ಮೈಸೂರು ವಾರಿಯರ್ಸ್ ನಿಂದ ಕೆಪಿಎಲ್ ಗಾಗಿ ಟ್ಯಾಲೆಂಟ್ ಹಂಟ್
ಮೈಸೂರು, ಜುಲೈ 19 : ಗ್ರಾಮೀಣ ಭಾಗಗಳಲ್ಲಿರುವ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸಲು ಕೆಪಿಎಲ್ ತಂಡ 'ಮೈಸೂರು ವಾರಿಯರ್ಸ್' ವತಿಯಿಂದ ಆಯೋಜಿಸಿದ್ದ ಪ್ರತಿಭಾನ್ವೇಷಣೆ (ಟ್ಯಾಲೆಂಟ್ ಹಂಟ್) ಶಿಬಿರದಲ್ಲಿ 240 ಯುವ ಆಟಗಾರರು ಪಾಲ್ಗೊಂಡಿದ್ದರು.
ಗಂಗೋತ್ರಿ ಗ್ಲೇಡ್ಸ್ ಕ್ರೀಡಾಂಗಣದಲ್ಲಿ ನಡೆದ ಆಯ್ಕೆ ಟ್ರಯಲ್ಸ್ ನಲ್ಲಿ 70 ಬ್ಯಾಟ್ಸ್ ಮನ್ಗಳು, 82 ಆಲ್ರೌಂಡರ್ ಗಳು, 68 ಸ್ಪಿನ್ನರ್ಗಳು ಮತ್ತು 15 ವಿಕೆಟ್ ಕೀಪರ್ ಗಳು ತಮ್ಮ ಸಾಮರ್ಥ್ಯ ಪ್ರದರ್ಶಿಸಿದರು.
ಬೆಂಗಳೂರಿನಲ್ಲಿ ಇದೇ 15 ರಂದು ನಡೆದಿದ್ದ ಪ್ರತಿಭಾನ್ವೇಷಣೆಯಲ್ಲಿ 250 ಆಟಗಾರರು ಪಾಲ್ಗೊಂಡಿದ್ದರು. ಯಲಹಂಕದ ಜಸ್ಟ್ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆದ ಟ್ರಯಲ್ಸ್ ನಲ್ಲಿ 60 ಬ್ಯಾಟ್ಸ್ ಮನ್ಗಳು, 75 ಮಧ್ಯಮ ವೇಗದ ಬೌಲರ್ಗಳು, 50 ಸ್ಪಿನ್ನರ್ಗಳು, 55 ಆಲ್ರೌಂಡರ್ ಗಳು ಮತ್ತು 10 ವಿಕೆಟ್ ಕೀಪರ್ ಗಳು ಭಾಗವಹಿಸಿದ್ದರು.

ಎರಡೂ ನಗರಗಳಲ್ಲಿ ನಡೆದ ಟ್ರಯಲ್ಸ್ ನಲ್ಲಿ ಪಾಲ್ಗೊಂಡ ಕೆಲವು ಆಟಗಾರರನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗುತ್ತದೆ. ಅಂತಿಮವಾಗಿ ಇಬ್ಬರಿಗೆ ಈ ಬಾರಿಯ ಕೆಪಿಎಲ್ ನಲ್ಲಿ ವಾರಿಯರ್ಸ್ ತಂಡದಲ್ಲಿ ಸ್ಥಾನ ಲಭಿಸಲಿದೆ.
2017 ರಲ್ಲಿ ನಡೆಸಿದ್ದ ನಾಲ್ಕನೇ ಅವೃತ್ತಿಯ ಪ್ರತಿಭಾನ್ವೇಷಣೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 205 ಆಟಗಾರರು ಪಾಲ್ಗೊಂಡಿದ್ದರು. ಇದರಲ್ಲಿ 43 ಮಂದಿ ಆಂತಿಮ ಸುತ್ತಿಗೆ ಆಯ್ಕೆಯಾಗಿದ್ದರು.

'ಮೈಸೂರು ವಾರಿಯರ್ಸ್ ವತಿಯಿಂದ ನಡೆಸುವ ಪ್ರತಿಭಾನ್ವೇಷಣೆಗೆ ಪ್ರತಿವರ್ಷದಂತೆ ಈ ವರ್ಷವೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆದ ಪ್ರತಿಭಾನ್ವೇಷಣೆಯಲ್ಲಿ ಸುಮಾರು 500 ಯುವ ಆಟಗಾರರು ಪಾಲ್ಗೊಂಡಿದ್ದಾರೆ' ಎಂದು ತಂಡದ ಮಾಲೀಕ ಅರ್ಜುನ್ ರಂಗ ತಿಳಿಸಿದ್ದಾರೆ.

ವಾರಿಯರ್ಸ್ ತಂಡದ ಮ್ಯಾನೇಜರ್ ಎಂ.ಆರ್.ಸುರೇಶ್ ಮತ್ತು ಕೋಚ್ ಆರ್.ಎಕ್ಸ್.ಮುರಳಿ ಅವರು ಆಯ್ಕೆ ಟ್ರಯಲ್ಸ್ ನಡೆಸಿಕೊಟ್ಟರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications