Chamundi Hill: ಚಾಮುಂಡೇಶ್ವರಿ ಭಕ್ತರಿಗಾಗಿ ಸಿದ್ಧವಾಗಿದೆ 25 ಸಾವಿರ ಮೈಸೂರು ಪಾಕ್
ಮೈಸೂರು: ಪ್ರತಿ ವರ್ಷದಂತೆ ಈ ಬಾರಿಯೂ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಜುಲೈ 12ರ ಮೊದಲ ಆಷಾಢ ಶುಕ್ರವಾರದಂದು ಭಕ್ತರಿಗೆ ವಿತರಿಸಲು 25 ಸಾವಿರ ಮೈಸೂರು ಪಾಕ್ ತಯಾರಿಸಲಾಗುತ್ತಿದೆ.
ಜುಲೈ 12ರ ಮೊದಲ ಆಷಾಢ ಶುಕ್ರವಾರದಂದು ಬೆಳಗ್ಗೆ 6 ರಿಂದ 10 ಗಂಟೆವರೆಗೆ ಉಪಾಹಾರ ಇರಲಿದ್ದು, ಪೊಂಗಲ್, ಇಡ್ಲಿ, ಚಟ್ನಿ ನೀಡಲಾಗುತ್ತದೆ. 11 ಗಂಟೆಗೆ ಊಟ ಬಡಿಸಲು ಆರಂಭಿಸಲಿದ್ದು, ಬಿಸಿ ಬೇಳೆ ಬಾತ್, ಅನ್ನ, ಸಾಂಬಾರ್, ಪಲ್ಯ, ಕೋಸಂಬರಿ, ಲಾಡು, ಮೈಸೂರು ಪಾಕ್ ನೀಡಲಾಗುವುದು ಎಂದು ಸಮಿತಿ ಮುಖ್ಯಸ್ಥ ನಾಗೇಶ್ ಮತ್ತು ಎನ್.ಅರುಣ್ ಕುಮಾರ್ ಜೈನ್ ತಿಳಿಸಿದ್ದಾರೆ.

ಸಮಿತಿ ವತಿಯಿಂದ 25 ಸಾವಿರ ಭಕ್ತರಿಗೆ ಅನ್ನದಾಸೋಹ ಏರ್ಪಡಿಸಲಾಗಿದೆ. ಅಲ್ಲದೆ, ಈ ಬಾರಿ ಊಟಕ್ಕೆ ಮೈಸೂರು ಪಾಕ್ ನೀಡಲಾಗುತ್ತಿದ್ದು, ನಗರದ ನಿತ್ಯಾನಂದ ಕಲ್ಯಾಣ ಮಂಟಪದಲ್ಲಿ ತಯಾರಿ ಕಾರ್ಯ ನಡೆಯುತ್ತಿದೆ. 40 ಬಾಣಸಿಗರು 500 ಕೆ ಜಿ ಕಡ್ಲೆ ಹಿಟ್ಟು, 500 ಕೆಜಿ ಸಕ್ಕರೆ, ನಂದಿನಿ ತುಪ್ಪ, ಎಣ್ಣೆ ಇನ್ನಿತರ ಸಾಮಗ್ರಿ ಬಳಸಿ ಮೈಸೂರು ಪಾಕ್ ತಯಾರಿಯಲ್ಲಿ ತೊಡಗಿದ್ದಾರೆ.
ನಮ್ಮ ಸೇವಾ ಸಂಸ್ಥೆ ವತಿಯಿಂದ ಕಳೆದ 18 ವರ್ಷಗಳಿಂದ ಅನ್ನದಾಸೋಹ ಮಾಡಲಾಗುತ್ತಿದೆ. ಪ್ರತಿ ವರ್ಷ ಮೊದಲ ಆಷಾಢ ಶುಕ್ರವಾರ ಪ್ರಸಾದ ವಿನಿಮಯ ಮಾಡುತ್ತಿದ್ದೇವೆ. ನಮ್ಮ ಸೇವಾ ಸಮಿತಿಯಲ್ಲಿ 130 ಜನ ಇದ್ದೇವೆ. ನಾವೇ ಚಂದಾ ಹಾಕಿ ಹಣ ಸಂಗ್ರಹಿಸಿ ಪ್ರತಿ ವರ್ಷ ಪ್ರಸಾದ ವಿನಿಯೋಗ ಮಾಡುವ ಕೆಲಸ ಮಾಡುತ್ತಾ ಬಂದಿದ್ದೇವೆ. ತಾಯಿ ಚಾಮುಂಡೇಶ್ವರಿ ಮತ್ತಷ್ಟು ಶಕ್ತಿ ಕೊಟ್ಟರೆ ಆಷಾಢ ಮಾಸ ಮುಗಿಯುವವರೆಗೂ ಸೇವೆ ಮಾಡುವ ಹಂಬಲವಿದೆ ಎಂದು ತಿಳಿಸಿದ್ದಾರೆ.
