ. ಮಹೇಶ್ ಸೇರಿದಂತೆ ಹಿರಿಯ ಸರ್ಕಾರಿ ಅಧಿಕಾರಿಗಳು ಸಾಮೂಹಿಕ ಯೋಗ ಪ್ರದರ್ಶನದ ಪೂರ್ವ ತಾಲೀಮಿನಲ್ಲಿ ಪಾಲ್ಗೊಂಡಿದ್ದರು.

ರೇಸ್ ಕೋರ್ಸ್ ಮೈದಾನ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಜಿಲ್ಲಾಧಿಕಾರಿ ಡಿ.ರಂದೀಪ್ ಮಾತನಾಡಿ ಇಂದು ನಡೆದ ಪೂರ್ವಭಾವಿ ಯೋಗ ಪ್ರದರ್ಶನಕ್ಕೆ ಹತ್ತು ಸಾವಿರ ಯೋಗ ಪಟುಗಳು ಆಗಮಿಸುವ ನಿರೀಕ್ಷೆಯಿತ್ತು.
ಆದರೆ, ನಿರೀಕ್ಷೆಗೂ ಮೀರಿ ಇಪ್ಪತ್ತು ಸಾವಿರಕ್ಕೂ ಹೆಚ್ಚು ಯೋಗ ಪಟುಗಳು ಆಗಮಿಸಿದ್ದಾರೆ. ಜೂನ್ 21ರಂದು ನಡೆಯುವ ವಿಶ್ವಯೋಗ ದಿನಾಚರಣೆಗೆ 45 ಸಾವಿರಕ್ಕೂ ಹೆಚ್ಚು ಯೋಗಪಟುಗಳು ಆಗಮಿಸುವ ನಿರೀಕ್ಷೆಯಿದೆ. ಆ ಮೂಲಕ ಹೊಸ ದಾಖಲೆ ನಿರ್ಮಾಣವಾಗುವ ವಿಶ್ವಾಸವಿದೆ ಎಂದರು.

ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಮಾತನಾಡಿ ಮೈಸೂರಿನಲ್ಲಿ ಜೂನ್ 21ರಂದು ನಡೆಯುವ ವಿಶ್ವ ಯೋಗ ದಿನಾಚರಣೆಯಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ ಮಹದೇವಪ್ಪ ಸೇರಿದಂತೆ ಈ ಭಾಗದ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರಿಗೂ ಆಹ್ವಾನ ನೀಡಲಾಗಿತ್ತು. ಕಾರಣಾಂತರಗಳಿಂದ ಅವರು ಆಗಮಿಸುತ್ತಿಲ್ಲ. ಈ ಬಾರಿ ಮೈಸೂರಿನಲ್ಲಿ ವಿಶ್ವದಾಖಲೆಯ ಯೋಗ ಪ್ರದರ್ಶನ ನಡೆಯುವ ಪರಿಣಾಮ ಮುಂದಿನ ವರ್ಷ ಖಂಡತವಾಗಿಯೂ ನರೇಂದ್ರ ಮೋದಿ ಮೈಸೂರಿಗೆ ಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications