ಮೈಸೂರಿನಲ್ಲಿ ತಲೆಮರೆಸಿಕೊಂಡಿರುವ ಕೊರೊನಾ ಸೋಂಕಿತರ ಸಂಖ್ಯೆ ಎಷ್ಟು ಗೊತ್ತೆ?
ಮೈಸೂರು, ಆಗಸ್ಟ್ 03: ಇಡೀ ದೇಶವೇ ಕೊರೊನಾ ಸೋಂಕಿನ ವಿರುದ್ಧ ಹೋರಾಡುತ್ತಿರುವ ಈ ಸಂದರ್ಭದಲ್ಲಿ ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟವರು ನಾಪತ್ತೆ ಆಗಿರುವುದು ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ.
Recommended Video
ಸರ್ಕಾರ ಏನೇ ಪರೀಕ್ಷೆ ನಡೆಸಿ ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಸೋಂಕಿತರಿಂದಾಗಿ ಆರೋಗ್ಯವಂತರೂ ಸೋಂಕಿಗೆ ತುತ್ತಾಗಬೇಕಿದೆ. ದಿನೇ ದಿನೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲಿದ್ದು, ರಾಜಧಾನಿ ಬೆಂಗಳೂರು ಒಂದರಲ್ಲೇ ಸಾವಿರಾರು ಜನ ಸೋಂಕಿತರು ನಕಲಿ ವಿಳಾಸ ನೀಡಿ ಸರ್ಕಾರಕ್ಕೆ ವಂಚಿಸಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಸೋಂಕಿತರು ತಪ್ಪು ಮಾಹಿತಿ ಮತ್ತು ಸುಳ್ಳು ಮೊಬೈಲ್ ಸಂಖ್ಯೆ ನೀಡಿ ತಲೆಮರೆಸಿಕೊಂಡಿರುವುದು ಬೆಳಕಿಗೆ ಬಂದಿದೆ. ಜಿಲ್ಲೆಯಲ್ಲಿ ಕೊರೊನಾ ತಡೆಯಲು ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಂಡಿದೆ. ಈ ನಡುವೆ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಬಂದಿರುವ ವ್ಯಕ್ತಿಗಳು ತಮ್ಮ ಮೊಬೈಲ್ ನಂಬರನ್ನು ತಪ್ಪಾಗಿ ನೀಡಿರುವುದು ಕಂಡು ಬಂದಿದೆ.

ಜಿಲ್ಲೆಯಲ್ಲಿ ಈವರೆಗೂ ಕೋವಿಡ್ 19 ಪರೀಕ್ಷೆಗೊಳಪಟ್ಟ 230 ಜನರು ತಪ್ಪು ನಂಬರ್ ನೀಡಿದ್ದು, ಈ ಎಲ್ಲಾ 230 ಜನಕ್ಕೂ ಕೊರೊನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಸಂಬಂಧಪಟ್ಟ ವ್ಯಕ್ತಿಗೆ ಕರೆ ಮಾಡಿದಾಗ ರಾಂಗ್ ನಂಬರ್ ನೀಡಿರುವುದು ಪತ್ತೆಯಾಗಿದೆ. ಇದೀಗ ರಾಂಗ್ ನಂಬರ್ ಕೊಟ್ಟವರ ಪತ್ತೆಯೇ ಜಿಲ್ಲಾಡಳಿತಕ್ಕೆ ತಲೆ ನೋವಾಗಿದೆ.
ಕೆಲವರು ತಪ್ಪು ನಂಬರ್ ಕೊಟ್ಟಿದ್ದಾರೆ, ಕೆಲವರು ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ ಎಂದು ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ತಿಳಿಸಿದ್ದಾರೆ. ಇದೀಗ ಸೋಂಕಿತರ ಪತ್ತೆ ದೊಡ್ಡ ಸವಾಲಾಗಿದೆ ಎಂದು ಹೇಳಿದ್ದಾರೆ.
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ












Click it and Unblock the Notifications