ಪ್ಲಾಸ್ಟಿಕ್ ಮುಕ್ತ ಆಷಾಢ
ಈ ಬಾರಿ ಚಾಮುಂಡಿಬೆಟ್ಟದಲ್ಲಿ ಪ್ಲಾಸ್ಟಿಕ್ ಮುಕ್ತ ಆಷಾಢ ಆಚರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದ್ದು, ಇದಕ್ಕಾಗಿ 200ಕ್ಕೂ ಹೆಚ್ಚು ಗ್ರೀನ್ ವಾರಿಯರ್ಸ್ಗಳನ್ನು ನೇಮಿಸಿದೆ. ಬೆಟ್ಟದ ಸುತ್ತಮುತ್ತ ಎಲ್ಲಿಯೂ ಪ್ಲಾಸ್ಟಿಕ್ ಬೀಳದಂತೆ ಈ ಗ್ರೀನ್ಸ್ ವಾರಿಯರ್ಸ್ಗಳು ನಿಗಾ ವಹಿಸಲಿದ್ದಾರೆ.
ರಾಜ್ಯದ ಪ್ರಮುಖ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಅದರಲ್ಲೂ ಆಷಾಢ ಮಾಸದಲ್ಲಿ ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯುತ್ತಾರೆ.
ಆಗಮಿಸುವ ಭಕ್ತರು ಪ್ಲಾಸ್ಟಿಕ್ ಬಾಟಲ್, ಪ್ಲಾಸ್ಟಿಕ್ ಕವರ್ಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗುತ್ತಿದ್ದರು. ಇದರಿಂದ ಬೆಟ್ಟದಲ್ಲಿ ಪ್ಲಾಸ್ಟಿಕ್ ತ್ಯಾಜ್ಯದ ರಾಶಿಯೇ ಸೃಷ್ಟಿಯಾಗುತ್ತಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ಈ ಬಾರಿ ಗ್ರೀನ್ ವಾರಿಯರ್ಸ್ಗಳನ್ನು ಸ್ವಚ್ಛತೆಗೆ ನೇಮಿಸಿಕೊಂಡು ಪ್ಲಾಸ್ಟಿಕ್ ಮುಕ್ತ ಆಷಾಢ ಆಚರಿಸಲು ತೀರ್ಮಾನಿಸಿದೆ.
ಏನಿದು ಗ್ರೀನ್ ವಾರಿಯರ್ಸ್?
ಮೈಸೂರಿನಲ್ಲಿ ಸ್ವಚ್ಛತೆ ಪರ ಹಾಗೂ ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಸಾಕಷ್ಟು ಸಂಘ, ಸಂಸ್ಥೆಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿವೆ. ಹಾಗಾಗಿ, ಜಿಲ್ಲಾಡಳಿತ ಇಂತಹ ಸಂಘ, ಸಂಸ್ಥೆಗಳ ಸದಸ್ಯರುಗಳನ್ನೇ ಬಳಸಿಕೊಂಡು ಪ್ಲಾಸ್ಟಿಕ್ ಮುಕ್ತ ಆಷಾಢ ನಡೆಸಲು ತೀರ್ಮಾನಿಸಿದೆ. ನಗರದ 200ಕ್ಕೂ ಹೆಚ್ಚು ಸ್ವಯಂಸೇವಕರನ್ನು 'ಗ್ರೀನ್ ವಾರಿಯರ್ಸ್' ಎಂದು ನೇಮಕ ಮಾಡಿಕೊಳ್ಳಲಾಗಿದೆ. ಇವರು ಭಕ್ತರು ಬಸ್ ಹತ್ತುವುದರಿಂದ ಹಿಡಿದು ಬೆಟ್ಟಕ್ಕೆ ಹೋಗಿ ವಾಪಸ್ ಬರುವವರೆಗೂ ಪ್ಲಾಸ್ಟಿಕ್ ಬೀಳದಂತೆ ಜಾಗೃತಿ ಉಂಟು ಮಾಡಲಿದ್ದಾರೆ. ಇವರಿಗೆ ಪೊಲೀಸರು ಕೂಡ ಜೊತೆ ನೀಡುತ್ತಾರೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications